ರಾಜ್ಯಸಭೆ ಸಭಾಪತಿ ಜಗದೀಪ್ ಧಂಖರ್ 
ದೇಶ

ಉಪ ರಾಷ್ಟ್ರಪತಿ ಧಂಖರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಪ್ರತಿಪಕ್ಷಗಳಿಂದ ನೋಟಿಸ್

ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್ ಮತ್ತು ನಾಸೀರ್ ಹುಸೇನ್ ಅವರು ರಾಜ್ಯಸಭಾ ಪ್ರಧಾನ ಕಾರ್ಯದರ್ಶಿ ಪಿ ಸಿ ಮೋದಿ ಅವರಿಗೆ ನೋಟಿಸ್ ಸಲ್ಲಿಸಿದ್ದಾರೆ.

ನವದೆಹಲಿ: ಸದನವನ್ನು ಪಕ್ಷಾತೀತವಾಗಿ ನಡೆಸದ ಆರೋಪದ ಮೇಲೆ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರನ್ನು ಪದಚ್ಯುತಗೊಳಿಸುವಂತೆ ಪ್ರತಿಪಕ್ಷಗಳು ಮಂಗಳವಾರ ನೋಟಿಸ್‌ ಸಲ್ಲಿಸಿವೆ.

ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್ ಮತ್ತು ನಾಸೀರ್ ಹುಸೇನ್ ಅವರು ರಾಜ್ಯಸಭಾ ಪ್ರಧಾನ ಕಾರ್ಯದರ್ಶಿ ಪಿ ಸಿ ಮೋದಿ ಅವರಿಗೆ ನೋಟಿಸ್ ಸಲ್ಲಿಸಿದ್ದಾರೆ.

ಉಪ ರಾಷ್ಟ್ರಪತಿ ಧಂಖರ್ ಅವರು ರಾಜ್ಯಸಭೆಯ ಪದನಿಮಿತ್ತ ಸಭಾಧ್ಯಕ್ಷರಾಗಿದ್ದಾರೆ.

ಕಾಂಗ್ರೆಸ್, ಆರ್‌ಜೆಡಿ, ಟಿಎಂಸಿ, ಸಿಪಿಐ, ಸಿಪಿಐ-ಎಂ, ಜೆಎಂಎಂ, ಎಎಪಿ, ಡಿಎಂಕೆ ಸೇರಿದಂತೆ ಸುಮಾರು 60 ವಿರೋಧ ಪಕ್ಷದ ಸಂಸದರು ನೋಟಿಸ್‌ಗೆ ಸಹಿ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆದರೆ, ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವ ಕಾಂಗ್ರೆಸ್‌ನ ಉನ್ನತ ನಾಯಕರು ನೋಟಿಸ್‌ಗೆ ಸಹಿ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ವಿವಿಧ ವಿರೋಧ ಪಕ್ಷಗಳ ಸದನದ ನಾಯಕರು ಸಹ ಸಹಿ ಮಾಡಿಲ್ಲ ಎಂದು ಮೂಲಗಳು ತಿಳಿಸಿವೆ.

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರು ಪಕ್ಷಪಾತಿಯಾಗಿದ್ದು, ಆಡಳಿತ ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಇಂಡಿಯಾ ಬ್ಲಾಕ್‌ನ ಸಂಸದರು ಪದೇ ಪದೇ ಆರೋಪಿಸಿದ್ದಾರೆ. ಅವರು ತಮ್ಮ ಭಾಷಣಗಳಿಗೆ ಆಗಾಗ್ಗೆ ಅಡ್ಡಿಪಡಿಸುತ್ತಾರೆ, ಪ್ರಮುಖ ವಿಷಯಗಳ ಮೇಲಿನ ಚರ್ಚೆಯನ್ನು ನಿರ್ಬಂಧಿಸುತ್ತಾರೆ ಮತ್ತು ಮೇಲ್ಮನೆಯಲ್ಲಿ ವಿವಾದಾತ್ಮಕ ಚರ್ಚೆಗಳ ಸಮಯದಲ್ಲಿ ಸರ್ಕಾರದ ಪರವಾಗಿರುತ್ತಾರೆ ಎಂದು ಪ್ರತಿಪಕ್ಷಗಳ ಸಂಸದರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT