ಆಟೋ ಚಾಲಕರು-ಅರವಿಂದ್ ಕೇಜ್ರಿವಾಲ್ (ಸಂಗ್ರಹ ಚಿತ್ರ) online desk
ದೇಶ

ಆಟೋ ಚಾಲಕರಿಗೆ 10 ಲಕ್ಷ ರೂ ವಿಮೆ, ಹೆಣ್ಣುಮಕ್ಕಳ ಮದುವೆಗೆ 1 ಲಕ್ಷ ರೂ ನೆರವು: ಕೇಜ್ರಿವಾಲ್ ಘೋಷಣೆ

ಕೊಂಡ್ಲಿ ಕ್ಷೇತ್ರದಲ್ಲಿ ಆಟೋ ಚಾಲಕನೋರ್ವನ ಕುಟುಂಬ ಸದಸ್ಯರೊಟ್ಟಿಗೆ ಊಟ ಮಾಡಿರುವ ಕೇಜ್ರಿವಾಲ್, ಆಟೋ ಚಾಲಕ ಸಮುದಾಯಕ್ಕೆ ನೆರವಾಗುವ ಹಲವು ಘೋಷಣೆಗಳನ್ನು ಮಾಡಿದ್ದಾರೆ.

ದೆಹಲಿ: ದೆಹಲಿ ವಿಧಾನಸಭಾ ಚುನಾವಣೆ ತಯಾರಿಯಲ್ಲಿರುವ ಆಮ್ ಆದ್ಮಿ ಪಕ್ಷದ ಮುಖಂಡ ಕೇಜ್ರಿವಾಲ್ ಆಟೋ ಚಾಲಕರೊಂದಿಗೆ ಚರ್ಚೆ ನಡೆಸಿದ್ದಾರೆ.

ಕೊಂಡ್ಲಿ ಕ್ಷೇತ್ರದಲ್ಲಿ ಆಟೋ ಚಾಲಕನೋರ್ವನ ಕುಟುಂಬ ಸದಸ್ಯರೊಟ್ಟಿಗೆ ಊಟ ಮಾಡಿರುವ ಕೇಜ್ರಿವಾಲ್, ಆಟೋ ಚಾಲಕ ಸಮುದಾಯಕ್ಕೆ ನೆರವಾಗುವ ಹಲವು ಘೋಷಣೆಗಳನ್ನು ಮಾಡಿದ್ದಾರೆ.

ದೆಹಲಿಯಲ್ಲಿ ಮತ್ತೆ ಆಪ್ ಅಧಿಕಾರಕ್ಕೆ ಬಂದಲ್ಲಿ, ನಗರದ ಆಟೋ ಚಾಲಕರಿಗೆ 10 ಲಕ್ಷ ರೂಪಾಯಿ ವಿಮೆ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ. ಇದಷ್ಟೇ ಅಲ್ಲದೇ ಆಟೋ ಚಾಲಕರ ಹೆಣ್ಣುಮಕ್ಕಳ ವಿವಾಹಕ್ಕಾಗಿ 1 ಲಕ್ಷ ರೂಪಾಯಿ ನೆರವು ನೀಡುವುದಾಗಿ ಕೇಜ್ರಿವಾಲ್ ಘೋಷಿಸಿದ್ದಾರೆ.

ಆಟೋ ಚಾಲಕರಿಗೆ ವರ್ಷಕ್ಕೆ 2 ಬಾರಿ 2,500 ರೂಪಾಯಿಗಳ ಸಮವಸ್ತ್ರ ಭತ್ಯೆ, ಚಾಲಕರ ಮಕ್ಕಳಿಗೆ ಉಚಿತ ಕೋಚಿಂಗ್ ಹಾಗೂ ಪೂಚೋ ಆಪ್ ಗೆ ಮತ್ತೆ ಚಾಲನೆ ನೀಡುವ ಭರವಸೆಗಳನ್ನೂ ಕೇಜ್ರಿವಾಲ್ ಆಟೋ ಡ್ರೈವರ್ಸ್ ಸೆ ಚರ್ಚಾ ಕಾರ್ಯಕ್ರಮದಲ್ಲಿ ಘೋಷಿಸಿದ್ದಾರೆ.

ನೋಂದಾಯಿತ ಆಟೋ ಡ್ರೈವರ್‌ಗಳ ಮೊಬೈಲ್ ಸಂಖ್ಯೆಗಳ ದೆಹಲಿ ಇಂಟಿಗ್ರೇಟೆಡ್ ಮಲ್ಟಿ-ಮಾಡೆಲ್ ಟ್ರಾನ್ಸಿಟ್ ಸಿಸ್ಟಮ್ ಅಭಿವೃದ್ಧಿಪಡಿಸಿದ ಡೇಟಾಬೇಸ್ ನ್ನು ಪ್ರವೇಶಿಸಲು ಮತ್ತು ರೈಡ್ ಅನ್ನು ಬುಕ್ ಮಾಡಲು ಅವರಿಗೆ ಕರೆ ಮಾಡಲು ಪೂಚೋ ಆಪ್ ಜನರಿಗೆ ಸಹಕಾರಿಯಾಗಿರಲಿದೆ. 70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಮುಂದಿನ ವರ್ಷ ಫೆಬ್ರವರಿಯಲ್ಲಿ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT