ಸಾಂದರ್ಭಿಕ ಚಿತ್ರ 
ದೇಶ

ಶ್ರೀನಗರ: ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಉಗ್ರ ಹತ್ಯೆ

ಗುಪ್ತಚರ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ದಚಿಗಮ್‌ನ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಶ್ರೀನಗರದ ದಚಿಗಂ ಅರಣ್ಯ ಪ್ರದೇಶದಲ್ಲಿ ಮಂಗಳವಾರ ನಡೆದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.

ಗುಪ್ತಚರ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ದಚಿಗಮ್‌ನ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದು, ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆ ತಿಳಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸೇನೆ ಉತ್ತರ ಕಮಾಂಡರ್ ಮಾಹಿತಿ ಹಂಚಿಕೊಂಡಿದ್ದು, ಕ್ಷೀಪ್ರ ಕಾರ್ಯಾಚರಣೆ ನಡೆಸಿ, ಓರ್ವ ಉಗ್ರನನ್ನು ಹತ್ಯೆಗೈದಿದ್ದಕ್ಕೆ ಚಿನಾರ್ ವಾರಿಯರ್ಸ್ ಮತ್ತು ಜಮ್ಮು- ಕಾಶ್ಮೀರ ಪೊಲೀಸರ ದಕ್ಷತೆಯನ್ನು ಕೊಂಡಾಡಿದ್ದು, ಅಭಿನಂದನೆ ಸಲ್ಲಿಸಿದ್ದಾರೆ.

ಇನ್ನೂ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಶ್ರೀನಗರದ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಶ್ರೀನಗರದ ಹೊರವಲಯದಲ್ಲಿರುವ ದಚಿಗಮ್ ರಾಷ್ಟ್ರೀಯ ಉದ್ಯಾನವನವು ಸುಮಾರು 141 ಚದರ ಕಿ. ಮೀ ನಷ್ಟು ವಿಸ್ತೀರ್ಣವನ್ನು ಹೊಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT