ಅಸಾದುದ್ದೀನ್ ಒವೈಸಿ- ನ್ಯಾ.ಡಿ ವೈ ಚಂದ್ರಚೂಡ್ online desk
ದೇಶ

ಅಜ್ಮೀರ್ ದರ್ಗಾ: ನಿವೃತ್ತ ಸಿಜೆಐ ಚಂದ್ರಚೂಡ್ ವಿರುದ್ಧ ಅಸಾದುದ್ದೀನ್ ಓವೈಸಿ ಟೀಕಾಪ್ರಹಾರ

ಬಾಬ್ರಿ ಮಸೀದಿ- ರಾಮ ಜನ್ಮಭೂಮಿಗೆ ಸಂಬಂಧಿಸಿದ ಆದೇಶ ಪ್ರಕಟವಾದಾಗಲೇ ಅದರ ಮುಂದಿನ ಪರಿಣಾಮಗಳ ಬಗ್ಗೆ ತಾವು ಎಚ್ಚರಿಸಿದ್ದಾಗಿ ಹೇಳಿರುವ ಓವೈಸಿ, ನಿವೃತ್ತ ಸಿಜೆಐ ಚಂದ್ರಚೂಡ್ ವಿರುದ್ಧ ಟೀಕೆ ಮಾಡಿದ್ದಾರೆ.

ನವದೆಹಲಿ: ಅಜ್ಮೀರ್ ದರ್ಗಾ ವಿಷಯವಾಗಿ ನಿವೃತ್ತ ಸಿಜೆಐ ಡಿವೈ ಚಂದ್ರಚೂಡ್ ವಿರುದ್ಧ ಅಸಾದುದ್ದೀನ್ ಓವೈಸಿ ಟೀಕಾ ಪ್ರಹಾರ ನಡೆಸಿದ್ದಾರೆ.

ಅಜ್ಮೀರ್ ಷರೀಫ್ ದರ್ಗಾವನ್ನು ಶಿವ ದೇವಾಲಯದ ಮೇಲೆ ನಿರ್ಮಾಣ ಮಾಡಲಾಗಿದೆ, ಈ ಸಂಬಂಧ ಪರಿಶೀಲನೆ ನಡೆಸಲು ಅನುಮತಿ ನೀಡಬೇಕೆಂದು ಕೋರಿದ್ದ ಅರ್ಜಿಯ ವಿಚಾರಣೆ ನಡೆಸಲು ರಾಜಸ್ಥಾನ ಕೋರ್ಟ್ ಒಪ್ಪಿಗೆ ನೀಡಿತ್ತು.

ದರ್ಗಾಗೆ 800 ವರ್ಷಗಳ ಇತಿಹಾಸವಿದೆ. ಇದು ಹೀಗೆಯೆ ಮುಂದುವರೆದಲ್ಲಿ ಇವುಗಳಿಗೆಲ್ಲಾ ಕೊನೆ ಎಲ್ಲಿ? ಎಂದು ಪ್ರಶ್ನಿಸಿದ್ದಾರೆ.

ಅಷ್ಟೇ ಅಲ್ಲದೇ ಬಾಬ್ರಿ ಮಸೀದಿ- ರಾಮ ಜನ್ಮಭೂಮಿಗೆ ಸಂಬಂಧಿಸಿದ ಆದೇಶ ಪ್ರಕಟವಾದಾಗಲೇ ಅದರ ಮುಂದಿನ ಪರಿಣಾಮಗಳ ಬಗ್ಗೆ ತಾವು ಎಚ್ಚರಿಸಿದ್ದಾಗಿ ಹೇಳಿರುವ ಓವೈಸಿ, ನಿವೃತ್ತ ಸಿಜೆಐ ಚಂದ್ರಚೂಡ್ ವಿರುದ್ಧ ಟೀಕೆ ಮಾಡಿದ್ದಾರೆ.

"ನಿವೃತ್ತ ನ್ಯಾಯಾಧೀಶರಾದ ಡಿವೈ ಚಂದ್ರಚೂಡ್ ಅವರು ಅವರ ಅವಧಿಯಲ್ಲಿ ಇಂಥಹ ಪ್ರವೃತ್ತಿಗಳನ್ನು (ಮಂದಿರದ ಮೇಲೆ ಮಸೀದಿ ನಿರ್ಮಿಸಿರುವ ಕುರಿತ ಅರ್ಜಿಗಳು) ತಡೆಗಟ್ಟಿದ್ದರೆ. ಇದಕ್ಕೆಲ್ಲಾ ಕಡಿವಾಣ ಬೀಳುತ್ತಿತ್ತು. ಅವರು ತಮ್ಮ ಅವಧಿಯಲ್ಲಿ ಕೆಲವು ತಪ್ಪು ಮೌಖಿಕ ಅವಲೋಕನಗಳನ್ನು ಮಾಡಿದ್ದಾರೆ. ಆದ್ದರಿಂದ 15 ಪ್ರದೇಶಗಳಲ್ಲಿ ಇಂತಹ ಅರ್ಜಿಗಳು ಬರುತ್ತಿವೆ ಎಂದು ಓವೈಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

"ಅಲಾವುದ್ದೀನ್ ಖಲ್ಜಿಯ ಆಳ್ವಿಕೆಯಲ್ಲಿ 800 ವರ್ಷಗಳ ಹಿಂದೆ ಆ ದರ್ಗಾ ಇದೆ; ಇದನ್ನು 13 ನೇ ಶತಮಾನದಿಂದ ಅಮೀರ್ ಖುಸ್ರೋ ಅವರ ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ ಮತ್ತು 800 ವರ್ಷಗಳ ನಂತರ, ಇದು ದರ್ಗಾ ಅಲ್ಲ ಎಂದು ನೀವು ಹೇಳುತ್ತಿದ್ದೀರಿ. ಏನು ಉಳಿಯುತ್ತದೆ?" ಎಂದು ಪತ್ರಿಕಾಗೋಷ್ಠಿಯಲ್ಲಿ ಓವೈಸಿ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT