ಶೇಖರ್ ಕುಮಾರ್ ಯಾದವ್ TNIE
ದೇಶ

ಬಹುಸಂಖ್ಯಾತರ ಅಪೇಕ್ಷೆಯಂತೆ ಈ ದೇಶ ನಡೆಯುತ್ತೆ; UCC ಶೀಘ್ರದಲ್ಲೇ ಜಾರಿ: VHP ಕಾರ್ಯಕ್ರಮದಲ್ಲಿ ಜಡ್ಜ್ ಶೇಖರ್ ಯಾದವ್

ಇದು ಭಾರತ ಎಂದು ಹೇಳಲು ನನಗೆ ಯಾವುದೇ ಹಿಂಜರಿಕೆಯಿಲ್ಲ. ಈ ದೇಶವು ಭಾರತದಲ್ಲಿ ವಾಸಿಸುವ ಬಹುಸಂಖ್ಯಾತರ ಇಚ್ಛೆಗೆ ಅನುಗುಣವಾಗಿ ನಡೆಯುತ್ತದೆ. ನ್ಯಾಯಾಧೀಶರಾಗಿ ನಾನು ಇದನ್ನು ಹೇಳಬಾರದು ಅಂತಲ್ಲ. ವಾಸ್ತವದಲ್ಲಿ ಕಾನೂನು ಬಹುಮತಕ್ಕೆ ಅನುಗುಣವಾಗಿ ಕೆಲಸ ಮಾಡುತ್ತದೆ ಎಂದರು.

ಪ್ರಯಾಗರಾಜ್‌ನಲ್ಲಿ ವಿಶ್ವ ಹಿಂದೂ ಪರಿಷತ್ (VHP) ಕಾನೂನು ಘಟಕ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಲಹಾಬಾದ್ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರು ಏಕರೂಪ ನಾಗರಿಕ ಸಂಹಿತೆಯ ಸಾಂವಿಧಾನಿಕ ಅಗತ್ಯದ ಕುರಿತು ಉಪನ್ಯಾಸ ನೀಡಿದರು. ಭಾರತದಲ್ಲಿ ಬಹುಸಂಖ್ಯಾತರ ಇಚ್ಛೆಗೆ ಅನುಗುಣವಾಗಿ ದೇಶವು ನಡೆಯುತ್ತದೆ ಎಂದು ಹೇಳಲು ಯಾವುದೇ ಹಿಂಜರಿಕೆಯಿಲ್ಲ ಎಂದರು.

ಇದು ಭಾರತ ಎಂದು ಹೇಳಲು ನನಗೆ ಯಾವುದೇ ಹಿಂಜರಿಕೆಯಿಲ್ಲ. ಈ ದೇಶವು ಭಾರತದಲ್ಲಿ ವಾಸಿಸುವ ಬಹುಸಂಖ್ಯಾತರ ಇಚ್ಛೆಗೆ ಅನುಗುಣವಾಗಿ ನಡೆಯುತ್ತದೆ. ನ್ಯಾಯಾಧೀಶರಾಗಿ ನಾನು ಇದನ್ನು ಹೇಳಬಾರದು ಅಂತಲ್ಲ. ವಾಸ್ತವದಲ್ಲಿ ಕಾನೂನು ಬಹುಮತಕ್ಕೆ ಅನುಗುಣವಾಗಿ ಕೆಲಸ ಮಾಡುತ್ತದೆ. ಕುಟುಂಬ ಅಥವಾ ಸಮಾಜದ ಹಿನ್ನೆಲೆಯಲ್ಲಿ ನೋಡಿ. ಬಹುಸಂಖ್ಯಾತರ ಕಲ್ಯಾಣ ಮತ್ತು ಸಂತೋಷವನ್ನು ತರುವಂತಹದನ್ನು ಮಾತ್ರ ಸ್ವೀಕರಿಸಲಾಗುತ್ತದೆ ಎಂದರು.

ತಮ್ಮ ಭಾಷಣದಲ್ಲಿ ಅವರು ಹಿಂದೂ ಧರ್ಮದಲ್ಲಿ ಅಸ್ಪೃಶ್ಯತೆ, ಸತಿ ಮತ್ತು ಜೌಹರ್‌ನಂತಹ ಆಚರಣೆಗಳನ್ನು ರದ್ದುಗೊಳಿಸಲಾಗಿದೆ. ಆದರೂ ಮುಸ್ಲಿಂ ಸಮುದಾಯದಲ್ಲಿ ಬಹು ಹೆಂಡತಿಯರನ್ನು ಹೊಂದುವ ಅಭ್ಯಾಸವನ್ನು ಅನುಮತಿಸಲಾಗಿದೆ ಎಂದು ಪ್ರಶ್ನೆಯನ್ನು ಎತ್ತಿದರು. ಈ ಅಭ್ಯಾಸ ಸ್ವೀಕಾರಾರ್ಹವಲ್ಲ ಎಂದು ಕರೆದರು. ಶಾಸ್ತ್ರಗಳು ಮತ್ತು ವೇದಗಳಂತಹ ಹಿಂದೂ ಧರ್ಮಗ್ರಂಥಗಳಲ್ಲಿ ಮಹಿಳೆಯರನ್ನು ದೇವತೆಗಳಾಗಿ ಪೂಜಿಸಲಾಗುತ್ತದೆ. ಆದರೆ ಒಂದು ಸಮುದಾಯದ ಸದಸ್ಯರು ಬಹು ಪತ್ನಿಯರನ್ನು ಹೊಂದಲು, ಹಲಾಲಾವನ್ನು ಅಭ್ಯಾಸ ಮಾಡುವ ಅಥವಾ ತ್ರಿವಳಿ ತಲಾಖ್ ಅನ್ನು ಅಭ್ಯಾಸ ಮಾಡುವ ಹಕ್ಕನ್ನು ಇನ್ನೂ ಒತ್ತಾಯಿಸುತ್ತಾರೆ ಎಂದು ಅವರು ಹೇಳಿದರು.

ಈ ದೇಶವು ಸಂವಿಧಾನ ಮತ್ತು ದಂಡನಾ ಕಾನೂನುಗಳನ್ನು ಹೊಂದಿರುವುದರಿಂದ ನಾಗರಿಕ ಕಾನೂನುಗಳನ್ನು ಏಕೀಕರಣಗೊಳಿಸುವುದು ತಾರ್ಕಿಕವಾಗಿದೆ. ಈ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದರು. ನಮ್ಮ ಧರ್ಮಗ್ರಂಥಗಳು ಮತ್ತು ವೇದಗಳಲ್ಲಿ ದೇವತೆಯ ಸ್ಥಾನಮಾನವನ್ನು ಪಡೆದಿರುವ ಮಹಿಳೆಯನ್ನು ನೀವು ಅವಮಾನಿಸಲು ಸಾಧ್ಯವಿಲ್ಲ. ನಾಲ್ಕು ಹೆಂಡತಿಯರನ್ನು ಹೊಂದುವ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ, ಹಲಾಲಾ ಅಥವಾ ತ್ರಿವಳಿ ತಲಾಖ್ ಅನ್ನು ನಿಲ್ಲಿಸಲು ಸಾಧ್ಯವಿಲ್ಲ. ತ್ರಿವಳಿ ತಲಾಖ್' ಹೇಳುವ ಹಕ್ಕು ನಮಗಿದೆ ಎಂದು ನೀವು ಹೇಳುತ್ತೀರಿ, ಆದರೆ ಮಹಿಳೆಯರಿಗೆ ಜೀವನಾಂಶ ಕೊಡುವುದಿಲ್ಲ ಅಂತೀರಿ, ಆದರೆ ಈ ದೇಶವು ಖಂಡಿತವಾಗಿಯೂ UCC ಕಾನೂನನ್ನು ತಂದೆ ತರುತ್ತದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT