ಐಎನ್ಎಸ್ ತುಶಿಲ್ 
ದೇಶ

INS Tushil: ಭಾರತದ ಯುದ್ಧ ನೌಕೆಗಾಗಿ ಒಗ್ಗೂಡಿದ Russia-Ukraine

ರಷ್ಯಾ ಮತ್ತು ಉಕ್ರೇನ್ ನಡುವಿನ ವರ್ಷಗಳ ಸುದೀರ್ಘ ಯುದ್ಧದ ಹೊರತಾಗಿಯೂ, ಮಾಸ್ಕೋ ಮತ್ತು ಕೀವ್ ಭಾರತಕ್ಕಾಗಿ ಯುದ್ಧನೌಕೆ ನಿರ್ಮಾಣಕ್ಕಾಗಿ ಒಟ್ಟಾಗಿ ಸೇರಿದೆ.

ಮಾಸ್ಕೋ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಚಾಲ್ತಿಯಲ್ಲಿರುವಂತೆಯೇ ಇಬ್ಬರೂ ಬದ್ಧ ವೈರಿಗಳು ಭಾರತಕ್ಕಾಗಿ ಒಗ್ಗೂಡಿದ ಅಪರೂಪದ ಘಟನೆ ನಡೆದಿದೆ.

ಹೌದು.. ರಷ್ಯಾ ಮತ್ತು ಉಕ್ರೇನ್ ನಡುವಿನ ವರ್ಷಗಳ ಸುದೀರ್ಘ ಯುದ್ಧದ ಹೊರತಾಗಿಯೂ, ಮಾಸ್ಕೋ ಮತ್ತು ಕೀವ್ ಭಾರತಕ್ಕಾಗಿ ಯುದ್ಧನೌಕೆ ನಿರ್ಮಾಣಕ್ಕಾಗಿ ಒಟ್ಟಾಗಿ ಸೇರಿದೆ.

ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಉನ್ನತ ಮಟ್ಟದ ಭೇಟಿಗಾಗಿ ಮಾಸ್ಕೋಗೆ ಆಗಮಿಸುತ್ತಿದ್ದಂತೆ ಸೋಮವಾರ ರಷ್ಯಾ-ಉಕ್ರೇನ್ ಜಂಟಿ ನಿರ್ಮಿತ ಯುದ್ಧ ನೌಕೆಯನ್ನು ಭಾರತಕ್ಕೆ ಅಧಿಕೃತವಾಗಿ ಹಸ್ತಾಂತರಿಸಲಾಯಿತು.

ಯುದ್ಧನೌಕೆ INS ತುಶಿಲ್ ವಿತರಣೆ ಕಾರ್ಯಕ್ರಮದಲ್ಲಿ ರಷ್ಯಾ ಮತ್ತು ಉಕ್ರೇನ್ ಪ್ರತಿನಿಧಿಗಳು ಹಾಜರಿದಿದ್ದು ಕಾರ್ಯಕ್ರಮದ ವಿಶೇಷವಾಗಿತ್ತು. 2016ರಲ್ಲಿ ಭಾರತ ಸರ್ಕಾರ 2 ಯುದ್ಧನೌಕೆಗಾಗಿ ಆರ್ಡರ್ ಮಾಡಿತ್ತು. ಇದು ರಷ್ಯಾ ನಿರ್ಮಿತ ಕ್ರಿವಾಕ್ III-ವರ್ಗದ ಯುದ್ಧನೌಕೆಯಾಗಿದ್ದು, ಇದು ಸುಧಾರಿತ ಸ್ಟೆಲ್ತ್ ಮಿಸೈಲ್ ಫ್ರಿಗೇಟ್ ಆಗಿದೆ. ಭಾರತವು ಪ್ರಸ್ತುತ ಇಂತಹ ಆರು ಯುದ್ಧನೌಕೆಗಳನ್ನು ನಿರ್ವಹಿಸುತ್ತಿದೆ.

ಅಲ್ಲದೆ ರಷ್ಯಾದಲ್ಲಿ ತಯಾರಾಗುತ್ತಿರುವ ಎರಡು ಹಡಗುಗಳು ಮಾತ್ರವಲ್ಲದೆ, ಇದೇ ರೀತಿಯ ಇನ್ನೂ ಎರಡು ಹಡಗುಗಳನ್ನು ಭಾರತದಲ್ಲಿ ಕೂಡ ತಯಾರಿಸಲು ಆದೇಶಿಸಲಾಗಿದೆ. ಭಾರತದ ಗೋವಾ ಶಿಪ್‌ಯಾರ್ಡ್‌ನಲ್ಲಿ ಈ ಹಡಗುಗಳ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ.

ಹಡಗಿಗಾಗಿ ರಷ್ಯಾ-ಉಕ್ರೇನ್ ಜಂಟಿ ಕಾರ್ಯ

ಕುತೂಹಲಕಾರಿ ಸಂಗತಿಯೆಂದರೆ, ಈ ಯುದ್ಧ ನೌಕೆಯ ಪ್ರಾಥಮಿಕ ಇಂಜಿನ್‌ಗಳು ಈ ಫ್ರಿಗೇಟ್‌ಗಳ ಗ್ಯಾಸ್ ಟರ್ಬೈನ್‌ಗಳನ್ನು ಉಕ್ರೇನ್‌ನಲ್ಲಿ ತಯಾರಿಸಲಾಗುತ್ತದೆ. ಉಕ್ರೇನಿಯನ್ ಎಂಜಿನ್ ಹೊಂದಿರುವ ರಷ್ಯಾದ ಯುದ್ಧನೌಕೆ, ಭಾರತಕ್ಕಾಗಿ ತಯಾರಿಸಲ್ಪಟ್ಟಿದೆ. ಹೀಗಾಗಿ ಇದು ಎರಡೂ ದೇಶಗಳೊಂದಿಗೆ ನಿಕಟ ಸಂಬಂಧವನ್ನು ಹೊಂದಿದೆ. ಭಾರತೀಯ ನೌಕಾಪಡೆಯ ಹೆಚ್ಚಿನ ಹಡಗುಗಳು ಉಕ್ರೇನಿಯನ್ ಕಂಪನಿ ಜೋರಿಯಾ-ಮ್ಯಾಶ್‌ಪ್ರೊಕ್ಟ್ ತಯಾರಿಸಿದ ಗ್ಯಾಸ್ ಟರ್ಬೈನ್‌ಗಳನ್ನು ಬಳಸುತ್ತವೆ. ಇದು ಅನಿಲ ಟರ್ಬೈನ್ ಉತ್ಪಾದನೆಯಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿದೆ.

ಆದಾಗ್ಯೂ ವಿಶಿಷ್ಟವಾದ ಸಂಗತಿಯೆಂದರೆ, ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ನಡೆಯುತ್ತಿರುವಾಗ ಭಾರತ ಈ ಹಡಗು ಖರೀದಿಗೆ ಒಪ್ಪಂದ ಮಾಡಿಕೊಂಡಿತ್ತು. ಹೀಗಾಗಿ ಪರಸ್ಪರ ಸಂಘರ್ಷದ ನಡುವೆಯೂ ಎರಡೂ ದೇಶಗಳು ಭಾರತ ನೀಡಿದ್ದ ಆರ್ಡರ್ ಪೂರ್ಣಗೊಳಿಸಿ ಇದೀಗ ಭಾರತಕ್ಕೆ ಹಡಗನ್ನು ಹಸ್ತಾಂತರಿಸುತ್ತಿದೆ.

ಆದಾಗ್ಯೂ ಈ ಯುದ್ಧ ನೌಕೆ ಹಸ್ತಾಂತರ ಪ್ರಕ್ರಿಯೆ ಸ್ವಲ್ಪ ಸವಾಲು ಒಳಗೊಂಡಿತ್ತು. ಭಾರತವು ಉಕ್ರೇನ್‌ನಿಂದ ಈ ಎಂಜಿನ್‌ಗಳನ್ನು ಭೌತಿಕವಾಗಿ ಸಂಗ್ರಹಿಸಬೇಕಾಗಿತ್ತು ಮತ್ತು ಈ ಯುದ್ಧನೌಕೆಯಲ್ಲಿ ಅವುಗಳನ್ನು ಸ್ಥಾಪಿಸುವ ಮೊದಲು ಅವುಗಳನ್ನು ರಷ್ಯಾಕ್ಕೆ ತಲುಪಿಸಬೇಕಾಗಿತ್ತು, ಆದ್ದರಿಂದ ಈ ಪ್ರಕ್ರಿಯೆ ಸ್ವಲ್ಪ ವಿಳಂಬವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗ್ಯಾಂಗ್ ರೇಪ್ ಪ್ರಕರಣ: ವಿವಾದಿತ ದೇವಮಾನವ Asaram Bapu ಖುಲಾಸೆ

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

SCROLL FOR NEXT