ಸಿಎಂ ಮಮತಾ ಬ್ಯಾನರ್ಜಿ(ಸಂಗ್ರಹ ಚಿತ್ರ) 
ದೇಶ

BJP ವಿರುದ್ಧ ಮಾತನಾಡಿದ್ದೇನೆಯೇ ವಿನಃ ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಒಂದು ಪದವನ್ನೂ ಹೇಳಿಲ್ಲ: ಸಿಎಂ ಮಮತಾ ಬ್ಯಾನರ್ಜಿ

ನಾನು ಬಿಜೆಪಿ ವಿರುದ್ಧ ಮಾತನಾಡಿದ್ದೇನೆ. ಏಕೆಂದರೆ ಕೇಂದ್ರ ಸರ್ಕಾರದ ಬೆಂಬಲದೊಂದಿಗೆ ನಮ್ಮ ರಾಜ್ಯದಲ್ಲಿ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಒಡ್ಡುತ್ತಿದ್ದಾರೆ. ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ.

ಕೋಲ್ಕತಾ: ಬಿಜೆಪಿ ವಿರುದ್ಧ ಮಾತನಾಡಿದ್ದೇನೆಯೇ ವಿನಃ ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಒಂದು ಪದವನ್ನೂ ಹೇಳಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಗುರುವಾರ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಬರೆದುಕೊಂಡಿರುವ ಮಮತಾ ಅವರು, ನಾನು ನಿನ್ನೆ ನಮ್ಮ ವಿದ್ಯಾರ್ಥಿಗಳ ಕಾರ್ಯಕ್ರಮದಲ್ಲಿ ಮಾಡಿದ ಭಾಷಣದಲ್ಲಿ ಉಲ್ಲೇಖಿಸಿದ ಕೆಲವು ವಿಷಯಗಳನ್ನು ಮುದ್ರಣ, ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮಗಳಲ್ಲಿ ದುರುದ್ದೇಶದೊಂದಿಗೆ ತಪ್ಪು ಮಾಹಿತಿ ಹಂಚಿದ್ದಾರೆ, ಆದರೆ, ನಾನು ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಒಂದೇ ಒಂದು ಪದವನ್ನೂ ಹೇಳಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ವೈದ್ಯಕೀಯ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಅವರ ಹೋರಾಟ ಪ್ರಾಮಾಣಿಕವಾಗಿದೆ. ನಾನು ಅವರಿಗೆ ಬೆದರಿಕೆ ಹಾಕಿಲ್ಲ. ಆದರೆ ಈ ಕುರಿತು ನನ್ನ ಮೇಲೆ ಆಪಾದನೆ ಹೊರಿಸಲಾಗಿದ್ದು, ಇದು ಸತ್ಯಕ್ಕೆ ದೂರವಾದ ಮಾತು ಎಂದು ಹೇಳಿದ್ದಾರೆ.

ನಾನು ಬಿಜೆಪಿ ವಿರುದ್ಧ ಮಾತನಾಡಿದ್ದೇನೆ. ಏಕೆಂದರೆ ಕೇಂದ್ರ ಸರ್ಕಾರದ ಬೆಂಬಲದೊಂದಿಗೆ ನಮ್ಮ ರಾಜ್ಯದಲ್ಲಿ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಒಡ್ಡುತ್ತಿದ್ದಾರೆ. ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ನಾನು ಅವರ ವಿರುದ್ಧ ಧ್ವನಿ ಎತ್ತಿದ್ದೇನೆ. ಶ್ರೀ ರಾಮಕೃಷ್ಣ ಪರಮಹಂಸರ ಹೇಳಿಕೆಯನ್ನು ನಾನು ಭಾಷಣದಲ್ಲಿ ಉಲ್ಲೇಖಿಸಿದ್ದೇನೆ. ಒಮ್ಮೊಮ್ಮೆ ಧ್ವನಿ ಎತ್ತುವ ಅಗತ್ಯವಿದೆ ಎಂದು ಸಂತರು ಹೇಳಿದ್ದರು. ಅಪರಾಧ ಹಾಗೂ ಕ್ರಿಮಿನಲ್ ಅಪರಾಧಗಳು ನಡೆದಾಗ ಪ್ರತಿಭಟನೆಯ ಧ್ವನಿ ಎತ್ತಬೇಕು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT