ಪ್ರಧಾನಿ ಮೋದಿ, ಮಮತಾ ಬ್ಯಾನರ್ಜಿ 
ದೇಶ

ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿ ಕಠಿಣ ಕಾನೂನು ಜಾರಿಗೊಳಿಸಿ: ಪ್ರಧಾನಿ ಮೋದಿಗೆ ಮತ್ತೊಮ್ಮೆ ಪತ್ರ ಬರೆದ ದೀದಿ

ಅತ್ಯಾಚಾರ ಮತ್ತು ಕೊಲೆಯಂತಹ ಘೋರ ಅಪರಾಧಗಳಿಗೆ ಕಠಿಣ ಕಾನೂನು ಮತ್ತು ಇತರರಿಗೆ ಪಾಠವಾಗುವಂತಹ ಶಿಕ್ಷೆ ಜಾರಿಗೆ ತನ್ನಿ ಎಂದು ಮಮತಾ ಬ್ಯಾನರ್ಜಿ ಮನವಿ ಮಾಡಿದ್ದಾರೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತೊಮ್ಮೆ ಪತ್ರ ಬರೆದಿದ್ದು, ಅತ್ಯಾಚಾರ ಮತ್ತು ಕೊಲೆಯಂತಹ ಘೋರ ಅಪರಾಧಗಳಿಗೆ ಕಠಿಣ ಕಾನೂನು ಮತ್ತು ಇತರರಿಗೆ ಪಾಠವಾಗುವಂತಹ ಶಿಕ್ಷೆ ಜಾರಿಗೆ ತನ್ನಿ ಎಂದು ಮನವಿ ಮಾಡಿದ್ದಾರೆ.

ಆಗಸ್ಟ್ 9 ರಂದು ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯರೊಬ್ಬರ ಅತ್ಯಾಚಾರ ಮತ್ತು ಹತ್ಯೆಯ ಕುರಿತು ರಾಷ್ಟ್ರವ್ಯಾಪಿ ಆಕ್ರೋಶದ ನಂತರ ಈ ವಿಷಯದ ಬಗ್ಗೆ ಕೆಲವು ದಿನಗಳ ಹಿಂದೆ ಮೋದಿಗೆ ಪತ್ರ ಬರೆದಿದ್ದ ಮಮತಾ ಬ್ಯಾನರ್ಜಿ, ಅತ್ಯಾಚಾರ ಪ್ರಕರಣಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಲು ಕಡ್ಡಾಯ ನಿಬಂಧನೆ ಜಾರಿಗೆ ತರಬೇಕು ಎಂದು ಕೋರಿದ್ದರು.

ಅತ್ಯಾಚಾರಿಗಳಿಗೆ ಮರಣದಂಡನೆಯನ್ನು ಖಚಿತಪಡಿಸಿಕೊಳ್ಳಲು ಅಸ್ತಿತ್ವದಲ್ಲಿರುವ ಕಾನೂನುಗಳಿಗೆ ತಿದ್ದುಪಡಿ ಮಾಡಲು ಮುಂದಿನ ವಾರ ವಿಧಾನಸಭೆ ಅಧಿವೇಶನ ಕರೆದಿದ್ದು, ಮಸೂದೆ ಮಂಡಿಸಿ ಅಂಗೀಕರಿಸಲಾಗುವುದು ಎಂದು ಪಶ್ಚಿಮ ಬಂಗಾಳ ಸಿಎಂ ಬುಧವಾರ ಹೇಳಿದ್ದರು.

ತಾವು ಬರೆದ ಪತ್ರಕ್ಕೆ ಪ್ರಧಾನಿಯಿಂದ ಇನ್ನೂ ಯಾವುದೇ ಉತ್ತರವನ್ನು ಸ್ವೀಕರಿಸಿಲ್ಲ ಎಂದು ಹೇಳಿದ ಮಮತಾ ಬ್ಯಾನರ್ಜಿ, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಿಂದ ಪ್ರತಿಕ್ರಿಯೆ ಸ್ವೀಕರಿಸಿದ್ದೇನೆ ಎಂದು ಬರೆದಿದ್ದಾರೆ.

10 ವಿಶೇಷ POCSO(ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) ನ್ಯಾಯಾಲಯಗಳನ್ನು ರಾಜ್ಯ ಸರ್ಕಾರ ಅನುಮೋದಿಸಿದೆ ಎಂದು ಸಿಎಂ ಪತ್ರದಲ್ಲಿ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ 88 ಫಾಸ್ಟ್ ಟ್ರಾಕ್ ವಿಶೇಷ ನ್ಯಾಯಾಲಯಗಳು ಮತ್ತು 62 POCSO- ನ್ಯಾಯಾಲಯಗಳು ಈಗಾಗಲೇ ರಾಜ್ಯದ ನಿಧಿಯ ಮೇಲೆ ಕಾರ್ಯನಿರ್ವಹಿಸುತ್ತಿವೆ ಎಂದು ಅವರು ಉಲ್ಲೇಖಿಸಿದ್ದಾರೆ.

ಅತ್ಯಾಚಾರ ಎಸಗುವ ಅಪರಾಧಿಗಳಿಗೆ ಇತರರಿಗೆ ಪಾಠವಾಗುವಂತಹ ಶಿಕ್ಷೆ ನೀಡಲು ಕಠಿಣ ಕಾನೂನನ್ನು ಜಾರಿಗೊಳಿಸಬೇಕು ಮತ್ತು ಸಂತ್ರಸ್ತರಿಗೆ ತ್ವರಿತ ನ್ಯಾಯ ಒದಗಿಸಲು ಈ ಪ್ರಕರಣಗಳನ್ನು ಫಾಸ್ಟ್ ಟ್ರಾಕ್ ಕೋರ್ಟ್ ಮೂಲಕ 15 ದಿನದಲ್ಲಿ ವಿಚಾರಣೆ ಮುಗಿಸಬೇಕು ಎಂದು ಮಮತಾ ಬ್ಯಾನರ್ಜಿ ಈ ಹಿಂದೆ ಮೋದಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT