ಲೋಕಸಭೆ ಕಲಾಪ 
ದೇಶ

NDA, ವಿಪಕ್ಷ ಸಂಸದರ ನಡುವೆ ವಾಗ್ಯುದ್ಧ: ಡಿಸೆಂಬರ್ 9 ರವರೆಗೆ ಲೋಕಸಭೆ ಕಲಾಪ ಮುಂದೂಡಿಕೆ

ಅಮೆರಿಕ ಮೂಲದ ಬಿಲಿಯನರ್ ಹೂಡಿಕೆದಾರ ಜಾರ್ಜ್ ಸೊರೊಸ್ ಜೊತೆಗೆ ಕಾಂಗ್ರೆಸ್ ನಂಟು ಹೊಂದಿದೆ ಎಂದು ಬಿಜೆಪಿ ಆರೋಪದೊಂದಿಗೆ ಸದನದಲ್ಲಿ ಗದ್ದಲ, ಕೋಲಾಹಲವೇರ್ಪಟ್ಟು, ಸ್ಪೀಕರ್ ಓಂ ಬಿರ್ಲಾ ಸೋಮವಾರದವರೆಗೂ ಕಲಾಪವನ್ನು ಮುಂದೂಡಿದರು.

ನವದೆಹಲಿ: ಲೋಕಸಭೆಯಲ್ಲಿ ಶುಕ್ರವಾರ ಬೆಳಗ್ಗೆ ಬಿಜೆಪಿ ಹಾಗೂ ಪ್ರತಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ಉಂಟಾದ ಹಿನ್ನೆಲೆಯಲ್ಲಿ ಮಧ್ಯಾಹ್ನದವರೆಗೂ ಮುಂದೂಡಲಾಗಿತ್ತು.

ಬಳಿಕ ಸದನ ಸಮಾವೇಶಗೊಂಡಾಗಲೂ ಅಮೆರಿಕ ಮೂಲದ ಬಿಲಿಯನರ್ ಹೂಡಿಕೆದಾರ ಜಾರ್ಜ್ ಸೊರೊಸ್ ಜೊತೆಗೆ ಕಾಂಗ್ರೆಸ್ ನಂಟು ಹೊಂದಿದೆ ಎಂದು ಬಿಜೆಪಿ ಆರೋಪದೊಂದಿಗೆ ಸದನದಲ್ಲಿ ಗದ್ದಲ, ಕೋಲಾಹಲವೇರ್ಪಟ್ಟು, ಸ್ಪೀಕರ್ ಓಂ ಬಿರ್ಲಾ ಸೋಮವಾರದವರೆಗೂ ಕಲಾಪವನ್ನು ಮುಂದೂಡಿದರು.

ಪ್ರಶ್ನೋತ್ತರ ವೇಳೆಯಲ್ಲಿ ವಿರೋಧ ಪಕ್ಷದ ಸಂಸದರು ತಮ್ಮ ವಿಷಯಗಳನ್ನು ಪ್ರಸ್ತಾಪಿಸಲು ಪ್ರಯತ್ನಿಸಿದ ನಂತರ ಸದನದ ಘಟನೆ ಕುಗ್ಗಿಸಲು ಅವಕಾಶ ನೀಡುವುದಿಲ್ಲ ಎಂದು ಸ್ಪೀಕರ್ ಹೇಳುವುದರೊಂದಿಗೆ ಲೋಕಸಭೆಯ ಕಲಾಪವನ್ನು ಮಧ್ಯಾಹ್ನ 12 ಕ್ಕೆ ಮುಂದೂಡಲಾಯಿತು.

ಬಹುತೇಕ ಕಾಂಗ್ರೆಸ್ ಸದಸ್ಯರು ಕೆಲವು ವಿಷಯಗಳನ್ನು ಪ್ರಸ್ತಾಪಿಸಲು ಪ್ರಯತ್ನಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸ್ಪೀಕರ್ ಇದು ಪ್ರಶ್ನೋತ್ತರ ಸಮಯವಾಗಿರುವುದರಿಂದ ಇತರ ವಿಷಯಗಳ ಚರ್ಚೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿ ಸದನವನ್ನು ಮುಂದೂಡಿದರು.

ಅದಾನಿ ಸಮೂಹ ಮತ್ತು ಸಂಭಾಲ್ ಹಿಂಸಾಚಾರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಲು ಒತ್ತಾಯಿಸಿ ಪ್ರತಿಪಕ್ಷಗಳ ಪ್ರತಿಭಟನೆಯಿಂದಾಗಿ ಚಳಿಗಾಲದ ಅಧಿವೇಶನದ ಮೊದಲ ವಾರ ಸದನ ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗಲಿಲ್ಲ. ಆದರೂ ಮಂಗಳವಾರ ಮತ್ತು ಬುಧವಾರ ಸರಿಯಾಗಿ ಕಾರ್ಯನಿರ್ವಹಿಸಿತು.

ಬಿಜೆಪಿ ಸದಸ್ಯ ನಿಶಿಕಾಂತ್ ದುಬೆ ವಿದೇಶಿ ಹೂಡಿಕೆದಾರ ಜಾರ್ಜ್ ಸೊರೊಸ್ ಮತ್ತು ವಿರೋಧ ಪಕ್ಷದ ನಾಯಕರ ನಡುವೆ ಸಂಬಂಧವಿದೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಭಾರತದ ಯಶಸ್ಸನ್ನು ಹಾಳು ಮಾಡಲು ಅಂತರರಾಷ್ಟ್ರೀಯ ಪಿತೂರಿ ನಡೆಯುತ್ತಿದೆ ಎಂದು ಹೇಳಿದ ನಂತರ ಸದನದಲ್ಲಿ ತೀವ್ರ ಗದ್ದಲ ಉಂಟಾಗಿತ್ತು.

ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್ ಮತ್ತಿತರರು ದುಬೆ ಮಾಡಿದ ಆರೋಪಗಳನ್ನು ಎದುರಿಸಲು ಪ್ರಯತ್ನಿಸಿದರು, ಇದು ಕೋಲಾಹಲಕ್ಕೆ ಕಾರಣವಾಯಿತು ಮತ್ತು ಸದನವನ್ನು ಮುಂದೂಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಾರತ ಮೇಲೆ ಶೇ.50 ಸುಂಕ ರದ್ದು ಮಾಡಿ, ಇದರಿಂದ ನಮ್ಮ ದೇಶಕ್ಕೇ ನಷ್ಟ': Donald Trump ಗೆ ಸೆನೆಟ್ ಸದಸ್ಯರ ಬೇಡಿಕೆ, ನಿರ್ಣಯ ಮಂಡನೆ

ಕಾಂಗ್ರೆಸ್‌ ಪ್ರತಿಭಟನೆಗೆ ಹೊಸ ಅಸ್ತ್ರ: ಆಳಂದ ಮತಗಳ್ಳತನ ಪ್ರಕರಣದಲ್ಲಿ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ CID ಚಾರ್ಜ್ ಶೀಟ್ ಸಲ್ಲಿಕೆ

ಜನೌಷಧಿ ಕೇಂದ್ರಗಳಿಗೆ ಶಕ್ತಿ ತುಂಬಿದ ಕರ್ನಾಟಕ, ಕೇರಳ, ತಮಿಳುನಾಡು!

MUDA Scam: ಮಾಜಿ ಆಯುಕ್ತರಿಂದ ಸಂಬಂಧಿಕರ ಮೂಲಕ ನಗದು ಲಂಚ ಪಡೆದು ನಿವೇಶನ ಹಂಚಿಕೆ!

ಒಂದು ತಿಂಗಳೊಳಗೆ ರಾಜ್ಯಾದ್ಯಂತ ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ: ಶಿವರಾಜ್ ತಂಗಡಗಿ

SCROLL FOR NEXT