ದೇಶ

'ಕೇಂದ್ರದ ಕಾನೂನು ಮತ್ತು ನಿಯಮಗಳನ್ನು ಪಾಲಿಸಿ': ಸಿಎಂ ಮಮತಾ ಬ್ಯಾನರ್ಜಿಗೆ ಕೇಂದ್ರ ಮಹಿಳಾ ಖಾತೆ ಸಚಿವೆ ಉತ್ತರ

ಪಶ್ಚಿಮ ಬಂಗಾಳವು 88 ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳನ್ನು (FTC) ಸ್ಥಾಪಿಸಿದೆ, ಇದು ಕೇಂದ್ರ ಸರ್ಕಾರದ ಯೋಜನೆಯಡಿ ಒಳಗೊಂಡಿರುವ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯಗಳಿಗೆ ಸಮವಲ್ಲ (FTSCs) 0ಎಂದು ಹೇಳಿದರು.

ನವದೆಹಲಿ: ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಅಪರಾಧಗಳನ್ನು ನಿಭಾಯಿಸಲು ಅಸ್ತಿತ್ವದಲ್ಲಿರುವ ಕಾನೂನುಗಳು ಸಾಕಷ್ಟು ಕಠಿಣವಾಗಿವೆ ಎಂದು ಕೇಂದ್ರ ಸಚಿವೆ ಅನ್ನಪೂರ್ಣ ದೇವಿ ಪ್ರತಿಪಾದಿಸಿದ್ದಾರೆ. ಪಶ್ಚಿಮ ಬಂಗಾಳ ಸರ್ಕಾರವು ಅದನ್ನು ಕಟ್ಟುನಿಟ್ಟಿನಿಂದ ಕಾನೂನುಬದ್ಧವಾಗಿ ಜಾರಿಗೆ ತರುವಂತೆ ಒತ್ತಾಯಿಸಿದರು.

ಒಂದೇ ವಾರದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಎರಡನೇ ಪತ್ರ ಬರೆದಿರುವ ಕೇಂದ್ರ ಸಚಿವೆ ಅನ್ನಪೂರ್ಣ ದೇವಿ, ರಾಜ್ಯ ಸರ್ಕಾರವು ಅತ್ಯಾಚಾರ ಮತ್ತು ಪೋಕ್ಸೋ ಪ್ರಕರಣಗಳನ್ನು ನಿರ್ದಿಷ್ಟವಾಗಿ ವ್ಯವಹರಿಸಲು ಹೆಚ್ಚುವರಿ 11 ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯಗಳನ್ನು (FTSC) ಕಾರ್ಯಗತಗೊಳಿಸಿಲ್ಲ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳವು 88 ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳನ್ನು (FTC) ಸ್ಥಾಪಿಸಿದೆ, ಇದು ಕೇಂದ್ರ ಸರ್ಕಾರದ ಯೋಜನೆಯಡಿ ಒಳಗೊಂಡಿರುವ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯಗಳಿಗೆ ಸಮವಲ್ಲ (FTSCs) ಎಂದು ಹೇಳಿದರು.

ಅತ್ಯಾಚಾರ ಮತ್ತು ಕೊಲೆಯಂತಹ ಘೋರ ಅಪರಾಧಗಳಿಗೆ ಕಟ್ಟುನಿಟ್ಟಾದ ಕೇಂದ್ರ ಕಾನೂನು ಶಿಕ್ಷೆ ಜಾರಿಗೆ ತರಬೇಕೆಂದು ನಿನ್ನೆ ಮತ್ತೆ ಪ್ರಧಾನಿ ಮೋದಿಯವರಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪತ್ರ ಬರೆದಿದ್ದರು.

ಆಗಸ್ಟ್ 9 ರಂದು ಕೋಲ್ಕತ್ತಾದ ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಹತ್ಯೆಯ ಬಗ್ಗೆ ರಾಷ್ಟ್ರವ್ಯಾಪಿ ಪ್ರತಿಭಟನೆ, ತೀವ್ರ ವಿರೋಧ ನಂತರ ಈ ವಿಷಯದ ಬಗ್ಗೆ ಕೆಲವು ದಿನಗಳ ಹಿಂದೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದ ಮಮತಾ ಬ್ಯಾನರ್ಜಿ, ಅತ್ಯಾಚಾರ ಪ್ರಕರಣಗಳನ್ನು ಶೀಘ್ರವೇ ಇತ್ಯರ್ಥಪಡಿಸಲು ಕಡ್ಡಾಯ ನಿಬಂಧನೆಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT