ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ 
ದೇಶ

'ಸ್ನೇಹಿತ' ಫಡ್ನವಿಸ್ ಪ್ರಮಾಣವಚನಕ್ಕೆ ರಾಜ್ ಠಾಕ್ರೆ ಗೈರು

ನೂತನ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಪ್ರಮಾಣವಚನ ಸಮಾರಂಭಕ್ಕೆ ಗೈರು ಆಗಿರುವ ರಾಜ್ ಠಾಕ್ರೆ ಅವರು, ಎಕ್ಸ್‌ನಲ್ಲಿ ತಮ್ಮ 'ಸ್ನೇಹಿತ' ದೇವೇಂದ್ರ ಫಡ್ನವಿಸ್‌ಗೆ ಶುಭ ಹಾರೈಸಿದ್ದಾರೆ.

ಮುಂಬೈ: ಮಹಾಯುತಿ ಸರ್ಕಾರ 'ನಂಬಲಾಗದ' ಜನಾದೇಶದೊಂದಿಗೆ ಮಹಾರಾಷ್ಟ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬಂದಿದ್ದು, 'ರಾಜ್ಯ, ಮರಾಠಿ ಜನರು, ಭಾಷೆ ಮತ್ತು ಸಂಸ್ಕೃತಿ'ಗಾಗಿ ಸರಿಯಾದ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಆಶಿಸುವುದಾಗಿ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಅಧ್ಯಕ್ಷ ರಾಜ್ ಠಾಕ್ರೆ ಅವರು ಗುರುವಾರ ಹೇಳಿದ್ದಾರೆ.

ನೂತನ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಪ್ರಮಾಣವಚನ ಸಮಾರಂಭಕ್ಕೆ ಗೈರು ಆಗಿರುವ ರಾಜ್ ಠಾಕ್ರೆ ಅವರು, ಎಕ್ಸ್‌ನಲ್ಲಿ ತಮ್ಮ 'ಸ್ನೇಹಿತ' ದೇವೇಂದ್ರ ಫಡ್ನವಿಸ್‌ಗೆ ಶುಭ ಹಾರೈಸಿದ್ದಾರೆ.

2019 (ವಿಧಾನಸಭಾ ಚುನಾವಣೆಯ ನಂತರ) ಮತ್ತು 2022 ರಲ್ಲಿ(ಮಹಾ ವಿಕಾಸ್ ಅಘಾಡಿ ಸರ್ಕಾರದ ಪತನದ ನಂತರ) ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಹೊಂದಿದ್ದರೂ ಫಡ್ನವೀಸ್ ಮುಖ್ಯಮಂತ್ರಿಯಾಗಲು ಸಾಧ್ಯವಾಗಲಿಲ್ಲ.

'ಈ ಬಾರಿ ಜನರು ಮಹಾಯುತಿಗೆ ನಂಬಲಾಗದ ಜನಾದೇಶ ನೀಡಿದ್ದಾರೆ. ಅದಕ್ಕಿಂತ ಹೆಚ್ಚಾಗಿ ದೇವೇಂದ್ರ ಫಡ್ನವಿಸ್ ನಾಯಕತ್ವಕ್ಕೆ ಬೆಂಬಲ ನೀಡಿದ್ದಾರೆ. ಈ ದೊಡ್ಡ ಜನಾದೇಶವನ್ನು ರಾಜ್ಯ, ಮರಾಠಿ ಜನರ, ಭಾಷೆ ಮತ್ತು ಸಂಸ್ಕೃತಿಗೆ ಸರಿಯಾಗಿ ಬಳಸಲ್ಪಡುತ್ತದೆ ಎಂದು ನಾನು ಭಾವಿಸುತ್ತೇನೆ,' ಎಂದು ಠಾಕ್ರೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT