ಚಂದ್ರಬಾಬು ನಾಯ್ಡು - ಜಗನ್ ಮೋಹನ್ ರೆಡ್ಡಿ 
ದೇಶ

ಜಗನ್‌ಗೆ ಭಾರೀ ಹಿನ್ನಡೆ: YSRP ಪಕ್ಷದ ಇಬ್ಬರು ರಾಜ್ಯಸಭಾ ಸದಸ್ಯರು ರಾಜೀನಾಮೆ; ಟಿಡಿಪಿ ಸೇರುವ ಸಾಧ್ಯತೆ

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರು ವೈಎಸ್‌ಆರ್‌ಸಿಪಿಯ ಇಬ್ಬರು ಸಂಸದರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ನವದೆಹಲಿ: ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಗೆ ಭಾರಿ ಹಿನ್ನಡೆಯಾಗಿದ್ದು, ವೈಎಸ್‌ಆರ್‌ಸಿಪಿಯ ಇಬ್ಬರು ರಾಜ್ಯಸಭಾ ಸದಸ್ಯರಾದ ಬೀಡಾ ಮಸ್ತಾನ್ ರಾವ್ ಜಾಧವ್ ಮತ್ತು ವೆಂಕಟರಮಣ ರಾವ್ ಮೋಪಿದೇವಿ ಅವರು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸಂಸದೀಯ ಮೂಲಗಳು ಶುಕ್ರವಾರ ತಿಳಿಸಿವೆ.

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರು ವೈಎಸ್‌ಆರ್‌ಸಿಪಿಯ ಇಬ್ಬರು ಸಂಸದರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಮಸ್ತಾನ್ ರಾವ್ ಅವರ ಅವಧಿ ಜೂನ್ 2028 ರಲ್ಲಿ ಕೊನೆಗೊಳ್ಳಲಿದ್ದು, ಟಿಡಿಪಿಯಿಂದ ವೈಎಸ್‌ಆರ್‌ಸಿಪಿಗೆ ಬಂದಿದ್ದರು. ಈಗ ಮತ್ತೆ ಟಿಡಿಪಿಗೆ ಹೋಗುವ ಸಾಧ್ಯತೆ ಇದೆ.

ಇನ್ನು ಮೋಪಿದೇವಿ ಅವರ ರಾಜ್ಯಸಭಾ ಅವಧಿ ಜೂನ್ 2026 ರವರೆಗೆ ಇದ್ದು, ಅವರು ಸಹ ಟಿಡಿಪಿಗೆ ಸೇರಬಹುದು ಎಂದು ಮೂಲಗಳು ತಿಳಿಸಿವೆ.

ಮೋಪಿದೇವಿ ಮತ್ತು ಮಸ್ತಾನ್ ರಾವ್ ಇಬ್ಬರೂ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ನೇತೃತ್ವದಲ್ಲಿ ರಾಜ್ಯದ ಅಭಿವೃದ್ಧಿಗಾಗಿ ಕೆಲಸ ಮಾಡಲು ಬಯಸುತ್ತೇವೆ ಎಂದು ಹೇಳಿದ್ದಾರೆ.

ಈ ಇಬ್ಬರು ನಾಯಕರು ಇತ್ತೀಚೆಗೆ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿ ಪಕ್ಷಕ್ಕೆ ಸೇರುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.

ಟಿಡಿಪಿಯು ಮಸ್ತಾನ್ ರಾವ್ ಅವರನ್ನು ರಾಜ್ಯಸಭೆಗೆ ಮರು ನಾಮನಿರ್ದೇಶನ ಮಾಡಬಹುದು. ಆದರೆ ಮೋಪಿದೇವಿ ಅವರು ಯಾವುದೇ ಷರತ್ತುಗಳಿಲ್ಲದೆ ಟಿಡಿಪಿಗೆ ಸೇರಲು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT