ಸಂಗ್ರಹ ಚಿತ್ರ 
ದೇಶ

ಆಘಾತಕಾರಿ ಘಟನೆ: ಮಧ್ಯರಾತ್ರಿ ಬಾಮೈದನನ್ನು ಕೋಣೆಗೆ ಕರೆದು ಮರ್ಮಾಂಗವನ್ನೇ ಕತ್ತರಿಸಿದ ಅತ್ತಿಗೆ!

ಯುವಕ ಕೋಣೆಗೆ ಹೋಗುತ್ತಿದ್ದಂತೆ ಮಹಿಳೆ ಆತನ ಮರ್ಮಾಂಗವನ್ನು ಹರಿತವಾದ ಆಯುಧದಿಂದ ಕತ್ತರಿಸಿದ್ದಾಳೆ. ಯುವಕ ಕೋಣೆಯಲ್ಲೇ ಬಿದ್ದು ನೋವಿನಿಂದ ನರಳುತ್ತ ಜೋರಾಗಿ ಕೂಗಿಕೊಂಡಿದ್ದಾನೆ.

ಸಿಧಿ: ಮಧ್ಯಪ್ರದೇಶದ ಸಿಧಿಯಲ್ಲಿ ಅತ್ತಿಗೆ ತನ್ನ ಬಾಮೈದನ ಖಾಸಗಿ ಅಂಗವನ್ನು ಕತ್ತರಿಸಿದ ಘಟನೆ ಇದೀಗ ಸಂಚಲನ ಮೂಡಿಸಿದೆ. ಘಟನೆಗೂ ಮೊದಲು ಬಾಮೈದನನ್ನು ಕೋಣೆಗೆ ಕರೆದ ಅತ್ತಿಗೆ ಈ ದುಷ್ಕೃತ್ಯ ಎಸೆಗಿದ್ದಾಳೆ.

ಯುವಕ ಕೋಣೆಗೆ ಹೋಗುತ್ತಿದ್ದಂತೆ ಮಹಿಳೆ ಆತನ ಮರ್ಮಾಂಗವನ್ನು ಹರಿತವಾದ ಆಯುಧದಿಂದ ಕತ್ತರಿಸಿದ್ದಾಳೆ. ಯುವಕ ಕೋಣೆಯಲ್ಲೇ ಬಿದ್ದು ನೋವಿನಿಂದ ನರಳುತ್ತ ಜೋರಾಗಿ ಕೂಗಿಕೊಂಡಿದ್ದಾನೆ. ಕೂಡಲೇ ಕುಟುಂಬಸ್ಥರು ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಸಂತ್ರಸ್ತನ ದೂರಿನ ಮೇರೆಗೆ ಮಹಿಳೆ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಯ ಬಳಿಕ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಸಿಧಿ ಜಿಲ್ಲೆಯ ಬುಡಕಟ್ಟು ಪ್ರದೇಶವಾದ ಕುಸ್ಮಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಜಮೀನಿನ ವಿಚಾರವಾಗಿ ಅತ್ತಿಗೆಯೊಂದಿಗೆ ಜಗಳ ನಡೆಯುತ್ತಿದೆ ಎಂದು ಬಾಮೈದ ಹೇಳಿದ್ದಾನೆ. ಪಿತೂರಿಯ ಭಾಗವಾಗಿ, ಆಕೆ ತನ್ನನ್ನು ಮನೆಗೆ ಕರೆದಿದ್ದಳು. ಕೋಣೆಗೆ ಹೋಗಿದ ಕೂಡಲೇ ಅತ್ತಿಗೆ ಹರಿತವಾದ ಆಯುಧದಿಂದ ತನ್ನ ಖಾಸಗಿ ಅಂಗಗಳನ್ನು ಕತ್ತರಿಸಿದ್ದು ರಕ್ತಸ್ರಾವವಾಯಿತು ಎಂದು ಯುವಕ ದೂರಿದ್ದಾನೆ.

ಸದ್ಯ ಯುವಕನ ಸ್ಥಿತಿ ಗಂಭೀರವಾಗಿದ್ದರಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT