ಸಾಂದರ್ಭಿಕ ಚಿತ್ರ 
ದೇಶ

ಶ್ರೀನಗರ: ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಉಗ್ರ ಹತ್ಯೆ

ಗುಪ್ತಚರ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ದಚಿಗಮ್‌ನ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಶ್ರೀನಗರದ ದಚಿಗಂ ಅರಣ್ಯ ಪ್ರದೇಶದಲ್ಲಿ ಮಂಗಳವಾರ ನಡೆದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.

ಗುಪ್ತಚರ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ದಚಿಗಮ್‌ನ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದು, ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆ ತಿಳಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸೇನೆ ಉತ್ತರ ಕಮಾಂಡರ್ ಮಾಹಿತಿ ಹಂಚಿಕೊಂಡಿದ್ದು, ಕ್ಷೀಪ್ರ ಕಾರ್ಯಾಚರಣೆ ನಡೆಸಿ, ಓರ್ವ ಉಗ್ರನನ್ನು ಹತ್ಯೆಗೈದಿದ್ದಕ್ಕೆ ಚಿನಾರ್ ವಾರಿಯರ್ಸ್ ಮತ್ತು ಜಮ್ಮು- ಕಾಶ್ಮೀರ ಪೊಲೀಸರ ದಕ್ಷತೆಯನ್ನು ಕೊಂಡಾಡಿದ್ದು, ಅಭಿನಂದನೆ ಸಲ್ಲಿಸಿದ್ದಾರೆ.

ಇನ್ನೂ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಶ್ರೀನಗರದ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಶ್ರೀನಗರದ ಹೊರವಲಯದಲ್ಲಿರುವ ದಚಿಗಮ್ ರಾಷ್ಟ್ರೀಯ ಉದ್ಯಾನವನವು ಸುಮಾರು 141 ಚದರ ಕಿ. ಮೀ ನಷ್ಟು ವಿಸ್ತೀರ್ಣವನ್ನು ಹೊಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT