ದೆಹಲಿಯಲ್ಲಿ ಮೂವರ ಕೊಲೆ 
ದೇಶ

ದೆಹಲಿಯಲ್ಲಿ ದಂಪತಿ ಮತ್ತು ಮಗಳ ಭೀಕರ ಕೊಲೆ: ವಾಕಿಂಗ್‌ ಹೋಗಿದ್ದ ಮಗನ ತೀವ್ರ ವಿಚಾರಣೆ!

ಮನೆಯಲ್ಲಿ ಯಾವುದೇ ರೀತಿಯ ವಿಧ್ವಂಸಕ ಕೃತ್ಯ ನಡೆದಿರುವ ಕುರುಹುಗಳು ಪತ್ತೆಯಾಗಿಲ್ಲ ಎಂದು ಡಿಸಿಪಿ ತಿಳಿಸಿದ್ದಾರೆ. ಹಂತಕನು ಮನೆಗೆ ಹೇಗೆ ಪ್ರವೇಶಿಸಿದ್ದಾನೆ ಎಂಬುದನ್ನು ಕಂಡುಹಿಡಿಯಲು ನಾವು ತನಿಖೆ ನಡೆಸುತ್ತಿದ್ದೇವೆ ಎಂದರು.

ನವದೆಹಲಿ: ದೆಹಲಿಯ ದಿಯೋಲಿಯಲ್ಲಿ ತ್ರಿವಳಿ ಕೊಲೆ ನಡೆದಿದೆ. ದಂಪತಿ ಮತ್ತು ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮೊದಲ ಮಹಡಿಯಲ್ಲಿ ಗಂಡನ ಶವ ಪತ್ತೆಯಾಗಿದ್ದು, ನೆಲ ಮಹಡಿಯಲ್ಲಿ ಪತ್ನಿ ಮತ್ತು ಮಗಳ ಶವ ಪತ್ತೆಯಾಗಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ದಕ್ಷಿಣ ದೆಹಲಿ ಜಿಲ್ಲೆಯ ಡಿಸಿಪಿ ಅಂಕಿತ್ ಚೌಹಾಣ್, ಬೆಳಿಗ್ಗೆ 7:00ರ ಸುಮಾರಿಗೆ ಕರೆ ಬಂದಿದ್ದು, ಅದರಲ್ಲಿ ಮೂವರಿಗೆ ಇರಿದು ಕೊಲೆ ಮಾಡಲಾಗಿದೆ ಎಂದು ಹೇಳಲಾಗಿತ್ತು. ಮನೆಯ ಮಗನೇ ಕರೆ ಮಾಡಿದ್ದನು. ವಿಚಾರಿಸಿದಾಗ ತಾನೂ ಬೆಳಗಿನ ವಾಕಿಂಗ್‌ಗೆ ಹೋಗಿದ್ದೆ ಎಂದು ಮಗ ಹೇಳಿದ್ದು ಮನೆಗೆ ಹಿಂತಿರುಗಿ ಬಂದಾಗ ಮೂವರೂ ಕೊಲೆಯಾಗಿರುವುದು ಕಂಡೆ ಎಂದು ಹೇಳಿದ್ದನು. ಸ್ಥಳಕ್ಕೆ ಎಫ್‌ಎಸ್‌ಎಲ್‌ ತಂಡವನ್ನು ಕರೆಸಲಾಗಿದ್ದು, ಎಲ್ಲ ಸಂಗತಿಗಳನ್ನು ಆಳವಾಗಿ ಪರಿಶೀಲಿಸಲಾಗುತ್ತಿದೆ ಎಂದು ಡಿಸಿಪಿ ಅಂಕಿತ್‌ ಚೌಹಾಣ್‌ ತಿಳಿಸಿದ್ದಾರೆ.

ಮನೆಯಲ್ಲಿ ಯಾವುದೇ ರೀತಿಯ ವಿಧ್ವಂಸಕ ಕೃತ್ಯ ನಡೆದಿರುವ ಕುರುಹುಗಳು ಪತ್ತೆಯಾಗಿಲ್ಲ ಎಂದು ಡಿಸಿಪಿ ತಿಳಿಸಿದ್ದಾರೆ. ಹಂತಕನು ಮನೆಗೆ ಹೇಗೆ ಪ್ರವೇಶಿಸಿದ್ದಾನೆ ಎಂಬುದನ್ನು ಕಂಡುಹಿಡಿಯಲು ನಾವು ತನಿಖೆ ನಡೆಸುತ್ತಿದ್ದೇವೆ. ಎಲ್ಲಾ ಬೀಗಗಳು ಒಳಗಿನಿಂದ ಲಾಕ್ ಆಗಿದ್ದವು, ಆದರೆ ಮೇಲಿನ ಛಾವಣಿಯ ಬೀಗ ಒಳಗಿನಿಂದ ತೆರೆದಿರುವುದು ಕಂಡು ಬಂದಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ಕೊಲೆಗಾರ ಹರಿತವಾದ ಆಯುಧ ಬಳಸಿದ್ದಾನೆ ಎಂದು ಡಿಸಿಪಿ ತಿಳಿಸಿದ್ದಾರೆ. ಸುಮಾರು ಒಂದೂಕಾಲು ಗಂಟೆಯಲ್ಲಿ ಇಷ್ಟೆಲ್ಲಾ ಘಟನೆ ನಡೆದಿದೆ.

ಕೊಲೆಯ ಹಿಂದಿನ ಕಾರಣವನ್ನು ಬಹಿರಂಗಪಡಿಸಲು ಹಲವು ತಂಡಗಳನ್ನು ನಿಯೋಜಿಸಲಾಗಿದೆ ಎಂದು ಡಿಸಿಪಿ ಅಂಕಿತ್ ಚೌಹಾಣ್ ಹೇಳಿದ್ದಾರೆ. ಮೊದಲ ಮಹಡಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ತಾಯಿ ಮತ್ತು ಮಗಳ ಮೃತದೇಹ ನೆಲ ಮಹಡಿಯಲ್ಲಿ ಪತ್ತೆಯಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

ಮೃತರಲ್ಲಿ ರಾಜೇಶ್ (55), ಕೋಮಲ್ (47) ಮತ್ತು ಅವರ ಪುತ್ರಿ ಕವಿತಾ (23) ಮೃತ ದುರ್ದೈವಿಗಳು. ಬೆಳಗಿನ ವಾಕಿಂಗ್‌ ಮುಗಿಸಿ ಹಿಂತಿರುಗಿದಾಗ ಮನೆಯಲ್ಲಿ ಮೂವರೂ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಮಗ ಕಂಡಿದ್ದಾನೆ. ಕೊಲೆ ವಿಚಾರ ಬಹಿರಂಗಗೊಂಡ ಬೆನ್ನಲ್ಲೇ ಸ್ಥಳದಲ್ಲಿ ಕೋಲಾಹಲ ಉಂಟಾಗಿದ್ದು ನೆರೆಹೊರೆಯವರು ಜಮಾಯಿಸಿದ್ದಾರೆ. ಮಾಹಿತಿ ಸಿಕ್ಕ ತಕ್ಷಣ ದೆಹಲಿ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ಪ್ರಕರಣದ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT