ರಾಕೇಶ್ ಟಿಕಾಯತ್ 
ದೇಶ

ಸ್ಟೇಷನ್‌ನಿಂದ ಪರಾರಿಯಾದ ರಾಕೇಶ್ ಟಿಕಾಯತ್‌ರನ್ನು ಅಟ್ಟಾಡಿಸಿದ UP Police, ವಿಡಿಯೋ ವೈರಲ್!

ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ರಾಕೇಶ್ ಟಿಕಾಯತ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು ಸದ್ಯ ಅವರನ್ನು ತಪ್ಪಲ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಟಿಕಾಯತ್‌ನನ್ನು ವಶಕ್ಕೆ ತೆಗೆದುಕೊಂಡ ನಂತರ, ಪರಿಸ್ಥಿತಿ ನಿಯಂತ್ರಣದಲ್ಲಿದ್ದು ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ರೈತ ಮುಖಂಡರನ್ನು ಭೇಟಿ ಮಾಡಲು ಗ್ರೇಟರ್ ನೋಯ್ಡಾಗೆ ಹೋಗುತ್ತಿದ್ದ ರೈತ ಮುಖಂಡ ರಾಕೇಶ್ ಟಿಕಾಯತ್ ಅವರನ್ನು ಅಲಿಗಢ ಪೊಲೀಸರು ಬಂಧಿಸಿದ್ದಾರೆ. ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ರಾಕೇಶ್ ಟಿಕಾಯತ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು ಸದ್ಯ ಅವರನ್ನು ತಪ್ಪಲ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಟಿಕಾಯತ್‌ನನ್ನು ವಶಕ್ಕೆ ತೆಗೆದುಕೊಂಡ ನಂತರ, ಪರಿಸ್ಥಿತಿ ನಿಯಂತ್ರಣದಲ್ಲಿದ್ದು ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ನಡೆಯುತ್ತಿರುವ ರೈತರ ಮಹಾಪಂಚಾಯತ್‌ನಲ್ಲಿ ಭಾಗವಹಿಸಲು ಹೋಗುತ್ತಿದ್ದ ರಾಕೇಶ್ ಟಿಕಾಯತ್ ವಶಕ್ಕೆ ಪಡೆಯಲಾಯಿತು. ಈ ವೇಳೆ ರಾಕೇಶ್ ಟಿಕಾಯತ್ ಮಾತನಾಡಿ, ಗೃಹಬಂಧನದಲ್ಲಿ ಇರಿಸುವ ಮೂಲಕ ನೋಯ್ಡಾಗೆ ಹೋಗುತ್ತಿರುವ ರೈತರನ್ನು ಪೊಲೀಸರು ತಡೆಯುತ್ತಿದ್ದಾರೆ. ಎಷ್ಟು ದಿನ ನಮ್ಮನ್ನು ಕಸ್ಟಡಿಯಲ್ಲಿ ಇಟ್ಟುಕೊಳ್ಳುತ್ತೀರಿ, ನೀವು ನಮ್ಮನ್ನು ಲಾಕ್ ಮಾಡಿದರೆ ನಾವು ಯಾರೊಂದಿಗೆ ಮಾತನಾಡುತ್ತೇವೆ? ಅಧಿಕಾರಿಗಳು ಇದೇ ಧೋರಣೆ ಮುಂದುವರಿಸಿದರೆ ರೈತರ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದರು.

ವಶಕ್ಕೆ ಪಡೆದಿದ್ದ ರಾಕೇಶ್ ಟಿಕಾಯತ್ ರನ್ನು ತಪ್ಪಲ್ ಪೊಲೀಸ್ ಠಾಣೆಯಲ್ಲಿ ಇಡಲಾಗಿತ್ತು. ಈ ವೇಳೆ ಅವಕಾಶ ಸಿಕ್ಕ ತಕ್ಷಣ ಟಿಕಾಯತ್ ಠಾಣೆಯಿಂದ ಪರಾರಿಯಾಗಿದ್ದರು. ಈ ವೇಳೆ ಆತನನ್ನು ಹಿಂಬಾಲಿಸಿದ ಪೊಲೀಸರು ಮತ್ತೆ ರಾಕೇಶ್ ಟಿಕಾಯತ್ ರನ್ನು ವಶಕ್ಕೆ ಪಡೆದಿದ್ದಾರೆ.

ಪರಿಹಾರ ಮತ್ತು ಇತರ ಬೇಡಿಕೆಗಳಿಗೆ ಸಂಬಂಧಿಸಿದಂತೆ ರೈತರು ನೋಯ್ಡಾದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಗಳವಾರ 160ಕ್ಕೂ ಹೆಚ್ಚು ರೈತರನ್ನು ಬಂಧಿಸಲಾಯಿತು. ಆದರೆ ಸಂಜೆ ಎಲ್ಲರನ್ನೂ ಬಿಡುಗಡೆ ಮಾಡಲಾಯಿತು. ಅದೇ ಸಮಯದಲ್ಲಿ, ಪಂಜಾಬ್‌ನ ರೈತರು ಡಿಸೆಂಬರ್ 6ರಂದು ದೆಹಲಿಗೆ ಮೆರವಣಿಗೆ ನಡೆಸುವುದಾಗಿ ಘೋಷಿಸಿದರು. ರೈತರ ನಿರ್ಧಾರದ ಹಿನ್ನೆಲೆಯಲ್ಲಿ ಪೊಲೀಸರು-ಆಡಳಿತ ಎಚ್ಚೆತ್ತುಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯಾವ ಕ್ರಾಂತಿಯು ಇಲ್ಲ, ಕೇವಲ ''ಮಾಧ್ಯಮ ಸೃಷ್ಟಿ''; ನನ್ನ ಸ್ಥಾನ ಈಗಲೂ ಗಟ್ಟಿ, ಮುಂದೆಯೂ ಗಟ್ಟಿ

ಬೆಂಗಳೂರು ಎಟಿಎಂ ದರೋಡೆ ಪ್ರಕರಣ: ತಿರುಪತಿಯಲ್ಲಿ ಇಬ್ಬರ ಬಂಧನ

ನೇಪಾಳದಲ್ಲಿ ಮತ್ತೆ ಭುಗಿಲೆದ್ದ Gen- Z​​ ಹಿಂಸಾಚಾರ, ಕರ್ಫ್ಯೂ ಜಾರಿ; ಪ್ರಚೋದನೆ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

Delhi Blast: ವೈದ್ಯನಾದರೂ ತಲೆ ತುಂಬ 'ಇಸ್ಲಾಮ್ ಮೂಲಭೂತವಾದ' ತುಂಬಿಕೊಂಡಿದ್ದ ಬಾಂಬರ್! ರೋಗಿಗಳಿಗೆ ಏನು ಹೇಳ್ತಿದ್ದ ಗೊತ್ತಾ?

Delhi Blast: ಅಲ್ ಫಲಾಹ್ ವಿಶ್ವವಿದ್ಯಾಲಯದಲ್ಲಿ ಪರಿಶೀಲನೆ, 200 ವೈದ್ಯರು, ಸಿಬ್ಬಂದಿಗಳ ವಿಚಾರಣೆ

SCROLL FOR NEXT