ಮುಂಬೈನಲ್ಲಿ ನಡೆದ ಸಂಪುಟ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಉಪ ಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರು ಸನ್ಮಾನಿಸುತ್ತಿದ್ದಾರೆ. 
ದೇಶ

ಮಹಾರಾಷ್ಟ್ರ ಸರ್ಕಾರದಲ್ಲಿ ಸಚಿವ ಸ್ಥಾನ ಹಂಚಿಕೆ ಗೊಂದಲ: ಮಹಾಯುತಿ ನಾಯಕರಿಗೆ ಖಾತೆ ಹಂಚಿಕೆ ಹಗ್ಗದ ಮೇಲಿನ ನಡಿಗೆ

ಮೈತ್ರಿಕೂಟಕ್ಕೆ 232 ಶಾಸಕರ ಬೆಂಬಲವಿದೆ ಆದರೆ 43 ಸಚಿವರನ್ನು ಮಾತ್ರ ಸಂಪುಟಕ್ಕೆ ಸೇರ್ಪಡೆ ಮಾಡಬಹುದಾಗಿದೆ.

ಮುಂಬೈ: ಅಂತೂ ಇಂತೂ ಮಹಾರಾಷ್ಟ್ರ ಸರ್ಕಾರ ರಚನೆಯಾಗಿದೆ. ಈ ಮಹಾಯುತಿ ಸರ್ಕಾರದಲ್ಲಿ ಖಾತೆಹಂಚಿಕೆ ತಲೆಬಿಸಿ ಶುರುವಾಗಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರು ಪ್ರಮಾಣವಚನ ಸ್ವೀಕರಿಸಿ 24 ಗಂಟೆ ಕಳೆದರೂ ಉಳಿದ ಖಾತೆಗಳ ಹಂಚಿಕೆಯಾಗಿಲ್ಲ.

ಶಿವಸೇನೆ ಶಾಸಕ ಮತ್ತು ಮುಖಂಡ ಸಂಜಯ್ ಶಿರ್ಸಾತ್ ಈ ಬಗ್ಗೆ ಪ್ರತಿಕ್ರಿಯೆ ನೀಡಿ, ಹೊಸ ಸರ್ಕಾರದಲ್ಲಿ ಅನೇಕ ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ಬಯಸುತ್ತಾರೆ, ಆದರೆ ಸಚಿವಾಲಯಗಳು ಸಂಖ್ಯೆಯಲ್ಲಿ ಸೀಮಿತವಾಗಿವೆ. ಮೈತ್ರಿಕೂಟಕ್ಕೆ 232 ಶಾಸಕರ ಬೆಂಬಲವಿದೆ ಆದರೆ 43 ಸಚಿವರನ್ನು ಮಾತ್ರ ಸಂಪುಟಕ್ಕೆ ಸೇರ್ಪಡೆ ಮಾಡಬಹುದಾಗಿದೆ.

ಹಾಗಾದರೆ ಯಾರಿಗೆಲ್ಲ ಖಾತೆ ಹಂಚಿಕೆಯಾಗಬೇಕು ಎಂಬುದು ಒಂದು ದೊಡ್ಡ ಪ್ರಶ್ನೆಯಾಗಿದೆ. ಕಳೆದ ಸರಕಾರದಲ್ಲಿ ಹಲವರು ಅವಕಾಶ ಕೈತಪ್ಪಿದವರು ಈಗ ನಿರೀಕ್ಷೆಯಲ್ಲಿದ್ದಾರೆ. ಪಕ್ಷದ ನಾಯಕತ್ವವು ಎಲ್ಲರಿಗೂ ಸ್ವೀಕಾರಾರ್ಹವಾದ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಎಂಬ ಭರವಸೆ ನಮಗಿದೆ ಎಂದು ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಒಬ್ಬರಾಗಿರುವ ಶಿರ್ಸಾತ್ ಹೇಳಿದ್ದಾರೆ.

132 ಸ್ಥಾನಗಳನ್ನು ಹೊಂದಿರುವ ಏಕೈಕ ದೊಡ್ಡ ಪಕ್ಷವಾಗಿ, ಬಿಜೆಪಿಯು ತನ್ನ ಮಿತ್ರಪಕ್ಷಗಳಾದ ಶಿವಸೇನೆ ಮತ್ತು ಎನ್‌ಸಿಪಿಗೆ ಶೇಕಡಾ 40 ರಷ್ಟು ಖಾತೆ ಬಿಟ್ಟುಕೊಡಲು ಸಿದ್ಧವಾಗಿರುವಾಗ ಶೇಕಡಾ 60ರಷ್ಟು ಬಿಜೆಪಿಯಲ್ಲಿಯೇ ಉಳಿಯುತ್ತವೆ.

ಮಹಾಯುತಿಯಲ್ಲಿ 57 ಸ್ಥಾನಗಳನ್ನು ಹೊಂದಿರುವ ಶಿವಸೇನೆ ಎರಡನೇ ಅತಿದೊಡ್ಡ ಪಕ್ಷವಾಗಿದೆ, ಶಿವಸೇನೆಗೆ ಎರಡನೇ ಅತಿದೊಡ್ಡ ಸಚಿವಾಲಯಗಳನ್ನು ನೀಡಬೇಕು ಎಂದು ಶಿವಸೇನೆ ನಾಯಕರೊಬ್ಬರು ಹೇಳುತ್ತಾರೆ. ಆದಾಗ್ಯೂ, ಎನ್‌ಸಿಪಿ ಮತ್ತು ಶಿವಸೇನೆಗೆ ಸಮಾನ ಸಂಖ್ಯೆಯಲ್ಲಿ ಖಾತೆ ಹಂಚಿಕೆಯಾಗಬೇಕು ಎಂದು ಎನ್‌ಸಿಪಿ ನಾಯಕ ಮತ್ತು ಮಾಜಿ ಸಚಿವ ಛಗನ್ ಭುಜಬಲ್ ಹೇಳುತ್ತಾರೆ.

ಹಿಂದಿನ ಸರ್ಕಾರದಲ್ಲಿ ಶಿವಸೇನೆ ಮತ್ತು ಎನ್‌ಸಿಪಿ ಸಮಾನ ಸಂಖ್ಯೆಯ ಶಾಸಕರನ್ನು ಹೊಂದಿದ್ದವು, ಆದರೂ ಸರ್ಕಾರದಲ್ಲಿ ಶಿವಸೇನೆ ಮೇಲುಗೈ ಸಾಧಿಸಿದೆ, ಸಿಎಂ ಸ್ಥಾನವನ್ನು ಸಹ ಪಡೆದುಕೊಂಡಿದೆ ಎಂದು ಭುಜಬಲ್ ಹೇಳುತ್ತಾರೆ. ಈಗ, ಅಧಿಕಾರ ಹಂಚಿಕೆಯನ್ನು ಬದಲಾಯಿಸಬೇಕಾಗಿದೆ. ಎನ್‌ಸಿಪಿಯು ಶಿವಸೇನೆಗೆ ಸಮಾನವಾದ ಸಚಿವಾಲಯಗಳನ್ನು ಪಡೆಯಬೇಕು. ನಾವು ಸಹ ಸಚಿವಾಲಯದಲ್ಲಿ ಗೌರವಾನ್ವಿತ ಪಾಲುದಾರರಾಗಿದ್ದೇವೆ ಎಂದರು.

ಬಿಜೆಪಿಯ ಹಿರಿಯ ನಾಯಕರು ತಮಗೆ ಭಾರೀ ಜನಾದೇಶ ಸಿಕ್ಕಿರುವುದಕ್ಕೆ ತುಂಬಾ ಸಂತೋಷವಾಗಿದೆ, ಆದರೆ ಇಂತಹ ಪರಿಸ್ಥಿತಿಯಲ್ಲಿ ಎಲ್ಲರನ್ನೂ ಸಮಾಧಾನಪಡಿಸುವುದು ಕಷ್ಟ ಎಂದರು. ಹಿಂದಿನ ಸರಕಾರದಲ್ಲಿ ಕೆಲವರನ್ನು ಕಾಯುವಂತೆ ಹೇಳಲಾಗಿದ್ದು ಅವರೀಗ ಮಂತ್ರಿಗಿರಿ ಕೇಳುತ್ತಿದ್ದಾರೆ. ನಾವು ಸಚಿವಾಲಯವನ್ನು ರಚಿಸುವಾಗ ಪ್ರಾದೇಶಿಕ, ಜಾತಿ ಮತ್ತು ಹಿರಿತನದ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳಬೇಕು. ಮಹಾಯುತಿ ನಾಯಕರಿಗೆ ಇದು ಕಠಿಣ ಕೆಲಸವಾಗಿದೆ ಎಂದು ಬಿಜೆಪಿ ನಾಯಕರೊಬ್ಬರು ಪರಿಸ್ಥಿತಿ ಬಗ್ಗೆ ಹೇಳುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT