ನಟ ಅಲ್ಲು ಅರ್ಜುನ್ 
ದೇಶ

Pushpa-2: ನೂಕುನುಗ್ಗಲಿನಲ್ಲಿ ಮಹಿಳೆ ಸಾವು; ಕುಟುಂಬಕ್ಕೆ ಅಲ್ಲು ಅರ್ಜುನ್ 25 ಲಕ್ಷ ರೂ ನೆರವು ಘೋಷಣೆ

ನಾವು ಏನೇ ಮಾಡಿದರೂ, ಈ ನಷ್ಟವನ್ನು ತುಂಬಿಸಲಾಗದು. ನಾವು ಭಾವನಾತ್ಮಕವಾಗಿ ನಿಮ್ಮೊಂದಿಗೆ ಇದ್ದೇವೆ ಎಂದು ಹೇಳಲು ಬಯಸುತ್ತೇನೆ. ನಿಮಗೆ ಏನೇ ಸಹಾಯ ಬೇಕಾದರೂ ನಾವಿದ್ದೇವೆ.

ಹೈದರಾಬಾದ್: ಪುಷ್ಪ-2: ದಿ ರೂಲ್ ಸಿನಿಮಾದ ಪ್ರೀಮಿಯರ್ ಶೋ ವೇಳೆಯಲ್ಲಿ ಉಂಟಾದ ನೂಕುನುಗ್ಗಲಿನಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದ ಮಹಿಳೆಯ ಕುಟುಂಬಕ್ಕೆ ರೂ. 25 ಲಕ್ಷ ಆರ್ಥಿಕ ನೆರವನ್ನು ನಟ ಅಲ್ಲು ಅರ್ಜುನ್ ಘೋಷಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವಿಡಿಯೋ ಫೋಸ್ಟ್ ಮಾಡಿರುವ ಅಲ್ಲು ಅರ್ಜುನ್, ಈ ನೋವಿನ ಪರಿಸ್ಥಿತಿಯಲ್ಲಿ ದುಃಖಿತ ಕುಟುಂಬಕ್ಕೆ ಅವರು ಒಬ್ಬಂಟಿಯಾಗಿಲ್ಲ ಎಂದು ಭರವಸೆ ನೀಡಲು ಬಯಸುತ್ತೇನೆ. ಅವರ ಕುಟುಂಬವನ್ನು ವೈಯಕ್ತಿಕವಾಗಿ ಭೇಟಿಯಾಗುವುದಾಗಿ ಹೇಳಿದ್ದಾರೆ.

ನಾವು ಏನೇ ಮಾಡಿದರೂ, ಈ ನಷ್ಟವನ್ನು ತುಂಬಿಸಲಾಗದು. ನಾವು ಭಾವನಾತ್ಮಕವಾಗಿ ನಿಮ್ಮೊಂದಿಗೆ ಇದ್ದೇವೆ ಎಂದು ಹೇಳಲು ಬಯಸುತ್ತೇನೆ. ನಿಮಗೆ ಏನೇ ಸಹಾಯ ಬೇಕಾದರೂ ನಾವಿದ್ದೇವೆ.ಸಂತ್ರಸ್ತೆಯ ಮಕ್ಕಳ ಭವಿಷ್ಯಕ್ಕಾಗಿ ನನ್ನ ಪರವಾಗಿ ರೂ. 25 ಲಕ್ಷ ನೆರವು ನೀಡಲು ಬಯಸುತ್ತೇನೆ. ಯಾವುದೇ ರೀತಿಯ ನೆರವಿಗೂ ಅವರೊಂದಿಗೆ ಇರುತ್ತೇನೆ ಎಂದು ಹೇಳಿ ಸಂತಾಪ ಸೂಚಿಸಿದ್ದಾರೆ.

ಬುಧವಾರ ಪುಷ್ಪ 2 ಪ್ರೀಮಿಯರ್ ಶೋ ವೇಳೆ ಇಲ್ಲಿನ ಸಂಧ್ಯಾ ಚಿತ್ರಮಂದಿರಕ್ಕೆ ಬಂದಿದ್ದ ನಟ ಅಲ್ಲು ಅರ್ಜುನ್ ಅವರನ್ನು ನೋಡಲು ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರಿಂದ ಉಂಟಾದ ನೂಕುನುಗ್ಗಲಿನಲ್ಲಿ 35 ವರ್ಷದ ಮಹಿಳೆ ಮೃತಪಟ್ಟಿದ್ದರು. ಅವರ 9 ವರ್ಷದ ಮಗ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT