ಪ್ರಧಾನಿ ಮೋದಿ ಹಾಗೂ ಎಸ್.ಎಂ.ಕೃಷ್ಣ (ಸಂಗ್ರಹ ಚಿತ್ರ) 
ದೇಶ

ಇತರರಿಗಾಗಿ ದಣಿವರಿಯದೇ ಶ್ರಮಿಸಿದ ನಾಯಕ: ಎಸ್‌.ಎಂ ಕೃಷ್ಣ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಎಸ್.ಎಂ.ಕೃಷ್ಣ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು, ಕೃಷ್ಣ ಅವರೊಂದಿಗೆ ಕಳೆದ ಭಾವನಾತ್ಮಕ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡು, ಸಂತಾಪ ಸೂಚಿಸಿದ್ದಾರೆ.

ನವದೆಹಲಿ: ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ದಣಿವರಿಯದೇ ಶ್ರಮಿಸಿದ್ದ ನಾಯಕ ಎಸ್.ಎಂ.ಕೃಷ್ಣ. ಅವರ ನಿಧನ ಅತೀವ ದುಃಖ ತಂದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದಾರೆ.

ಎಸ್.ಎಂ.ಕೃಷ್ಣ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕೃಷ್ಣ ಅವರೊಂದಿಗೆ ಕಳೆದ ಭಾವನಾತ್ಮಕ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡು, ಸಂತಾಪ ಸೂಚಿಸಿದ್ದಾರೆ.

ಎಸ್ಎಂ ಕೃಷ್ಣ ನಿಧನ ಅತೀವ ದುಃಖ ತಂದಿದೆ. ಕಳೆದ ಕೆಲ ವರ್ಷಗಳಲ್ಲಿ ಎಸ್ಎಂ ಕೃಷ್ಣ ಅವರ ಜೊತೆ ಮಾತನಾಡುವ, ಭೇಟಿ ಮಾಡುವ ಅವಕಾಶ ನನ್ನ ಪಾಲಿಗೆ ಒದಗಿ ಬಂದಿತ್ತು. ಅವರ ಕುಟುಂಬಕ್ಕೆ ಹಾಗೂ ಅಭಿಮಾನಿ ಬಳಗಕ್ಕೆ ಸಂತಾಪ ಸೂಚಿಸುತ್ತೇನೆ.

ಎಸ್ಎಂ ಕೃಷ್ಣ ಅಪ್ರತಿಮ ನಾಯಕನಾಗಿದ್ದರು. ಸಮಾಜ ಎಲ್ಲಾ ವರ್ಗದ ಜನರಿಂದ ಮೆಚ್ಚುಗೆಗೆ ಹಾಗೂ ಗೌರವಕ್ಕೆ ಪಾತ್ರರಾಗಿದ್ದ ನಾಯಕ. ಸಮಾಜ ಪ್ರತಿಯೊಬ್ಬರ ಜೀವನ ಸುಧಾರಣೆಗೆ ದಣಿವರಿಯದೇ ಶ್ರಮಿಸಿದ ನಾಯಕ ಎಸ್ಎಂ ಕೃಷ್ಣ. ಕರ್ನಾಟಕ ಮುಖ್ಯಮಂತ್ರಿಯಾಗಿದ್ದ ವೇಳೆ ರಾಜ್ಯದ ಮೂಲಭೂತ ಸೌಕರ್ಯದಲ್ಲಿ ಅಮೂಲಾಗ್ರ ಬದಲಾವಣೆಗೆ ನಾಂದಿ ಹಾಡಿದ್ದರು. ವಿಶೇಷ ಅಂದರೆ ಎಸ್ಎಂ ಕೃಷ್ಣ ಓದುಗ ಹಾಗೂ ಚಿಂತರಾಗಿದ್ದರು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ