ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್  
ದೇಶ

ದೆಹಲಿ ವಿಧಾನಸಭಾ ಚುನಾವಣೆ 2025: ಯಾರೊಂದಿಗೂ ಮೈತ್ರಿಯಿಲ್ಲ, ಸ್ವತಂತ್ರವಾಗಿ ಸ್ಪರ್ಧೆ; ಕೇಜ್ರಿವಾಲ್ ಸ್ಪಷ್ಟನೆ

ಆಮ್ ಆದ್ಮಿ ಪಕ್ಷವು ದೆಹಲಿಯಲ್ಲಿ ತನ್ನ ಸ್ವಂತ ಬಲದ ಮೇಲೆ ಈ ಚುನಾವಣೆಯಲ್ಲಿ ಹೋರಾಡಲಿದೆ. ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ.

ನವದೆಹಲಿ: ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆಗಿನ ಮೈತ್ರಿ ವರದಿಯನ್ನು ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ ತಳ್ಳಿಹಾಕಿದ್ದು, ಸ್ವತಂತ್ರವಾಗಿ ಸ್ಪರ್ಧೆಗಿಳಿಯುವುದಾಗಿ ಘೋಷಣೆ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಕೇಜ್ರಿವಾಲ್ ಅವರು ಸ್ಪಷ್ಟನೆ ನೀಡಿದ್ದಾರೆ.

ಆಮ್ ಆದ್ಮಿ ಪಕ್ಷವು ದೆಹಲಿಯಲ್ಲಿ ತನ್ನ ಸ್ವಂತ ಬಲದ ಮೇಲೆ ಈ ಚುನಾವಣೆಯಲ್ಲಿ ಹೋರಾಡಲಿದೆ. ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ.

ಈ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಎದುರಿಸಲು ಎರಡು ಪಕ್ಷಗಳ ನಡುವಿನ ಮೈತ್ರಿ ಕುರಿತ ಇತ್ತೀಚಿನ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಮುಂದಿನ ವರ್ಷ ಫೆಬ್ರವರಿಯಲ್ಲಿ ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪ್ರಸ್ತುತ ಆಡಳಿತದಲ್ಲಿರುವ ಎಎಪಿ ಈಗಾಗಲೇ ಪಕ್ಷದ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಈ ಬಾರಿಯ ಚುನಾವಣಾ ಕದನಕ್ಕೆ ದೆಹಲಿ ಸಾಕ್ಷಿಯಾಗಲಿದೆ, ಎಎಪಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಪಡೆಯುವ ಗುರಿಯನ್ನು ಹೊಂದಿದ್ದರೆ, ಬಿಜೆಪಿ ಮತ್ತು ಕಾಂಗ್ರೆಸ್ ತಮ್ಮ ಅಧಿಕಾರವನ್ನು ಮರಳಿ ಪಡೆಯಲು ಪ್ರಯತ್ನ ನಡೆಸಲಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!