ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ 
ದೇಶ

ದೆಹಲಿ ಚುನಾವಣೆ: 20 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ AAP; ಜಂಗ್‌ಪುರ ಕ್ಷೇತ್ರದಿಂದ ಮನೀಶ್ ಸಿಸೋಡಿಯಾ

ಇತ್ತೀಚೆಗಷ್ಟೇ ಎಎಪಿಗೆ ಸೇರ್ಪಡೆಗೊಂಡಿರುವ ಶಿಕ್ಷಣತಜ್ಞ ಅವಧ್ ಓಜಾ ಅವರನ್ನು ಪ್ರಸ್ತುತ ವಿಧಾನಸಭೆಯಲ್ಲಿ ಸಿಸೋಡಿಯಾ ಹೊಂದಿರುವ ಪಟ್ಪರ್ಗಂಜ್ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ.

ನವದೆಹಲಿ: ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷವು(AAP) ಇಂದು ಸೋಮವಾರ ತನ್ನ 20 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಿದ್ದು, ಪಕ್ಷದ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಜಂಗ್‌ಪುರ ಕ್ಷೇತ್ರದಿಂದ ಕಣಕ್ಕಿಳಿಸಿದೆ.

ಇತ್ತೀಚೆಗಷ್ಟೇ ಎಎಪಿಗೆ ಸೇರ್ಪಡೆಗೊಂಡಿರುವ ಶಿಕ್ಷಣತಜ್ಞ ಅವಧ್ ಓಜಾ ಅವರನ್ನು ಪ್ರಸ್ತುತ ವಿಧಾನಸಭೆಯಲ್ಲಿ ಸಿಸೋಡಿಯಾ ಹೊಂದಿರುವ ಪಟ್ಪರ್ಗಂಜ್ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ.

ಈ ಪಟ್ಟಿಯಲ್ಲಿ ಜಿತೇಂದರ್ ಸಿಂಗ್ ಶುಂಟಿ(ಶಹದಾರದಿಂದ ಕಣಕ್ಕಿಳಿದಿದ್ದಾರೆ) ಮತ್ತು ಸುರೀಂದರ್ ಪಾಲ್ ಸಿಂಗ್ ಬಿಟ್ಟು (ತಿಮಾರ್‌ಪುರ್) ಅವರ ಹೆಸರುಗಳೂ ಸೇರಿವೆ, ಅವರು ಇತ್ತೀಚೆಗೆ ಬಿಜೆಪಿಯನ್ನು ತೊರೆದು ಎಎಪಿ ಸೇರಿದ್ದಾರೆ.

ಹಾಲಿ ಎಎಪಿ ಶಾಸಕ ಮತ್ತು ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಬದಲಿಗೆ ಷಂಟಿ ಅವರ ಕ್ಷೇತ್ರದಲ್ಲಿ ನಿಲ್ಲಿಸಿದರೆ, ಸದನದಲ್ಲಿ ಎಎಪಿಯ ಮುಖ್ಯ ಸಚೇತಕ ದಿಲೀಪ್ ಪಾಂಡೆ ಬದಲಿಗೆ ಸುರೀಂದರ್ ಪಾಲ್ ಸಿಂಗ್ ಬಿಟ್ಟು ಅವರನ್ನು ಕಣಕ್ಕಿಳಿಸಲಾಗಿದೆ.

ಎಎಪಿ ತನ್ನ ಮೊದಲ ಪಟ್ಟಿಯಲ್ಲಿ 11 ಅಭ್ಯರ್ಥಿಗಳನ್ನು ಘೋಷಿಸಿತ್ತು. 70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರವರಿಗೆ ಮುನ್ನ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT