ಹೆದ್ದಾರಿಯಲ್ಲಿ ಭದ್ರತಾ ಪಡೆಗಳು ಪರಿಶೀಲನೆ ನಡೆಸುತ್ತಿರುವುದು. 
ದೇಶ

ಜಮ್ಮು-ಕಾಶ್ಮೀರ: ಶ್ರೀನಗರ-ಬಾರಾಮುಲ್ಲಾ ಹೆದ್ದಾರಿಯಲ್ಲಿ IED ಪತ್ತೆ, ತಪ್ಪಿದ ದೊಡ್ಡ ದುರಂತ!

ಬಾರಾಮುಲ್ಲಾ ಜಿಲ್ಲೆಯ ಪಟ್ಟನ್ ಪ್ರದೇಶದ ಪಲ್ಹಲ್ಲಾನ್ ಎಂಬಲ್ಲಿ ಹೆದ್ದಾರಿ ರಸ್ತೆಯ ಪಕ್ಕದಲ್ಲಿ ಪೊಲೀಸರು ಹಾಗೂ ಭದ್ರತಾ ಪಡೆಗಳು ಗಸ್ತು ತಿರುಗುತ್ತಿದ್ದಾಗ ಅನುಮಾನಾಸ್ಪದ ವಸ್ತುವೊಂದನ್ನು ಗುರುತಿಸಿದ್ದಾರೆ.

ಶ್ರೀನಗರ: ಜಮ್ಮು-ಕಾಶ್ಮೀರದ ಶ್ರೀನಗರ-ಬಾರಾಮುಲ್ಲಾ ಹೆದ್ದಾರಿಯಲ್ಲಿ ಪ್ರಬಲವಾದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸಕಾಲಿಕ ಪತ್ತೆಯೊಂದಿಗೆ ದೊಡ್ಡ ದುರಂತವನ್ನು ತಪ್ಪಿಸಲಾಗಿದೆ.

ಬಾರಾಮುಲ್ಲಾ ಜಿಲ್ಲೆಯ ಪಟ್ಟನ್ ಪ್ರದೇಶದ ಪಲ್ಹಲ್ಲಾನ್ ಎಂಬಲ್ಲಿ ಹೆದ್ದಾರಿ ರಸ್ತೆಯ ಪಕ್ಕದಲ್ಲಿ ಪೊಲೀಸರು ಹಾಗೂ ಭದ್ರತಾ ಪಡೆಗಳು ಗಸ್ತು ತಿರುಗುತ್ತಿದ್ದಾಗ ಅನುಮಾನಾಸ್ಪದ ವಸ್ತುವೊಂದನ್ನು ಗುರುತಿಸಿದ್ದಾರೆ.

ಪರಿಶೀಲನೆ ನಡೆಸಿದಾಗ ಶಂಕಾಸ್ಪದ ವಸ್ತು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಎಂಬುದ ದೃಢವಾಗಿದೆ. ಇದೀಗ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿದ್ದು, ಪ್ರತ್ಯೇಕ ಸ್ಥಳಕ್ಕೆ ಕೊಂಡೊಯ್ದಿದ್ದಾರೆ.

ಬಾಂಬ್ ನಿಷ್ಕ್ರಿಯ ದಳವು ನಿಯಂತ್ರಿತ ಸ್ಫೋಟದಲ್ಲಿ ವಸ್ತುವನ್ನು ನಾಶಪಡಿಸಿದೆ, ಯಾವುದೇ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: 3 ವರ್ಷ ವಯೋಮಿತಿ ಸಡಿಲಿಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಟ್ರಂಪ್ ಹುಚ್ಚಾಟ: ಇದೀಗ ವಿದೇಶಿ ಸಿನಿಮಾಗಳ ಮೇಲೆ ಶೇ. 100ರಷ್ಟು ಸುಂಕ; ಕಾಂತಾರ 2 ಚಿತ್ರದ ಕಥೆಯೇನು?

New Drama! ಭಾರತಕ್ಕೆ ಏಷ್ಯಾ ಕಪ್‌ ನೀಡಲು ಹೊಸ ಷರತ್ತು ಹಾಕಿದ ನಖ್ವಿ, ಹೇಳಿದ್ದೇನು?

'Naqvi vs 3rd umpire': ಭಾರತ ಕ್ರಿಕೆಟ್ ತಂಡ ಅಭಿನಂದಿಸದ ಕಾಂಗ್ರೆಸ್; ಬಿಜೆಪಿ ಟೀಕೆಗೆ ಹೆಂಗಿದೆ ತಿರುಗೇಟು?

Ceasefire offer: ನಕ್ಸಲೀಯರೊಂದಿಗೆ 'ಕದನ ವಿರಾಮ' ಘೋಷಣೆಗೆ ಕೇಂದ್ರ ಸರ್ಕಾರವೇಕೆ ಒಪ್ಪುತ್ತಿಲ್ಲ?- ಡಿ. ರಾಜಾ

SCROLL FOR NEXT