ಜೈಶಂಕರ್ online desk
ದೇಶ

Israel-Palestine ಸಂಘರ್ಷ: UN ನಿರ್ಣಯಗಳಿಂದ ಭಾರತವೇಕೆ ತಟಸ್ಥ?- ಸಂಸತ್ ನಲ್ಲಿ ಜೈಶಂಕರ್ ಕೊಟ್ಟ ಉತ್ತರ ಹೀಗಿದೆ...

ಇಸ್ರೇಲ್ ರಾಷ್ಟ್ರದ ಜೊತೆ ಜೊತೆಗೇ ಸಾರ್ವಭೌಮ, ಸ್ವತಂತ್ರ ಮತ್ತು ಕಾರ್ಯಸಾಧ್ಯವಾದ ಪ್ಯಾಲೇಸ್ಟಿನಿಯನ್ ರಾಜ್ಯದ ಅಸ್ತಿತ್ವವನ್ನು ಭಾರತ ಬೆಂಬಲಿಸುತ್ತದೆ ಎಂದು ಜೈಶಂಕರ್ ಸ್ಪಷ್ಟಪಡಿಸಿದ್ದಾರೆ.

ನವದೆಹಲಿ: ವಿದೇಶಾಂಗ ಸಚಿವ ಎಸ್ ಜೈಶಂಕರ್ ಸಂಸತ್ ನಲ್ಲಿ ಇಂದು ಇಸ್ರೇಲ್- ಪ್ಯಾಲೆಸ್ತೇನ್ ಬಿಕ್ಕಟ್ಟಿನ ಬಗ್ಗೆ ಮಾತನಾಡಿದರು.

ಇಸ್ರೇಲ್ ರಾಷ್ಟ್ರದ ಜೊತೆ ಜೊತೆಗೇ ಸಾರ್ವಭೌಮ, ಸ್ವತಂತ್ರ ಮತ್ತು ಕಾರ್ಯಸಾಧ್ಯವಾದ ಪ್ಯಾಲೇಸ್ಟಿನಿಯನ್ ರಾಜ್ಯದ ಅಸ್ತಿತ್ವವನ್ನು ಭಾರತ ಬೆಂಬಲಿಸುತ್ತದೆ ಎಂದು ಜೈಶಂಕರ್ ಸ್ಪಷ್ಟಪಡಿಸಿದ್ದಾರೆ. ಗಾಜಾಗೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯ ಎಲ್ಲಾ ನಿರ್ಣಯಗಳಿಂದ ಭಾರತ ದೂರವಿರುವುದರ ಬಗ್ಗೆ ರಾಜ್ಯಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಕೇಳಲಾದ ಪ್ರಶ್ನೆಯೊಂದಕ್ಕೆ ಜೈಶಂಕರ್ ಉತ್ತರಿಸಿದ್ದು, ಇಸ್ರೇಲ್- ಪ್ಯಾಲೆಸ್ತೇನ್ ವಿಷಯದಲ್ಲಿ ಭಾರತ ದ್ವಿರಾಷ್ಟ್ರ ಪರಿಹಾರಕ್ಕೆ ಬೆಂಬಲ ನೀಡುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕಳೆದ ವರ್ಷ ಅಕ್ಟೋಬರ್ 7 ರಂದು ಆರಂಭವಾಗಿದ್ದ ಇಸ್ರೇಲ್- ಹಮಾಸ್ ಸಂಘರ್ಷದ ಬಳಿಕ ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯಲ್ಲಿ (UNGA) ಪ್ಯಾಲೆಸ್ತೀನ್ ಬಗ್ಗೆ 13 ನಿರ್ಣಯಗಳನ್ನು ಮಂಡಿಸಲಾಗಿದೆ.

"ಇಸ್ರೇಲ್-ಹಮಾಸ್ ಸಂಘರ್ಷದ ಆರಂಭದಿಂದಲೂ, ಯುಎನ್‌ಜಿಎಯಲ್ಲಿ ಪ್ಯಾಲೆಸ್ತೀನ್‌ಗೆ ಸಂಬಂಧಿಸಿದ 13 ನಿರ್ಣಯಗಳನ್ನು ತರಲಾಯಿತು, ಅದರಲ್ಲಿ ಭಾರತವು 10 ನಿರ್ಣಯಗಳ ಪರವಾಗಿ ಮತ ಚಲಾಯಿಸಿತು ಮತ್ತು ಮೂರು ನಿರ್ಣಯಗಳಿಂದ ದೂರವಿತ್ತು" ಎಂದು ಜೈಶಂಕರ್ ಹೇಳಿದ್ದಾರೆ.

ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತ ಪ್ಯಾಲೆಸ್ತೀನ್‌ಗೆ ಮಹತ್ವದ ಮಾನವೀಯ ನೆರವು ನೀಡಿದೆ. ಸಂಘರ್ಷ ಪ್ರಾರಂಭವಾದಾಗಿನಿಂದ, ಕೇಂದ್ರ ಸರ್ಕಾರ ಸರಿಸುಮಾರು 70 ಮೆಟ್ರಿಕ್ ಟನ್‌ಗಳ ನೆರವನ್ನು ವಿತರಿಸಿದೆ, ಇದರಲ್ಲಿ 16.5 ಮೆಟ್ರಿಕ್ ಟನ್ ಔಷಧಗಳು ಮತ್ತು ವೈದ್ಯಕೀಯ ಸರಬರಾಜುಗಳು ಎರಡು ಹಂತಗಳಲ್ಲಿ ಸೇರಿವೆ. ಹೆಚ್ಚುವರಿಯಾಗಿ, 2024 ರಲ್ಲಿ ಪ್ಯಾಲೇಸ್ಟಿನಿಯನ್ ನಿರಾಶ್ರಿತರಿಗೆ (UNRWA) ಯುನೈಟೆಡ್ ನೇಷನ್ಸ್ ರಿಲೀಫ್ ಅಂಡ್ ವರ್ಕ್ಸ್ ಏಜೆನ್ಸಿಗೆ $5 ಮಿಲಿಯನ್ ನ್ನು ವಿತರಿಸಲಾಯಿತು ಎಂದು ಜೈಶಂಕರ್ ವಿವರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT