ಕೇಂದ್ರ ಸಚಿವ ಪಂಕಜ್ ಚೌಧರಿ 
ದೇಶ

ಕೇಂದ್ರದಿಂದ ರಾಜ್ಯಗಳಿಗೆ ವಿಶೇಷ ಅನುದಾನ: 50,571 ಕೋಟಿ ರೂ ಬಿಡುಗಡೆ

ಅರುಣಾಚಲ ಪ್ರದೇಶ, ಹರಿಯಾಣ, ಕೇರಳ, ಪಂಜಾಬ್ ಮತ್ತು ತೆಲಂಗಾಣ ಹೊರತುಪಡಿಸಿ 28 ರಾಜ್ಯಗಳ ಪೈಕಿ 23 ರಾಜ್ಯಗಳು ಪ್ರಸಕ್ತ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರ ಒದಗಿಸಿದ ಬಡ್ಡಿ ರಹಿತ ಸೌಲಭ್ಯವನ್ನು ಪಡೆದುಕೊಂಡಿವೆ ಎಂದು ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರ ರೂ. 50, 571 ಕೋಟಿ ಅನುದಾನವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ಎಂಟು ತಿಂಗಳ ಅವಧಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ವೆಚ್ಚವನ್ನು ಹೆಚ್ಚಿಸಲು ಬಂಡವಾಳ ಹೂಡಿಕೆ ಯೋಜನೆ ಭಾಗವಾಗಿ ವಿಶೇಷ ನೆರವನ್ನು ಬಿಡುಗಡೆ ಮಾಡಲಾಗಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಲೋಕಸಭೆಯಲ್ಲಿ ತಿಳಿಸಿದ್ದಾರೆ.

ಅರುಣಾಚಲ ಪ್ರದೇಶ, ಹರಿಯಾಣ, ಕೇರಳ, ಪಂಜಾಬ್ ಮತ್ತು ತೆಲಂಗಾಣ ಹೊರತುಪಡಿಸಿ 28 ರಾಜ್ಯಗಳ ಪೈಕಿ 23 ರಾಜ್ಯಗಳು ಪ್ರಸಕ್ತ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರ ಒದಗಿಸಿದ ಬಡ್ಡಿ ರಹಿತ ಸೌಲಭ್ಯವನ್ನು ಪಡೆದುಕೊಂಡಿವೆ ಎಂದು ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ವಿಶೇಷ ಅನುದಾನ ಪಡೆದ ರಾಜ್ಯಗಳ ಪೈಕಿ ಉತ್ತರ ಪ್ರದೇಶಕ್ಕೆ ಅತಿ ಹೆಚ್ಚು ರೂ. 7,007.93 ಕೋಟಿ, ಮಧ್ಯ ಪ್ರದೇಶ ರೂ. 5,074.94 ಕೋಟಿ, ಬಿಹಾರ ರೂ. 5,408.88 ಕೋಟಿ, ರಾಜಸ್ಥಾನ ರೂ. 4,552.01 ಕೋಟಿ, ಪಶ್ಚಿಮ ಬಂಗಾಳ ರೂ. 4,416.23 ಕೋಟಿ, ಅಸ್ಸಾಂ ರೂ.3.181.97 ಕೋಟಿ, ಒಡಿಶಾ ರೂ. 3,085.44 ಕೋಟಿ, ಮಹಾರಾಷ್ಟ್ರ ರೂ.2, 617.70 ಕೋಟಿ, ಆಂಧ್ರ ಪ್ರದೇಶ ರೂ. 2, 616.27 ಕೋಟಿ ಮತ್ತು ಕರ್ನಾಟಕಕ್ಕೆ ಅತಿ ಕಡಿಮೆ ರೂ. 2, 272.87 ಕೋಟಿ ಬಿಡುಗಡೆ ಮಾಡಲಾಗಿದೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024-25ರ ಬಜೆಟ್‌ನಲ್ಲಿ ರಾಜ್ಯಗಳಿಗೆ ಕೇಂದ್ರದ ‘ಬಂಡವಾಳ ಹೂಡಿಕೆಗಾಗಿ ವಿಶೇಷ ನೆರವು’ ಯೋಜನೆಗೆ ರೂ.1.5 ಲಕ್ಷ ಕೋಟಿ ಹಂಚಿಕೆ ಮಾಡಿದ್ದಾರೆ. ಬಂಡವಾಳ ವೆಚ್ಚ ಹೆಚ್ಚಿಸಲು 50 ವರ್ಷ ಬಡ್ಡಿ ರಹಿತ ಸಾಲವನ್ನು ಕೇಂದ್ರ ಸರ್ಕಾರ ನೀಡುತ್ತಿದೆ.

ಆರೋಗ್ಯ, ಶಿಕ್ಷಣ, ನೀರಾವರಿ, ನೀರು ಸರಬರಾಜು, ವಿದ್ಯುತ್, ರಸ್ತೆಗಳು, ಸೇತುವೆಗಳು ಮತ್ತು ರೈಲ್ವೆ ಸೇರಿದಂತೆ ವಿವಿಧ ವಲಯಗಳಲ್ಲಿನ ಬಂಡವಾಳ ಹೂಡಿಕೆ ಯೋಜನೆಗಳನ್ನುಈ ಯೋಜನೆಯಡಿ ಅನುಮೋದಿಸಲಾಗಿದೆ. ಜಲ ಜೀವನ್ ಮಿಷನ್ ಮತ್ತು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಗಳ ರಾಜ್ಯದ ಪಾಲನ್ನು ಪೂರೈಸಲು ಹಣವನ್ನು ಒದಗಿಸಲಾಗಿದೆ.

ಈ ಯೋಜನೆಯು ರಾಜ್ಯ ಸರ್ಕಾರದ ವಾಹನಗಳು ಮತ್ತು ಆಂಬ್ಯುಲೆನ್ಸ್‌ಗಳನ್ನು ರದ್ದುಗೊಳಿಸಲು, ಹಳೆಯ ವಾಹನಗಳ ತೆರವು ಮತ್ತು ಸ್ವಯಂಚಾಲಿತ ವಾಹನ ಪರೀಕ್ಷಾ ಸೌಲಭ್ಯ ಸ್ಥಾಪನೆಗೆ ವ್ಯಕ್ತಿಗಳಿಗೆ ತೆರಿಗೆ ರಿಯಾಯಿತಿ ಒದಗಿಸಲು ರಾಜ್ಯಗಳಿಗೆ ಪ್ರೋತ್ಸಾಹವನ್ನು ನೀಡುತ್ತದೆ. ಇದಲ್ಲದೆ, ನಗರ ಯೋಜನೆ ಮತ್ತು ನಗರ ಹಣಕಾಸು ಕ್ಷೇತ್ರದಲ್ಲಿ ಸುಧಾರಣೆಗಳನ್ನು ಕೈಗೊಳ್ಳಲು ರಾಜ್ಯಗಳನ್ನು ಪ್ರೋತ್ಸಾಹಿಸಲಾಗುತ್ತಿದೆ.

ನಗರ ಪ್ರದೇಶಗಳಲ್ಲಿನ ಪೊಲೀಸ್ ಠಾಣೆಗಳಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ವಸತಿ ಸೌಕರ್ಯ ಹೆಚ್ಚಿಸುವ ಗುರಿ ಹೊಂದಿದೆ. 'ಮೇಕ್ ಇನ್ ಇಂಡಿಯಾ' ಪರಿಕಲ್ಪನೆಯನ್ನು ಮುಂದುವರಿಸುವುದು ಮತ್ತು ಪ್ರತಿ ರಾಜ್ಯದಲ್ಲಿ ಯೂನಿಟಿ ಮಾಲ್ ನಿರ್ಮಾಣದ ಮೂಲಕ 'ಒಂದು ಜಿಲ್ಲೆ, ಒಂದು ಉತ್ಪನ್ನ (ODOP)' ಪರಿಕಲ್ಪನೆ ಉತ್ತೇಜಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT