ಬಿಷ್ಣೋಯಿ ಗ್ಯಾಂಗ್‌ 
ದೇಶ

ಬಿಷ್ಣೋಯಿ ಗ್ಯಾಂಗ್‌ನಿಂದ 10 ಕೋಟಿ ರೂ. ಹಣಕ್ಕೆ ಬೇಡಿಕೆ, ಪ್ರಕರಣ ದಾಖಲು

ಬೆಲ್ತಾರಾ ರಸ್ತೆ ನಗರ ಪಂಚಾಯತ್‌ನ ಮಾಜಿ ಅಧ್ಯಕ್ಷ ದಿನೇಶ್ ಕುಮಾರ್ ಗುಪ್ತಾ ಅವರಿಗೆ ಹಣಕ್ಕಾಗಿ ಒತ್ತಾಯಿಸಿ ಪತ್ರ ಬಂದ ನಂತರ ಪೊಲೀಸರನ್ನು ಸಂಪರ್ಕಿಸಿದ್ದಾರೆ

ಬಲ್ಲಿಯಾ: ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನ ಸದಸ್ಯರಿಂದ 10 ಕೋಟಿ ರೂ. ಹಣದ ಬೇಡಿಕೆಯ ಕುರಿತು ಉತ್ತರ ಪ್ರದೇಶದ ಬಲ್ಲಿಯಾದ ನಗರ ಪಂಚಾಯತ್ ಮಾಜಿ ಅಧ್ಯಕ್ಷರು ನೀಡಿದ ದೂರಿನ ಆಧಾರದ ಮೇಲೆ ಅಪರಿಚಿತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಬೆಲ್ತಾರಾ ರಸ್ತೆ ನಗರ ಪಂಚಾಯತ್‌ನ ಮಾಜಿ ಅಧ್ಯಕ್ಷ ದಿನೇಶ್ ಕುಮಾರ್ ಗುಪ್ತಾ ಅವರಿಗೆ ಹಣಕ್ಕಾಗಿ ಒತ್ತಾಯಿಸಿ ಪತ್ರ ಬಂದ ನಂತರ ಪೊಲೀಸರನ್ನು ಸಂಪರ್ಕಿಸಿದ್ದಾರೆ ಎಂದು ಉಭಾನ್ ಪೊಲೀಸ್ ಠಾಣೆಯ ಠಾಣಾಧಿಕಾರಿ ವಿಪಿನ್ ಸಿಂಗ್ ತಿಳಿಸಿದ್ದಾರೆ.

ಈ ಸಂಬಂಧ ಬಿ ಎನ್‌ಎಸ್‌ನ ಸೆಕ್ಷನ್ 351 (4) (ಅನಾಮಧೇಯ ಸಂವಹನದಿಂದ ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಅಪರಿಚಿತ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ವಿಪಿನ್ ಸಿಂಗ್ ಹೇಳಿದರು.

ಪೊಲೀಸರು ದೂರನ್ನು ಸ್ವೀಕರಿಸಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಸ್ರಾ ವಲಯದ ಸರ್ಕಲ್ ಆಫೀಸರ್ (ಸಿಒ) ಮೊಹಮ್ಮದ್ ಫಾಹಿಮ್ ಖುರೇಷಿ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಎರಡು ದಿನಗಳ ಹಿಂದೆ ಅಂಚೆ ಸೇವೆಯ ಮೂಲಕ ಪತ್ರ ಬಂದಿತ್ತು. ಅದರಲ್ಲಿ ಬಿಷ್ಣೋಯಿ ಗ್ಯಾಂಗ್ ಎಂದು ಹೇಳಿಕೊಳ್ಳುವ ಯಾರೋ ವ್ಯಕ್ತಿ 10 ಕೋಟಿ ರೂ. ಹಣವನ್ನು ಪಾವತಿಸುವಂತೆ ಕೇಳಿದ್ದರು ಎಂದು ಗುಪ್ತಾ ಸುದ್ದಿಗಾರರಿಗೆ ತಿಳಿಸಿದರು. ಗುಪ್ತಾ ಉದ್ಯಮಿಯಾಗಿದ್ದು, ಅವರ ಪತ್ನಿ ರೇಣು ಗುಪ್ತಾ ಪ್ರಸ್ತುತ ಬೆಲ್ತಾರ ರಸ್ತೆ ನಗರ ಪಂಚಾಯತ್ ಅಧ್ಯಕ್ಷರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT