ಸಾಂದರ್ಭಿಕ ಚಿತ್ರ 
ದೇಶ

ಇವಿಎಂ ಹ್ಯಾಕ್ ಮಾಡಬಹುದು: ವ್ಯಕ್ತಿಯ ವಿರುದ್ಧ FIR ದಾಖಲು

ಆರೋಪಿ ಸೈಯದ್ ಶುಜಾ ಮಾಡಿರುವ ಆರೋಪಗಳು ಸುಳ್ಳು, ಆಧಾರ ರಹಿತ ಎಂದು ಆರೋಪಿಸಿ ಮಹಾರಾಷ್ಟ್ರದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಅವರು ದೂರು ನೀಡಿದ್ದಾರೆ.

ಮುಂಬೈ: ಮಷಿನ್ ಫ್ರೀಕ್ವೆನ್ಸಿಯನ್ನು ಪ್ರತ್ಯೇಕಿಸುವ ಮೂಲಕ ತಾನು ಕೂಡಾ ಇವಿಎಂಗಳನ್ನು ಹ್ಯಾಕ್ ಮಾಡಬಹುದು ಎಂದು ಹೇಳಿದ್ದ ವ್ಯಕ್ತಿಯ ವಿರುದ್ಧ ಮುಂಬೈ ಸೈಬರ್ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದಾರೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿ ಸೈಯದ್ ಶುಜಾ ಮಾಡಿರುವ ಆರೋಪಗಳು ಸುಳ್ಳು, ಆಧಾರ ರಹಿತ ಎಂದು ಆರೋಪಿಸಿ ಮಹಾರಾಷ್ಟ್ರದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಅವರು ದೂರು ನೀಡಿದ್ದಾರೆ.

ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಮತ್ತು ಐಟಿ ಕಾಯ್ದೆಯಡಿ ದಕ್ಷಿಣ ಮುಂಬೈನ ಸೈಬರ್ ಪೊಲೀಸ್ ಠಾಣೆಯಲ್ಲಿ ನವೆಂಬರ್ 30 ರಂದು ವ್ಯಕ್ತಿಯ ವಿರುದ್ಧ' ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸಿಇಒ ಹೇಳಿದ್ದಾರೆ.

ಮಷಿನ್ ಫ್ರೀಕ್ವೆನ್ಸಿಯನ್ನು ಪ್ರತ್ಯೇಕಿಸುವ ಮೂಲಕ ಚುನಾವಣೆಯಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು (ಇವಿಎಂ) ಹ್ಯಾಕ್ ಮಾಡಬಹುದು ಮತ್ತು ತಿರುಚಬಹುದು ಎಂಬ ವ್ಯಕ್ತಿಯೊಬ್ಬರ ಹೇಳಿಕೆಯ ವೀಡಿಯೊವನ್ನು ಕೆಲವು ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಂಡ ನಂತರ ಚುನಾವಣಾ ಆಯೋಗದ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ. 2019 ರಲ್ಲಿಯೂ ಇದೇ ರೀತಿಯ ಹೇಳಿಕೆ ನೀಡಿದ್ದಕ್ಕಾಗಿ ಶುಜಾ ವಿರುದ್ಧ ಎಫ್‌ಐಆರ್ ದಾಖಲಿಸಲು EC ಆದೇಶಿಸಿತ್ತು.

ಇಂತಹ ಕ್ರಮಗಳು ಗಂಭೀರ ಅಪರಾಧವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೂ ಸುಮ್ಮನೆ ಬಿಡಲಾಗುವುದಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. ಇವಿಎಂಗಳು ವೈಫೈ ಅಥವಾ ಬ್ಲೂಟೂತ್ ಸೇರಿದಂತೆ ಯಾವುದೇ ನೆಟ್‌ವರ್ಕ್‌ಗೆ ಸಂಪರ್ಕಿಸಲಾಗದ ಸ್ವತಂತ್ರ ಯಂತ್ರಗಳಾಗಿವೆ ಎಂದು ಇಸಿ ಸಮರ್ಥಿಸಿಕೊಂಡಿದೆ. ಇವಿಎಂಗಳ ಮೇಲಿನ ನಂಬಿಕೆಯನ್ನು ಸುಪ್ರೀಂ ಕೋರ್ಟ್ ಹಲವು ಸಂದರ್ಭಗಳಲ್ಲಿ ತಳ್ಳಿಹಾಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ