ರಾಬರ್ಟ್ ವಾದ್ರಾ 
ದೇಶ

ಜನ ಸಂಕಷ್ಟದಲ್ಲಿರುವಾಗ ಮಸೀದಿಗಳ ಸಮೀಕ್ಷೆ ತಪ್ಪು: ರಾಬರ್ಟ್ ವಾದ್ರಾ

ಭಾರತ ವೈವಿಧ್ಯಮಯ, ಜಾತ್ಯತೀತ ರಾಷ್ಟ್ರವಾಗಿರುವುದರಿಂದ ಧರ್ಮ ಮತ್ತು ರಾಜಕೀಯವನ್ನು ಪ್ರತ್ಯೇಕವಾಗಿ ಇಡಬೇಕು ಎಂದು ಪಿಟಿಐಗೆ ತಿಳಿಸಿದ್ದಾರೆ.

ಮುಂಬೈ: ಹಣದುಬ್ಬರದಿಂದ ಜನ ತತ್ತರಿಸುತ್ತಿರುವಾಗ ಮತ್ತು ರೈತರು ಪ್ರತಿಭಟನೆ ನಡೆಸುತ್ತಿರುವಾಗ ಅಭಿವೃದ್ಧಿಯ ಬದಲು 'ಮಸೀದಿಗಳ ಸಮೀಕ್ಷೆ' ರಾಜಕೀಯದ ಕೇಂದ್ರಬಿಂದುವಾಗುತ್ತಿರುವುದು ತಪ್ಪು ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರು ಶನಿವಾರ ಹೇಳಿದ್ದಾರೆ.

ಸಂಭವನೀಯ ಕೋಮು ಗಲಭೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ ವಾದ್ರಾ, ಮಸೀದಿಗಳ ಸಮೀಕ್ಷೆ ನಡೆಸುವುದು ತಪ್ಪು ಎಂದು ಹೇಳಿದರು.

ಭಾರತ ವೈವಿಧ್ಯಮಯ, ಜಾತ್ಯತೀತ ರಾಷ್ಟ್ರವಾಗಿರುವುದರಿಂದ ಧರ್ಮ ಮತ್ತು ರಾಜಕೀಯವನ್ನು ಪ್ರತ್ಯೇಕವಾಗಿ ಇಡಬೇಕು ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ.

ವಾದ್ರಾ ಅವರು ತಮ್ಮ ಆಧ್ಯಾತ್ಮಿಕ ಪ್ರವಾಸದ ಭಾಗವಾಗಿ ದೇಶದ ವಿವಿಧ ಪೂಜಾ ಸ್ಥಳಗಳಿಗೆ ಭೇಟಿ ನೀಡುತ್ತಾರೆ ಮತ್ತು ಶನಿವಾರ ಮುಂಬೈನ ಪ್ರಸಿದ್ಧ ಹಾಜಿ ಅಲಿ ದರ್ಗಾಗೆ ಭೇಟಿ ನೀಡಿ ಚಾದರ್ ಅರ್ಪಿಸಿದರು.

ನನ್ನ ಕುಟುಂಬ ಮತ್ತು ದೇಶದ ಒಳಿತಿಗಾಗಿ ನಾನು ಪ್ರಾರ್ಥಿಸಿದೆ. ಸಮಾಜದಲ್ಲಿ ಸಹೋದರತ್ವ ನೆಲೆಸಲಿ ಎಂದು ನಾನು ಬಯಸುತ್ತೇನೆ ಎಂದು ಅವರು ಹೇಳಿದರು.

ಮಸೀದಿಗಳ ಸಮೀಕ್ಷೆ ತಪ್ಪು ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರ ಪತಿ ವಾದ್ರಾ ಹೇಳಿದ್ದಾರೆ.

ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ನ್ಯಾಯಾಲಯದ ಆದೇಶಿಸಿದ ನಂತರ ನವೆಂಬರ್ 24 ರಂದು ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಭಾರಿ ಹಿಂಸಾಚಾರ ಸಂಭವಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್'ಗೆ VIP ಟ್ರೀಟ್‌ಮೆಂಟ್?: ಕಾನೂನಿನ ಮುಂದೆ ಎಲ್ಲರೂ ಒಂದೇ, ಜೈಲಿನಲ್ಲಿ ಯಾರಿಗೂ ವಿಶೇಷ ಸೌಲಭ್ಯವಿಲ್ಲ; ಸರ್ಕಾರ ಸ್ಪಷ್ಟನೆ