ಪವನ್ ಕಲ್ಯಾಣ್-ಚಂದ್ರಬಾಬು ನಾಯ್ಡು 
ದೇಶ

Fact Check: ಆಂಧ್ರ ಪ್ರದೇಶ ಸರ್ಕಾರ ವಕ್ಫ್ ಬೋರ್ಡ್ ರದ್ದುಗೊಳಿಸಿದ್ದು ನಿಜನಾ? ಇಲ್ಲಿದೆ ಮಾಹಿತಿ!

ಸಿಎಂ ಚಂದ್ರಬಾಬು ನಾಯ್ಡು ನೇತೃತ್ವದ ಆಂಧ್ರಪ್ರದೇಶ ಸರ್ಕಾರವು ರಾಜ್ಯದಲ್ಲಿ ವಕ್ಫ್ ಬೋರ್ಡ್ ಅನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ ಎಂಬ ಸುದ್ದಿ ವೈರಲ್ ಆಗಿತ್ತು. ರಾಜ್ಯದಲ್ಲಿ ವಕ್ಫ್ ಬೋರ್ಡ್ ಅನ್ನು ನಿಷೇಧಿಸಲಾಗಿದೆ ಎಂದು ಹಲವರು ಹೇಳಿದ್ದರು.

ವಿಶಾಖಪಟ್ಟಣ: ಸಿಎಂ ಚಂದ್ರಬಾಬು ನಾಯ್ಡು ನೇತೃತ್ವದ ಆಂಧ್ರಪ್ರದೇಶ ಸರ್ಕಾರವು ರಾಜ್ಯದಲ್ಲಿ ವಕ್ಫ್ ಬೋರ್ಡ್ ಅನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ ಎಂಬ ಸುದ್ದಿ ವೈರಲ್ ಆಗಿತ್ತು. ರಾಜ್ಯದಲ್ಲಿ ವಕ್ಫ್ ಬೋರ್ಡ್ ಅನ್ನು ನಿಷೇಧಿಸಲಾಗಿದೆ ಎಂದು ಹಲವರು ಹೇಳಿದ್ದರು.

ವಕ್ಫ್ ಬೋರ್ಡ್ ಕುರಿತು ಆಂಧ್ರಪ್ರದೇಶ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಹೌದು ಅದು ನಿಜ ಅಂದರೆ, ಹಿಂದಿನ ಜಗನ್ ಮೋಹನ್ ಸರ್ಕಾರ ರಚಿಸಿದ್ದ ವಕ್ಫ್ ಮಂಡಳಿಯನ್ನು ಚಂದ್ರಬಾಬು ನಾಯ್ಡು ಸರ್ಕಾರ ವಿಸರ್ಜಿಸಿದೆ. ಆಂಧ್ರದ ಕಾನೂನು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಎನ್. ಮೊಹಮ್ಮದ್ ಫಾರೂಕ್ ಈ ಸಂಬಂಧ ಶನಿವಾರ ಆದೇಶ ಹೊರಡಿಸಿದ್ದಾಗಿ ತಿಳಿಸಿದ್ದರು. ಆಂಧ್ರಪ್ರದೇಶ ಸರ್ಕಾರ ಈಗ ಹೊಸ ವಕ್ಫ್ ಮಂಡಳಿಯನ್ನು ರಚಿಸಲಿದೆ. ಹೊಸ ಸರ್ಕಾರವು GO-75 ಅನ್ನು ಹೊರಡಿಸಿದ್ದು ಹಿಂದಿನ ಆಡಳಿತವು ಹೊರಡಿಸಿದ GO-47 ಅನ್ನು ರದ್ದುಗೊಳಿಸಿದೆ.

ನವೆಂಬರ್ 30ರ ಆದೇಶದಲ್ಲಿ ವೈಎಸ್‌ಆರ್‌ಸಿ ಆಡಳಿತದಿಂದ ರಚಿಸಲಾದ ಎಪಿ ಸ್ಟೇಟ್ ವಕ್ಫ್ ಬೋರ್ಡ್ ದೀರ್ಘಕಾಲದಿಂದ (ಮಾರ್ಚ್ 2023 ರಿಂದ) ನಿಷ್ಕ್ರಿಯವಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಆ ಸಮಯದಲ್ಲಿ ರಚನೆಯಾದ ವಕ್ಫ್ ಬೋರ್ಡ್ ಒಟ್ಟು 11 ಸದಸ್ಯರನ್ನು ಹೊಂದಿದ್ದು, ಅದರಲ್ಲಿ ಮೂವರು ಚುನಾಯಿತರಿದ್ದು ಉಳಿದ ಎಂಟು ಮಂದಿ ನಾಮನಿರ್ದೇಶನಗೊಂಡರು. ಗಮನಾರ್ಹವಾಗಿ, ಮಂಡಳಿಯನ್ನು ರಚಿಸುವ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಆಂಧ್ರಪ್ರದೇಶ ಹೈಕೋರ್ಟ್ 2023ರ ನವೆಂಬರ್ 1ರಂದು ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷರ ಚುನಾವಣೆಗೆ ತಡೆ ನೀಡಿತ್ತು.

ಹೀಗಾಗಿ ಹಿಂದಿನ ಸರ್ಕಾರ ರಚಿಸಿದ್ದ ಮಂಡಳಿಯನ್ನು ವಿಸರ್ಜಿಸಿ ಹೊಸ ಮಂಡಳಿ ರಚಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಅಲ್ಲಿಗೆ ವಕ್ಫ್ ಬೋರ್ಡ್ ಅನ್ನೇ ಆಂಧ್ರ ಸರ್ಕಾರ ರದ್ದು ಮಾಡಿದೆ ಎಂಬುದು ಸುಳ್ಳು ಸುದ್ದಿ ಎಂಬುದು ಜಗಜ್ಜಾಹೀರಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT