ಜಗದೀಪ್ ಧಂಕರ್ - ಅಭಿಷೇಕ್ ಮನು ಸಿಂಘ್ವಿ 
ದೇಶ

Rajya Sabha: ಸಿಂಘ್ವಿ ಆಸನದಲ್ಲಿ ನೋಟಿನ ಕಂತೆ ಪತ್ತೆ; ತನಿಖೆಗೆ ಧಂಕರ್ ಆದೇಶ; ಕಾಂಗ್ರೆಸ್ ಸಂಸದ ತಿರುಗೇಟು

ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಅವರಿಗೆ ಮೀಸಲಾಗಿದ್ದ ಆಸನದಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿವೆ. ಈ ಕುರಿತು ತನಿಖೆಗೆ ಆದೇಶಿಸಲಾಗಿದೆ' ಎಂದು ರಾಜ್ಯಸಭೆ ಸಭಾಪತಿ ಜಗದೀಪ್ ಧಂಕರ್ ಹೇಳಿದ್ದಾರೆ.

ನವದೆಹಲಿ: ಚಳಿಗಾಲದ ಅಧಿವೇಶನದ ಆರಂಭದಲ್ಲೇ ಹಲವು ನಾಟಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಕಾಂಗ್ರೆಸ್ ಸಂಸದನ ಆಸನದಲ್ಲಿ ಹಣದ ಕಂತೆ ಪತ್ತೆಯಾಗಿರುವುದು ಇದೀಗ ಭಾರಿ ಸುದ್ದಿಗೆ ಗ್ರಾಸವಾಗಿದೆ.

ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಅವರಿಗೆ ಮೀಸಲಾಗಿದ್ದ ಆಸನದಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿವೆ. ಈ ಕುರಿತು ತನಿಖೆಗೆ ಆದೇಶಿಸಲಾಗಿದೆ' ಎಂದು ರಾಜ್ಯಸಭೆ ಸಭಾಪತಿ ಜಗದೀಪ್ ಧಂಕರ್ ಹೇಳಿದ್ದಾರೆ.

ಗುರುವಾರ ಸದನವನ್ನು ಮುಂದೂಡಿದ ಬಳಿಕ ಪರಿಶೀಲನೆ ವೇಳೆ ಆಸನ ಸಂಖ್ಯೆ 222ರಲ್ಲಿ ಭದ್ರತಾ ಸಿಬ್ಬಂದಿ ಕಂತೆ ಕಂತೆ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಸದನಕ್ಕೆ ತಿಳಿಸುವುದು ನನ್ನ ಕರ್ತವ್ಯವಾಗಿದೆ. ನೋಟುಗಳು ನಕಲಿಯೋ ಅಥವಾ ಅಸಲಿಯೋ ಎಂಬುದು ತಿಳಿದು ಬಂದಿಲ್ಲ. ಸದನದ ಶಿಷ್ಟಾಚಾರದಂತೆ ತನಿಖೆಗೆ ಆದೇಶಿಸಲಾಗಿದೆ ಎಂದು ಜಗದೀರ್ ಧಂಕರ್ ಅವರು ಮಾಹಿತಿ ನೀಡಿದ್ದಾರೆ.

ಯಾರಾದರೂ ಕರೆನ್ಸಿ ನೋಟುಗಳು ತಮ್ಮದು ಎಂದು ಕೇಳುತ್ತಾರೆ ಎಂದು ನಾನು ನಿರೀಕ್ಷಿಸುತ್ತಿದ್ದೆ. ಆದರೆ ಯಾರೂ ಅದನ್ನು ಇಲ್ಲಿಯವರೆಗೆ ತಮ್ಮದೆಂದು ಒಪ್ಪಿಕೊಂಡಿಲ್ಲ. ಜನರು ಅದನ್ನು ಮರೆತುಬಿಡುವ ಆರ್ಥಿಕತೆಯ ಸ್ಥಿತಿಯನ್ನು ಇದು ಪ್ರತಿಬಿಂಬಿಸುತ್ತದೆಯೇ" ಎಂದು ಅವರು ಅಚ್ಚರಿ ವ್ಯಕ್ತಪಡಿಸಿದರು.

ಸಭಾಪತಿಗಳಿಗೆ ಕಾಂಗ್ರೆಸ್ ಸಂಸದ ತಿರುಗೇಟು

ಇನ್ನು ಜಗದೀಪ್ ಧಂಕರ್ ಅವರ ಆರೋಪಕ್ಕೆ ಸಂಸದ ಸಿಂಘ್ವಿ ತಿರುಗೇಟು ನೀಡಿದ್ದು, 'ಇದನ್ನು ಕೇಳಿ "ಆಶ್ಚರ್ಯವಾಯಿತು".. ನಾನು ನಿನ್ನೆ ಮಧ್ಯಾಹ್ನ 12.57 ಕ್ಕೆ ಸದನದ ಒಳಗೆ ಪ್ರವೇಶ ಮಾಡಿದೆ. 1 ಗಂಟೆಗೆ ಸದನ ಆರಂಭವಾಯಿತು. ಮಧ್ಯಾಹ್ನ 1 ರಿಂದ 1:30 ರವರೆಗೆ ನಾನು ಅಯೋಧ್ಯಾ ಪ್ರಸಾದ್ ಅವರೊಂದಿಗೆ ಕುಳಿತುಕೊಂಡೆ.

ಕ್ಯಾಂಟೀನ್ ಮತ್ತು ಮಧ್ಯಾಹ್ನ 1:30 ಕ್ಕೆ ನಾನು ಸಂಸತ್ತನ್ನು ಬಿಟ್ಟೆ, ನಾನು ಸದನದಲ್ಲಿ ಒಟ್ಟು 3 ನಿಮಿಷಗಳು ಮತ್ತು ಕ್ಯಾಂಟೀನ್‌ನಲ್ಲಿ ನನ್ನ ವಾಸ್ತವ್ಯವು 30 ನಿಮಿಷಗಳು ಮಾತ್ರ ಇತ್ತು. ಅಂತಹ ವಿಷಯಗಳಲ್ಲಿಯೂ ರಾಜಕೀಯ ಮಾಡಲಾಗುತ್ತಿದೆ ಎಂದು ಹೇಳಿದರು.

ಅಂತೆಯೇ ಆ ಹಣ ನನ್ನದಲ್ಲ.. ಖಂಡಿತವಾಗಿ ಬೇರಾರೋ ಅದನ್ನು ತಂದು ನನ್ನ ಆಸನದ ಬಳಿ ಇಟ್ಟು ಹೋಗಿರಬಹುದು. ಈ ಬಗ್ಗೆ ವಿಚಾರಣೆ ನಡೆಯಬೇಕು. ನಮ್ಮಲ್ಲಿ ಪ್ರತಿಯೊಬ್ಬರೂ ಆಸನವನ್ನು ಲಾಕ್ ಮಾಡಬಹುದಾದ ಮತ್ತು ಕೀಲಿಯನ್ನು ಸಂಸದರು ಮನೆಗೆ ಒಯ್ಯಬಹುದಾದ ಆಸನವನ್ನು ಹೊಂದಿರಬೇಕು ಎಂದು ಸಿಂಘ್ವಿ ವ್ಯಂಗ್ಯ ಮಾಡಿದರು.

ಇನ್ನು ರಾಜ್ಯಸಭೆಯಲ್ಲಿ ಸಭಾಪತಿ ಹೇಳಿಕೆ ಗದ್ದಲಕ್ಕೆ ಕಾರಣವಾಯಿತು. ತನಿಖೆ ಪೂರ್ಣಗೊಳ್ಳದ ಹೊರತು ಸಭಾಪತಿ ಸದಸ್ಯರ ಹೆಸರು ಹೇಳಬಾರದಿತ್ತು ಎಂದು ರಾಜ್ಯಸಭೆ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಅಂದಹಾಗೆ ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25 ರಂದು ಪ್ರಾರಂಭವಾಗಿದ್ದು, ಡಿಸೆಂಬರ್ 20ರವರೆಗೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT