ಸಂಸತ್ತು ಆವರಣದಲ್ಲಿ ವಿರೋಧ ಪಕ್ಷಗಳ ಸಂಸದರಿಂದ ಪ್ರತಿಭಟನೆ  
ದೇಶ

ಅದಾನಿ ಲಂಚ ಪ್ರಕರಣ: ಸಂಸತ್ತು ಆವರಣದಲ್ಲಿ ಇಂಡಿಯಾ ಬ್ಲಾಕ್ ಸಂಸದರಿಂದ ಪ್ರತಿಭಟನೆ

ಕಾಂಗ್ರೆಸ್, ಎಎಪಿ, ಆರ್‌ಜೆಡಿ, ಶಿವಸೇನೆ (ಯುಬಿಟಿ), ಡಿಎಂಕೆ ಮತ್ತು ಎಡಪಕ್ಷಗಳ ಸಂಸದರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು ಅದಾನಿ ಬಂಧನಕ್ಕೆ ಒತ್ತಾಯಿಸಿದರು.

ನವದೆಹಲಿ: ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕದಲ್ಲಿ ಲಂಚ ಪ್ರಕರಣಕ್ಕೆ ಸಂಬಂಧಿಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡಿಯಾ ಬ್ಲಾಕ್ ಒಕ್ಕೂಟದ ಸಂಸದರು ಇಂದು ಮಂಗಳವಾರ ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿ ಈ ಬಗ್ಗೆ ಜಂಟಿ ಸಂಸದೀಯ ತನಿಖೆಗೆ ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದರು.

ಕಾಂಗ್ರೆಸ್, ಎಎಪಿ, ಆರ್‌ಜೆಡಿ, ಶಿವಸೇನೆ (ಯುಬಿಟಿ), ಡಿಎಂಕೆ ಮತ್ತು ಎಡಪಕ್ಷಗಳ ಸಂಸದರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು ಅದಾನಿ ಬಂಧನಕ್ಕೆ ಒತ್ತಾಯಿಸಿದರು.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಎಪಿಯ ಸಂಜಯ್ ಸಿಂಗ್, ಆರ್‌ಜೆಡಿಯ ಮಿಸಾ ಭಾರತಿ ಮತ್ತು ಶಿವಸೇನೆಯ (ಯುಬಿಟಿ) ಅರವಿಂದ್ ಸಾವಂತ್ ಅವರು ಸಂಸತ್ತಿನ ಮಕರ ದ್ವಾರದ ಮೆಟ್ಟಿಲುಗಳ ಮೇಲೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಲಂಚ ಮತ್ತು ವಂಚನೆ ಆರೋಪದ ಮೇಲೆ ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಮತ್ತು ಕಂಪನಿಯ ಇತರ ಅಧಿಕಾರಿಗಳ ವಿರುದ್ಧ ಯುಎಸ್ ಪ್ರಾಸಿಕ್ಯೂಟರ್‌ಗಳು ದೋಷಾರೋಪಣೆ ಮಾಡಿದ ನಂತರ ಕಾಂಗ್ರೆಸ್ ಮತ್ತು ಇತರ ಕೆಲವು ಪ್ರತಿಪಕ್ಷಗಳು ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಒತ್ತಾಯಿಸುತ್ತಿವೆ.

ಯುಎಸ್‌ನಲ್ಲಿ ಅದಾನಿ ಗ್ರೂಪ್‌ನ ದೋಷಾರೋಪಣೆಯು ಸಂಸ್ಥೆಯ ವ್ಯವಹಾರಗಳ ಬಗ್ಗೆ ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಒತ್ತಾಯಿಸಲು ವಿರೋಧ ಪಕ್ಷಗಳಿಗೆ ಹೊಸ ಅಸ್ತ್ರ ನೀಡಿದೆ. ಅದಾನಿಯನ್ನು ತಕ್ಷಣ ಬಂಧಿಸುವಂತೆ ರಾಹುಲ್ ಗಾಂಧಿಒತ್ತಾಯಿಸಿದ್ದರು. ಅದಾನಿ ಸಮೂಹವು ಎಲ್ಲಾ ಆರೋಪಗಳನ್ನು ಆಧಾರರಹಿತ ಎಂದು ನಿರಾಕರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ