INDIA ಬಣದ ಸಂಸದರ ಪ್ರತಿಭಟನೆ 
ದೇಶ

ಅದಾನಿ ಲಂಚ ವಿವಾದ: ಸಂಸತ್ ಆವರಣದಲ್ಲಿ ವಿಪಕ್ಷಗಳ INDIA ಬಣದ ಸಂಸದರ ಪ್ರತಿಭಟನೆ

ಕಾಂಗ್ರೆಸ್, ಎಎಪಿ, ಆರ್ ಜೆಡಿ, ಶಿವಸೇನಾ (ಯುಬಿಟಿ) ಎಡರಂಗ ಸೇರಿದಂತೆ ಮತ್ತಿತರ ಪಕ್ಷಗಳ ಸಂಸದರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹೊಣೆಗಾರಿಕೆಗೆ ಒತ್ತಾಯಿಸಿದರು.

ನವದೆಹಲಿ: ಅದಾನಿ ಲಂಚ ವಿವಾದವನ್ನು ಜಂಟಿ ಸದನ ತನಿಖೆಗೆ ಆಗ್ರಹಿಸಿ ವಿಪಕ್ಷಗಳ INDIA ಬಣದ ಸಂಸದರು ಸಂಸತ್ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್, ಎಎಪಿ, ಆರ್ ಜೆಡಿ, ಶಿವಸೇನಾ (ಯುಬಿಟಿ) ಎಡರಂಗ ಸೇರಿದಂತೆ ಮತ್ತಿತರ ಪಕ್ಷಗಳ ಸಂಸದರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹೊಣೆಗಾರಿಕೆಗೆ ಒತ್ತಾಯಿಸಿದರು.

ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಎಪಿಯ ಸಂಜಯ್ ಸಿಂಗ್, ಆರ್ ಜೆಡಿಯ ಮಿಶ್ರಾ ಭಾರತಿ ಮತ್ತು ಶಿವಸೇನೆಯ (ಯುಬಿಟಿ) ಅರವಿಂದ್ ಸಾವಂತ್ ಮತ್ತಿತರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಲಂಚ ಮತ್ತು ವಂಚನೆ ಪ್ರಕರಣದಲ್ಲಿ ಅದಾನಿ ಸಮೂಹದ ಮುಖ್ಯಸ್ಥ ಗೌತಮ್ ಅದಾನಿ ಮತ್ತಿತರ ಕಂಪನಿಗಳ ಸಿಬ್ಬಂದಿ ವಿರುದ್ಧ ಅಮೆರಿಕ ಆರೋಪ ಪಟ್ಟಿ ದಾಖಲಿಸಿರುವ ಹಿನ್ನೆಲೆಯಲ್ಲಿ ಜಂಟಿ ಸದನ ಸಮಿತಿಯಿಂದ ತನಿಖೆ ನಡೆಯಬೇಕು ಎಂದು ಕಾಂಗ್ರೆಸ್ ಮತ್ತಿತರ ಪಕ್ಷಗಳು ಆಗ್ರಹಿಸಿದವು.

ಗೌತಮ್ ಅದಾನಿ ಅವರನ್ನು ಕೂಡಲೇ ಬಂಧಿಸಬೇಕು ಎಂದು ರಾಹುಲ್ ಗಾಂಧಿ ಸರ್ಕಾರವನ್ನು ಒತ್ತಾಯಿಸಿದರು. ಆದರೆ ಪ್ರತಿಪಕ್ಷಗಳ ಆರೋಪ ನಿರಾಧಾರ ಎಂದು ಅದಾನಿ ಸಮೂಹ ತಳ್ಳಿ ಹಾಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT