ನಕ್ಸಲೀಯರ ಸಾಂದರ್ಭಿಕ ಚಿತ್ರ 
ದೇಶ

ಪೊಲೀಸ್ ಮಾಹಿತಿದಾರರೆಂಬ ಶಂಕೆ: ಅಂಗನವಾಡಿ ಸಹಾಯಕಿಯನ್ನು ಕೊಂದ ನಕ್ಸಲೀಯರು

ಲಕ್ಷ್ಮೀ ಪದಂ (45) ಎಂಬುವರ ಮನೆಗೆ ನುಗ್ಗಿದ ಅಪರಿಚಿತ ನಕ್ಸಲೀಯರು ಮನೆಯವರ ಎದುರೇ ಕತ್ತು ಹಿಸುಕಿ ಹತ್ಯೆ ಮಾಡಿದ್ದಾರೆ. ಬಳಿಕ ಶವವನ್ನು ಮನೆಯ ಅಂಗಳದಲ್ಲಿ ಎಸೆದು ಪರಾರಿಯಾಗಿದ್ದಾರೆ.

ಬಿಜಾಪುರ: ಪೊಲೀಸ್ ಮಾಹಿತಿದಾರರೆಂಬ ಶಂಕೆಯ ಮೇಲೆ ಮಹಿಳಾ ಅಂಗನವಾಡಿ ಸಹಾಯಕಿಯನ್ನು ನಕ್ಸಲೀಯರು ಹತ್ಯೆಗೈದಿರುವ ಘಟನೆ ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಡೆದಿದೆ. ಬಸಗೂಡ ಪೊಲೀಸ್ ಠಾಣಾ ವ್ಯಾಪ್ತಿಯ ತಿಮ್ಮಾಪುರ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗ್ರಾಮದ ಲಕ್ಷ್ಮೀ ಪದಂ (45) ಎಂಬುವರ ಮನೆಗೆ ನುಗ್ಗಿದ ಅಪರಿಚಿತ ನಕ್ಸಲೀಯರು ಮನೆಯವರ ಎದುರೇ ಕತ್ತು ಹಿಸುಕಿ ಹತ್ಯೆ ಮಾಡಿದ್ದಾರೆ. ಬಳಿಕ ಶವವನ್ನು ಮನೆಯ ಅಂಗಳದಲ್ಲಿ ಎಸೆದು ಪರಾರಿಯಾಗಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ನಂತರ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

ಸ್ಥಳದಲ್ಲಿ ಮಾವೋವಾದಿಗಳ ಮದ್ದೇಡ್ ಪ್ರದೇಶ ಸಮಿತಿಯ ಕರಪತ್ರ ಪತ್ತೆಯಾಗಿದ್ದು, ಅದರಲ್ಲಿ ಪೊಲೀಸ್ ಮಾಹಿತಿದಾರರಂತೆ ಮಹಿಳೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ದಾಳಿಕೋರರನ್ನು ಪತ್ತೆಹಚ್ಚಲು ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಈ ಘಟನೆಯೊಂದಿಗೆ, ಬಿಜಾಪುರ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾರ್ ವಿಭಾಗದ ವಿವಿಧ ಕಡೆಗಳಲ್ಲಿ ಈ ವರ್ಷ ಇದುವರೆಗೆ 60 ಕ್ಕೂ ಹೆಚ್ಚು ಜನರನ್ನು ನಕ್ಸಲೀಯರು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಪ್ರವಾಹದಿಂದ ಬೆಳೆಹಾನಿ: ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8,500 ರೂ ಪರಿಹಾರ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮಳೆ ಹಾನಿಯಿಂದ 52 ಮಂದಿ ಸಾವು; ವಾರಸುದಾರರಿಗೆ ಪರಿಹಾರ ವಿತರಣೆ: ಸಿಎಂ ಸಿದ್ದರಾಮಯ್ಯ

Gaza peace deal: ಹಮಾಸ್‌ಗೆ ಮೂರ್ನಾಲ್ಕು ದಿನಗಳ ಗಡುವು, ನಕಾರ ಮಾಡಿದ್ರೆ 'ನರಕ'ಕ್ಕೆ ದಾರಿ ತೋರಿಸ್ತಿವಿ! ಟ್ರಂಪ್ ಗುಡುಗು

Rahul Security: ರಾಹುಲ್, ಸೋನಿಯಾ, ಪ್ರಿಯಾಂಕಾ ಜೀವಕ್ಕೆ ಅಪಾಯ; ಭದ್ರತೆ ಹೆಚ್ಚಳಕ್ಕೆ ಕಾಂಗ್ರೆಸ್ ಒತ್ತಾಯ

ನಾನು ಜೋಕರ್ ರೀತಿ ನಿಂತಿದ್ದೆ: ಏಷ್ಯಾಕಪ್ ಟ್ರೋಫಿ ಖಾಸಗಿ ವ್ಯಕ್ತಿಯ ಆಸ್ತಿಯಲ್ಲ; BCCI ಉಪಾಧ್ಯಕ್ಷರ ಪ್ರಶ್ನೆಗೆ ನಖ್ವಿ ತತ್ತರ!

SCROLL FOR NEXT