ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪ ಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಹಾಗೂ ಅಜಿತ್ ಪವಾರ್ 
ದೇಶ

ಮಹಾರಾಷ್ಟ್ರ ಸಿಎಂ ಆಗಿ ಅಧಿಕಾರ ಸ್ವೀಕರಿಸಿ, ಮೊದಲ ಸಂಪುಟ ಸಭೆ ನಡೆಸಿದ ಫಡ್ನವಿಸ್

ಮಂತ್ರಾಲಯಕ್ಕೆ ಆಗಮಿಸಿದ ನೂತನ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪ ಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಹಾಗೂ ಅಜಿತ್ ಪವಾರ್ ಅವರಿಗೆ ಸಿಬ್ಬಂದಿ ಸಾಂಪ್ರದಾಯಿಕ ಸ್ವಾಗತ ಕೋರಿದರು.

ಮುಂಬೈ: ಮೂರನೇ ಬಾರಿ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಿದ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರು ಮುಂಬೈನ ರಾಜ್ಯ ಸಚಿವಾಲಯ `ಮಂತ್ರಾಲಯ'ದಲ್ಲಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು.

ಆಜಾದ್ ಮೈದಾನದಲ್ಲಿ ಸಂಜೆ 5.30ಕ್ಕೆ ಪ್ರಮಾಣ ವಚನ ಸ್ವೀಕರಿಸಿದ ನಂತರ ಮಂತ್ರಾಲಯಕ್ಕೆ ಆಗಮಿಸಿದ ನೂತನ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪ ಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಹಾಗೂ ಅಜಿತ್ ಪವಾರ್ ಅವರಿಗೆ ಸಿಬ್ಬಂದಿ ಸಾಂಪ್ರದಾಯಿಕ ಸ್ವಾಗತ ಕೋರಿದರು.

ಛತ್ರಪತಿ ಶಿವಾಜಿ ಮಹಾರಾಜ್, ಜೀಜಾಬಾಯಿ, ಬಿ ಆರ್ ಅಂಬೇಡ್ಕರ್ ಮತ್ತು ಮಹಾತ್ಮ ಫುಲೆ ಅವರ ಭಾವಚಿತ್ರಗಳಿಗೆ ಫಡ್ನವಿಸ್ ಮತ್ತು ಅವರ ಉಪ ಮುಖ್ಯಮಂತ್ರಿಗಳು ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿ ಸುಜಾತಾ ಸೌನಿಕ್ ಉಪಸ್ಥಿತರಿದ್ದರು.

ಫಡ್ನವಿಸ್ ಅಧ್ಯಕ್ಷತೆಯಲ್ಲಿ, ಶಿಂಧೆ ಮತ್ತು ಪವಾರ್ ಅವರು ಹೊಸ ಸರ್ಕಾರದ ಮೊದಲ ಕ್ಯಾಬಿನೆಟ್ ಸಭೆ ನಡೆಸಿದರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.

ಆಜಾದ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ 54 ವರ್ಷದ ಫಡ್ನವಿಸ್ ಅವರು ಮಹಾರಾಷ್ಟ್ರದ 20ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವಾರು ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ಉದ್ಯಮದ ಮುಖಂಡರು ಮತ್ತು ಬಾಲಿವುಡ್ ತಾರೆಯರು ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ