ಕಾರಿಗೆ ಡಿಕ್ಕಿ ಹೊಡೆದಿರುವ ಬಸ್ 
ದೇಶ

Mumbai: ಬ್ರೇಕ್ ಫೇಲ್ ಆಗಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಸ್; 25 ಮಂದಿಗೆ ಗಾಯ, ನಾಲ್ವರ ದುರ್ಮರಣ

ಕುರ್ಲಾದ ಬೃಹನ್‌ ಮುಂಬೈ ಮುನಿಸಿಪಲ್ ಕಾರ್ಪೊರೇಷನ್ (ಬಿಎಂಸಿ) ಎಲ್ ವಾರ್ಡ್ ಬಳಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದ್ದು, ಘಟನೆ ಸಂಬಂಧ ಬಸ್ ಚಾಲಕನನ್ನು ಬಂಧನಕ್ಕೊಳಪಡಿಸಲಾಗಿದೆ.

ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬ್ರೇಕ್ ಫೇಲ್ ಆದ ಪರಿಣಾಮ ಪಾದಚಾರಿಗಳಿಗೆ ಬಸ್ ವೊಂದು ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ 25 ಮಂದಿ ಗಂಭೀರವಾಗಿ ಗಾಯಗೊಂಡು, ನಾಲ್ವರು ಸ್ಥಳದಲ್ಲೇ ದುರ್ಮರಣವನ್ನಪ್ಪಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

ಕುರ್ಲಾದ ಬೃಹನ್‌ ಮುಂಬೈ ಮುನಿಸಿಪಲ್ ಕಾರ್ಪೊರೇಷನ್ (ಬಿಎಂಸಿ) ಎಲ್ ವಾರ್ಡ್ ಬಳಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದ್ದು, ಘಟನೆ ಸಂಬಂಧ ಬಸ್ ಚಾಲಕನನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೃಹನ್ಮುಂಬೈ ಎಲೆಕ್ಟ್ರಿಕ್ ಸಪ್ಲೈ ಅಂಡ್ ಟ್ರಾನ್ಸ್‌ಪೋರ್ಟ್ (ಬೆಸ್ಟ್) ಸಂಸ್ಥೆಗೆ ಸೇರಿದ ಬಸ್ ಇದಾಗಿದ್ದು, ನೋಂದಣಿ ಸಂಖ್ಯೆ MH01-EM-8228 ರ ಬಸ್ ಕುರ್ಲಾ ರೈಲು ನಿಲ್ದಾಣದಿಂದ ಅಂಧೇರಿಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಮಾರ್ಗ ಸಂಖ್ಯೆ 332 ರ ಬಳಿ ಚಾಲಕ ಬಸ್ ಮೇಲಿನ ನಿಯಂತ್ರಣವನ್ನು ಕಳೆದುಕೊಂಡಿದ್ದಾನೆ. ಈ ವೇಳೆ ಬಸ್ ಪಾದಚಾರಿಗಳಿಗೆ ಮತ್ತು ಕೆಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಗಾಯಗೊಂಡ 25 ಮಂದಿಯನ್ನು ಸ್ಥಳೀಯ ಬಾಬಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಘಟನೆಯಲ್ಲಿ ಹಲವು ವಾಹನಗಳು ಜಖಂಗೊಂಡಿವೆ ಎಂದು ಹೇಳಿದ್ದಾರೆ.

ನಾನು ನನ್ನ ಸ್ನೇಹಿತರೊಂದಿಗೆ ರಾಯಲ್ ಸ್ವೀಟ್ಸ್ ಅಂಗಡಿಯ ಮುಂದೆ ನಿಂತಿದ್ದಾಗ ವೇಗವಾಗಿ ಬಂದ ಬಸ್ ಏಕಾಏಕಿ ಹಲವು ವಾಹನಗಳಿಗೆ ಹಾಗೂ ಪಾದಚಾರಿಗಳಿಗ ಗುದ್ದಿತು. ಬಳಿಕ ಬುದ್ಧ ಕಾಲೋನಿಗೆ ಪ್ರವೇಶಿಸಿತು. ಕೂಡಲೇ ಸ್ಥಳಕ್ಕೆ ತೆರಳಿ ಬಸ್ ಚಾಲಕನನ್ನು ವಾಹನದಿಂದ ಹೊರಗೆ ತಂದೆವು. ಘಟನೆ ಬಳಿಕ ಹಲವರು ರಕ್ತಸಿಕ್ತರಾಗಿ ಕೆಳಗೆ ಬಿದ್ದಿದ್ದರು. ಸಾಕಷ್ಟು ಜನರು ಸ್ಥಳ ಸೇರಿದ್ದರು. ಬಳಿಕ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದವು ಎಂದು ಪ್ರತ್ಯಕ್ಷದರ್ಶಿ ಝೀಶನ್ ಅನ್ಸಾರಿ ಎಂಬುವವರು ಹೇಳಿದ್ದಾರೆ.

ಮನೆಯಿಂದ ರೈಲ್ವೇ ನಿಲ್ದಾಣಕ್ಕೆ ಹೋಗುವಾಗ ಹಲವರು ಕೂಗಾಡುತ್ತಿದ್ದ ಶಬ್ದ ಕೇಳಿಸಿತು. ಸ್ಥಳಕ್ಕೆ ಹೋಗಿ ನೋಡಿದಾಗ ಬಸ್ ಪಾದಚಾರಿಗಳಿಗೆ, ಆಟೋರಿಕ್ಷಾ ಮತ್ತು ಮೂರು ಕಾರುಗಳು ಸೇರಿದಂತೆ ಇತರ ವಾಹನಗಳಿಗೆ ಡಿಕ್ಕಿ ಹೊಡೆದಿರುವುದು ಕಂಡು ಬಂದಿತು. ನನ್ನ ಕಣ್ಣು ಮುಂದೆ ಕೆಲವು ಮೃತ ಪಟ್ಟಿದ್ದನ್ನು ನೋಡಿದೆವು. ಆಟೋರಿಕ್ಷಾದಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿ ಭಾಭಾ ಆಸ್ಪತ್ರೆಗೆ ಕರೆದೊಯ್ದೆವು. ಮತ್ತೊಂದು ವಾಹನದಲ್ಲಿ ನನ್ನ ಸ್ನೇಹಿತರು ಗಾಯಗೊಂಡವರಿಗೆ ಸಹಾಯ ಮಾಡಿದರು ಎಂದು ಮತ್ತೊಬ್ಬ ಪ್ರತ್ಯಕ್ಷದರ್ಶಿ ಅಹ್ಮದ್ ಎಂಬುವವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT