ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ 
ದೇಶ

ದೆಹಲಿ ಚುನಾವಣೆ: 20 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ AAP; ಜಂಗ್‌ಪುರ ಕ್ಷೇತ್ರದಿಂದ ಮನೀಶ್ ಸಿಸೋಡಿಯಾ

ಇತ್ತೀಚೆಗಷ್ಟೇ ಎಎಪಿಗೆ ಸೇರ್ಪಡೆಗೊಂಡಿರುವ ಶಿಕ್ಷಣತಜ್ಞ ಅವಧ್ ಓಜಾ ಅವರನ್ನು ಪ್ರಸ್ತುತ ವಿಧಾನಸಭೆಯಲ್ಲಿ ಸಿಸೋಡಿಯಾ ಹೊಂದಿರುವ ಪಟ್ಪರ್ಗಂಜ್ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ.

ನವದೆಹಲಿ: ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷವು(AAP) ಇಂದು ಸೋಮವಾರ ತನ್ನ 20 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಿದ್ದು, ಪಕ್ಷದ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಜಂಗ್‌ಪುರ ಕ್ಷೇತ್ರದಿಂದ ಕಣಕ್ಕಿಳಿಸಿದೆ.

ಇತ್ತೀಚೆಗಷ್ಟೇ ಎಎಪಿಗೆ ಸೇರ್ಪಡೆಗೊಂಡಿರುವ ಶಿಕ್ಷಣತಜ್ಞ ಅವಧ್ ಓಜಾ ಅವರನ್ನು ಪ್ರಸ್ತುತ ವಿಧಾನಸಭೆಯಲ್ಲಿ ಸಿಸೋಡಿಯಾ ಹೊಂದಿರುವ ಪಟ್ಪರ್ಗಂಜ್ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ.

ಈ ಪಟ್ಟಿಯಲ್ಲಿ ಜಿತೇಂದರ್ ಸಿಂಗ್ ಶುಂಟಿ(ಶಹದಾರದಿಂದ ಕಣಕ್ಕಿಳಿದಿದ್ದಾರೆ) ಮತ್ತು ಸುರೀಂದರ್ ಪಾಲ್ ಸಿಂಗ್ ಬಿಟ್ಟು (ತಿಮಾರ್‌ಪುರ್) ಅವರ ಹೆಸರುಗಳೂ ಸೇರಿವೆ, ಅವರು ಇತ್ತೀಚೆಗೆ ಬಿಜೆಪಿಯನ್ನು ತೊರೆದು ಎಎಪಿ ಸೇರಿದ್ದಾರೆ.

ಹಾಲಿ ಎಎಪಿ ಶಾಸಕ ಮತ್ತು ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಬದಲಿಗೆ ಷಂಟಿ ಅವರ ಕ್ಷೇತ್ರದಲ್ಲಿ ನಿಲ್ಲಿಸಿದರೆ, ಸದನದಲ್ಲಿ ಎಎಪಿಯ ಮುಖ್ಯ ಸಚೇತಕ ದಿಲೀಪ್ ಪಾಂಡೆ ಬದಲಿಗೆ ಸುರೀಂದರ್ ಪಾಲ್ ಸಿಂಗ್ ಬಿಟ್ಟು ಅವರನ್ನು ಕಣಕ್ಕಿಳಿಸಲಾಗಿದೆ.

ಎಎಪಿ ತನ್ನ ಮೊದಲ ಪಟ್ಟಿಯಲ್ಲಿ 11 ಅಭ್ಯರ್ಥಿಗಳನ್ನು ಘೋಷಿಸಿತ್ತು. 70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರವರಿಗೆ ಮುನ್ನ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

ಮಾತುಕತೆಗೂ ಮುನ್ನವೇ ಟೆಹ್ರಾನ್‌ಗೆ ದೊಡ್ಡ ಗೆಲುವು; ಫ್ರೀಜ್ ಮಾಡಲಾದ ಇರಾನ್ ಸ್ವತ್ತುಗಳ ಬಿಡುಗಡೆಗೆ ಅಮೆರಿಕ ಒಪ್ಪಿಗೆ!

SCROLL FOR NEXT