ಸಂಗ್ರಹ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಸಹೋದ್ಯೋಗಿಗೆ ಗುಂಡಿಕ್ಕಿ ಕೊಂದ ಪೊಲೀಸ್​ ತಾನೂ ಆತ್ಮಹತ್ಯೆ

ಪ್ರಾಥಮಿಕ ತನಿಖೆಯಲ್ಲಿ ಇಬ್ಬರು ಸೋದರ ಸಂಬಂಧಿಯಾಗಿದ್ದು, ಹತ್ಯೆ ಹಾಗೂ ಆತ್ಮಹತ್ಯೆ ಪ್ರಕರಣ ಎಂದು ತಿಳಿದು ಬಂದಿದೆ.

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರ ಜಿಲ್ಲೆಯ ಕಾಳಿ ಮಠ ದೇವಾಲಯದ ಬಳಿ ವಾಹನವೊಂದರಲ್ಲಿ ಇಬ್ಬರು ಪೊಲೀಸರ ಮೃತದೇಹಗಳು ಪತ್ತೆಯಾಗಿದ್ದು, ಮೃತದೇಹದ ಮೇಲೆ ವ ಗುಂಡೇಟಿನ ಗಾಯಗಳು ಪತ್ತೆಯಾಗಿವೆ.

ಇಬ್ಬರೂ ಪೊಲೀಸ್ ಸಿಬ್ಬಂದಿಗಳು ಸೋಪೋರ್‌ನಿಂದ ಉಧಂಪುರದ ತಲ್ವಾರದಲ್ಲಿರುವ ತರಬೇತಿ ಕೇಂದ್ರಕ್ಕೆ ತೆರಳುತ್ತಿದ್ದಾಗ ಬೆಳಗ್ಗೆ 6.30ರ ಸುಮಾರಿದೆ ಘಟನೆ ನಡೆದಿದೆ ಎಂದು ಎಸ್‌ಎಸ್‌ಪಿ ಉಧಂಪುರ ಅಮೋದ್ ಅಶೋಕ್ ನಾಗ್‌ಪುರೆ ಅವರು ಹೇಳಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಘಟನೆಯಲ್ಲಿ ಎಕೆ -47 ರೈಫಲ್ ಬಳಸಿರುವುದು ಸಾಬೀತಾಗಿದೆ. ಇಬ್ಬರು ಇದು ಸೋದರ ಸಂಬಂಧಿಯಾಗಿದ್ದು, ಹತ್ಯೆ ಮತ್ತು ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದೆ ಎಂದು ತಿಳಿಸಿದ್ದಾರೆ.

ದಾಳಿಗೂ ಮುನ್ನ ಇಬ್ಬರ ನಡುವೆ ಜಗಳವಾಗಿದೆ. ಆರೋಪಿಯು ತನ್ನ ಎಕೆ 47 ಅಸಾಲ್ಟ್​ ರೈಫಲ್​ ಅನ್ನು ದಾಳಿಗೆ ಬಳಸಿದ್ದಾನೆ. ಘಟನೆಯಲ್ಲಿ ಇಬ್ಬರಿಗೆ ಮಾರಣಾಂತಿಕ ಗಾಯಗಳಾಗಿವೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದ ಆಯ್ಕೆ ದರ್ಜೆಯ ಕಾನ್​ಸ್ಟೇಬಲ್​ ಪ್ರಾಣಾಪಾಯದಿಂದ ಪಾರಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಉಧಂಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಮೋದ್ ಅಶೋಕ್ ನಾಗ್ಪುರೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT