ಸಿಸೋಡಿಯಾ ಜೊತೆಗೆ ಕೌನ್ಸಿಲರ್ ರಾಮಚಂದ್ರ ಫೋಟೋ 
ದೇಶ

ಬಿಜೆಪಿ ಸೇರಿದ್ದ ದೆಹಲಿ ಕೌನ್ಸಿಲರ್ ಮತ್ತೆ AAP ಗೆ ವಾಪಾಸ್!

ತಾನು ಬಿಜೆಪಿಗೆ ಸೇರಿದ್ದು ದೊಡ್ಡ ತಪ್ಪು, ಆದರೆ ಈಗ ಅವರು ತಮ್ಮ ಕುಟುಂಬಕ್ಕೆ ಮರಳಲು, ತಪ್ಪನ್ನು ಸರಿಪಡಿಸಿಕೊಳ್ಳಲು ಬಯಸಿದ್ದೇನೆ.

ನವದೆಹಲಿ: ಈ ವಾರದ ಆರಂಭದಲ್ಲಿ ಎಎಪಿ ತೊರೆದು ಬಿಜೆಪಿ ಸೇರಿದ್ದ ಐವರು ಕೌನ್ಸಿಲರ್ ಗಳ ಪೈಕಿ ಒಬ್ಬರು ಗುರುವಾರ ಮತ್ತೆ ಮಾತೃ ಪಕ್ಷಕ್ಕೆ ವಾಪಾಸ್ಸಾಗಿದ್ದಾರೆ.

ತನ್ನ ತಪ್ಪು ನಿರ್ಧಾರವನ್ನು ಸರಿಪಡಿಸಿಕೊಳ್ಳಲು ಬಯಸುವುದಾಗಿ ವಾರ್ಡ್ ನಂಬರ್ 28ರ ಕೌನ್ಸಿಲರ್ ರಾಮಚಂದ್ರ ಹೇಳಿದ್ದಾರೆ. ಇವರು ಬವಾನಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಸಂಸದರಾದ ಸಂಜಯ್ ಸಿಂಗ್ ಸಂದೀಪ್ ಪಾಠಕ್ ಸೇರಿದಂತೆ ಎಎಪಿಯ ಹಿರಿಯ ನಾಯಕರನ್ನು ಭೇಟಿಯಾಗಿರುವ ರಾಮಚಂದ್ರ, ತಾನು ಬಿಜೆಪಿಗೆ ಸೇರಿದ್ದು ದೊಡ್ಡ ತಪ್ಪು, ಆದರೆ ಈಗ ಅವರು ತಮ್ಮ ಕುಟುಂಬಕ್ಕೆ ಮರಳಲು, ತಪ್ಪನ್ನು ಸರಿಪಡಿಸಿಕೊಳ್ಳಲು ಬಯಸಿರುವುದಾಗಿ ತಿಳಿಸಿದ್ದಾರೆ.

ಮತ್ತೊಂಡೆದೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಮಾಹಿತಿ ಹಂಚಿಕೊಂಡಿರುವ ಸಿಸೋಡಿಯಾ, ಆಮ್ ಆದ್ಮಿ ಪಕ್ಷದ ಸಹೋದ್ಯೋಗಿ ಮತ್ತು ಬವನ ವಿಧಾನಸಭಾ ಮಾಜಿ ಶಾಸಕ ರಾಮಚಂದ್ರ ಅವರನ್ನು ಭೇಟಿ ಮಾಡಿದ್ದು, ಅವರು ತಮ್ಮ ಆಮ್ ಆದ್ಮಿ ಕುಟುಂಬಕ್ಕೆ ಮರಳಿದ್ದಾರೆ. ರಾಮಚಂದ್ರ ಅವರನ್ನು ಕೆಲವರು ದಾರಿ ತಪ್ಪಿಸಿದ್ದಾರೆ ಎಂದು ಹೇಳಿದ್ದಾರೆ.

‘ಕೆಲವರು ನನ್ನನ್ನು ದಾರಿ ತಪ್ಪಿಸಿದ ರೀತಿ ಮುಂದೆಯೂ ಅವರ ಪ್ರಭಾವಕ್ಕೆ ಒಳಗಾಗುವುದಿಲ್ಲ ಎಂದು ಸಿಸೋಡಿಯಾ ಮತ್ತಿತರ ಇತರ ಹಿರಿಯ ನಾಯಕರ ಸಮ್ಮುಖದಲ್ಲಿ ರಾಮಚಂದ್ರ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT