ಭೂ ಕುಸಿತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ 
ದೇಶ

ತಿರುವಣ್ಣಾಮಲೈನಲ್ಲಿ ಭೂಕುಸಿತ: ನಾಲ್ಕು ಮೃತದೇಹ ಪತ್ತೆ, ಇತರರ ರಕ್ಷಣೆಗೆ ಕಾರ್ಯಾಚರಣೆ ತೀವ್ರ

ಭಾರೀ ಮಳೆಯಿಂದಾಗಿ ಒಂದೇ ಕುಟುಂಬದ ಏಳು ಸದಸ್ಯರು ಮಣ್ಣಿನಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಇತರರ ರಕ್ಷಣೆಗಾಗಿ ರಕ್ಷಣೆಗಾಗಿ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ.

ತಿರುವಣ್ಣಾಮಲೈ: ಫೆಂಗಲ್ ಚಂಡಮಾರುತದ ಪರಿಣಾಮವಾಗಿ ತಮಿಳನಾಡಿನ ತಿರುವಣ್ಣಾಮಲೈನಲ್ಲಿ ಭೂ ಕುಸಿತ ಸಂಭವಿಸಿದ್ದು, ಅವಶೇಷಗಳಡಿ ನಾಲ್ವರ ಮೃತದೇಹ ಪತ್ತೆಯಾಗಿದೆ.

ಭಾರೀ ಮಳೆಯಿಂದಾಗಿ ಒಂದೇ ಕುಟುಂಬದ ಏಳು ಸದಸ್ಯರು ಮಣ್ಣಿನಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಇತರರ ರಕ್ಷಣೆಗಾಗಿ ರಕ್ಷಣೆಗಾಗಿ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ.

ರಕ್ಷಣಾ ತಂಡವೊಂದು ಸ್ಥಳಕ್ಕೆ ಧಾವಿಸಿದ್ದು, ಸುಮಾರು 20 ಗಂಟೆಯಿಂದ ರಕ್ಷಣಾ ಕಾರ್ಯಾಚರಣೆ ನಡೆತ್ತಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಸಿಬ್ಬಂದಿ, ಕಮಾಂಡೋ, ತಮಿಳುನಾಡಿನ ಅಗ್ನಿ ಶಾಮಕ ದಳ ಸೇರಿದಂತೆ ಸುಮಾರು 170 ಜನರು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೃಹತ್ ಗಾತ್ರದ ಕಲ್ಲುಗಳು ಇರುವುದರಿಂದ ಸಂತ್ರಸ್ತರನ್ನು ಪತ್ತೆ ಹಚ್ಚಲು ಸ್ಕ್ಯಾನಿಂಗ್ ಯಂತ್ರಕ್ಕೆ ಕಷ್ಟವಾಗುತ್ತಿದೆ ಎಂದು ರಕ್ಷಣಾಧಿಕಾರಿ ಸುವಿಕ್ಕೈನ್ ರಾಜ್ TNIE ಗೆ ತಿಳಿಸಿದ್ದಾರೆ.

"ನಾವು ಜೆಸಿಬಿಗಳು ಮತ್ತು ಅಗೆಯುವ ಯಂತ್ರಗಳನ್ನು ತರಲು ಪ್ರಯತ್ನಿಸುತ್ತಿದ್ದೇವೆ. ಆದರೆ ಭಾರವಾದ ದೊಡ್ಡ ದೊಡ್ಡ ಕಲ್ಲುಗಳು ಇರುವುದರಿಂದ ಯಂತ್ರೋಪಕರಣಗಳನ್ನು ನಿರ್ವಹಿಸಲು ಸವಾಲಾಗುತ್ತಿದೆ. ಪರಿಣಾಮ ಕಾರ್ಯಾಚರಣೆ ವಿಳಂಬವಾಗುತ್ತಿದೆ" ಎಂದು ಅಧಿಕೃತ ಮೂಲಗಳು ತಿಳಿಸಿವೆ.

ತಂಡ ಪ್ರಸ್ತುತ ಅವಶೇಷಗಳನ್ನು ತೆರವುಗೊಳಿಸಲು ಅರೆ, ಪಿಕಾಸಿಯಂತಹ ಸರಳ ಸಾಧನಗಳನ್ನು ಬಳಸುತ್ತಿದೆ. ಜೆಸಿಬಿ, ಅಗೆಯುವ ಯಂತ್ರ ತರಲು ಪ್ರಯತ್ನಿಸುತ್ತಿದ್ದೇವೆ, ಆದರೆ ಭಾರವಾದ ಕಲ್ಲುಗಳು ಯಂತ್ರೋಪಕರಣಗಳನ್ನು ನಿರ್ವಹಿಸಲು ಸವಾಲಾಗುತ್ತಿವೆ ಎಂದು ಅಧಿಕೃತ ಮೂಲಗಳು ವಿವರಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT