ಪ್ರಹ್ಲಾದ್ ಜೋಷಿ 
ದೇಶ

ಗಣೇಶ ಹಬ್ಬಕ್ಕೆ ರಾಜ್ಯದ ರೈತರಿಗೆ ಕೇಂದ್ರದ ಬಂಪರ್ ಗಿಫ್ಟ್: ಬೆಂಬಲ ಬೆಲೆಯಲ್ಲಿ ಸೋಯಾಬಿನ್- ಉದ್ದಿನಕಾಳು​ ಖರೀದಿಗೆ ಅನುಮತಿ

ರಾಜ್ಯದಲ್ಲಿ ಹೆಸರು, ಸೂರ್ಯಕಾಂತಿ ಜತೆಗೆ ಈಗ ಉದ್ದು ಮತ್ತು ಸೋಯಾಬಿನ್​ ಅನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ನಿರ್ದೇಶಿಸಿದೆ ಎಂದು ಹೇಳಿದ್ದಾರೆ.

ನವದೆಹಲಿ: ರಾಜ್ಯದಲ್ಲಿ ಮತ್ತೆರೆಡು ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ರಾಜ್ಯದಲ್ಲಿ ಹೆಸರು, ಸೂರ್ಯಕಾಂತಿ ಜತೆಗೆ ಈಗ ಉದ್ದು ಮತ್ತು ಸೋಯಾಬಿನ್​ ಅನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ನಿರ್ದೇಶಿಸಿದೆ ಎಂದು ಹೇಳಿದ್ದಾರೆ.

ಹೆಸರು ಕಾಳು ಮತ್ತು ಸೂರ್ಯಕಾಂತಿಗೆ ಬೆಂಬಲ ಬೆಲೆ ಘೋಷಿಸಿ ರಾಜ್ಯದಲ್ಲಿ ಖರೀದಿ ಕೇಂದ್ರ ತೆರೆಯುತ್ತಿದ್ದಂತೆಯೇ ಕೇಂದ್ರ ಕೃಷಿ ಸಚಿವಾಲಯ ಇದೀಗ "ಉದ್ದು ಮತ್ತು ಸೋಯಾಬೀನ್​"ಗೂ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ. ಕರ್ನಾಟಕದಲ್ಲಿ 2024-25ರ ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ 19,760 ಮೆಟ್ರಿಕ್​ ಟನ್​ ಉದ್ದು ಹಾಗೂ 1,03,315 ಮೆಟ್ರಿಕ್​ ಟನ್​ ಸೋಯಾಬಿನ್ ಖರೀದಿಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ". ಮುಕ್ತ ಮಾರುಕಟ್ಟೆಯಲ್ಲಿ ಈ ಬೆಳೆಗಳಿಗೆ ಬೆಲೆ ಕಡಿಮೆ ಇರುವುದರಿಂದ ಕನಿಷ್ಠ ಬೆಂಬಲ ಬೆಲೆ ಅಡಿ ಖರೀದಿಸಿ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ 90 ದಿನಗಳ ಅವಧಿಗೆ ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆ ಯೋಜನೆಯಡಿ ಉದ್ದು ಮತ್ತು ಸೋಯಾಬೀನ್​​ ಖರೀದಿಸುವಂತೆ ಕೇಂದ್ರ ಕೃಷಿ ಸಚಿವಾಲಯ ರಾಜ್ಯ ಸರ್ಕಾರಕ್ಕೆ ನಿನ್ನೆಯೇ (ಆ.29) ಆದೇಶ ಹೊರಡಿಸಿದೆ".

ನಾಲ್ಕೈದು ದಿನಗಳ ಹಿಂದಷ್ಟೇ ಹೆಸರು ಮತ್ತು ಸೂರ್ಯಕಾಂತಿ ಬೆಳೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಅನುಮತಿ ನೀಡಿದ್ದ ಕೇಂದ್ರ ಸರ್ಕಾರ, ಇದೀಗ ಉದ್ದು ಮತ್ತು ಸೋಯಾಬಿನ್ ಅನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸಲು ಅನುಮೋದನೆ ನೀಡಿದೆ. ಈ ಮೂಲಕ ರಾಜ್ಯದ ರೈತರಿಗೆ ಗಣೇಶ ಹಬ್ಬದ ಗಿಫ್ಟ್ ನೀಡಿದೆ ಎಂದಿದ್ದಾರೆ ಸಚಿವ ಜೋಶಿ. ರಾಜ್ಯದ ರೈತರ ಸಮಸ್ಯೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್​ ನಿರಂತರ ಸ್ಪಂದಿಸುತ್ತಲೇ ಬಂದಿದ್ದಾರೆ. ಇದೀಗ ನಾಲ್ಕು ಬೆಳೆಗಳಿಗೆ ಬೆಂಬಲ ಬೆಳೆ ಖರೀದಿ ಕೇಂದ್ರ ತೆರೆಯಲು ಅನುಮತಿ ನೀಡಿದ್ದಾರೆ ಎಂದ ಪ್ರಹ್ಲಾದ್​ ಜೋಶಿ ಅವರಿಗೆ ಧನ್ಯವಾದ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT