ನಂದಿನಿ ಹಾಲಿನ ಪೌಡರ್ 
ದೇಶ

ಹೈದರಾಬಾದ್: ಕಲಬೆರಕೆ ನಂದಿನಿ ಹಾಲಿನ ಪೌಡರ್ ಮಾರಾಟ, ವ್ಯಕ್ತಿಯ ಬಂಧನ

ಮುಶೀರಾಬಾದ್ ಪೊಲೀಸರೊಂದಿಗೆ ಕೇಂದ್ರ ವಲಯದ ಕಾರ್ಯ ಪಡೆಯ ತಂಡ ಈ ದಾಳಿ ನಡೆಸಿದ್ದು, 330 ಕೆಜಿ ಹಾಲಿನ ಪುಡಿಯ ಬ್ಯಾಗ್ ಗಳು ಮತ್ತು 450 ಕೆಜಿ ಹಾಲಿನ ಪುಡಿಯ ಪ್ಯಾಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ

ಮುಶೀರಾಬಾದ್: ಹೈದರಾಬಾದಿನ ಮುಶೀರಾಬಾದ್ ನ ಒಂದು ಗೋದಾಮಿನ ಮೇಲೆ ದಾಳಿ ನಡೆಸಿದ ಪೊಲೀಸರು ಕಲಬೆರಕೆ ಅಥವಾ ಅವಧಿ ಮೀರಿದ ನಂದಿನಿ ಹಾಲಿನ ಪೌಡರ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಮುಶೀರಾಬಾದ್ ಪೊಲೀಸರೊಂದಿಗೆ ಕೇಂದ್ರ ವಲಯದ ಕಾರ್ಯ ಪಡೆಯ ತಂಡ ಈ ದಾಳಿ ನಡೆಸಿದ್ದು, 330 ಕೆಜಿ ಹಾಲಿನ ಪುಡಿಯ ಬ್ಯಾಗ್ ಗಳು ಮತ್ತು 450 ಕೆಜಿ ಹಾಲಿನ ಪುಡಿಯ ಪ್ಯಾಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನನ್ನು ಚಿತ್ತಬೋಯಿನ ದಾಮೋದರ್ ಯಾದವ್ ಎಂದು ಗುರುತಿಸಲಾಗಿದೆ.

ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ "ಕ್ಷೀರ ಭಾಗ್ಯ ಯೋಜನೆಯಡಿ ಶಾಲಾ ಮಕ್ಕಳಿಗೆ ನಂದಿನಿ ಹಾಲಿನ ಪುಡಿ ಪೂರೈಸಲಾಗುತ್ತಿದೆ. ಇದನ್ನು ಮಾರಾಟ ಮಾಡುವಂತಿಲ್ಲ. ಆದರೆ ಯೋಗ್ಯವಲ್ಲದ ಅವಧಿ ಮೀರಿದ ನಂದಿನಿ ಹಾಲಿನ ಪೌಡರ್ ನ್ನು ಅಕ್ರಮವಾಗಿ ಸಾಗಿಸಿ, ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ.

ದಾಮೋದರ್ ಯಾದವ್ ಬಳಕೆಗೆ ಯೋಗ್ಯವಲ್ಲದ ಪೌಡರ್ ನ್ನು ಹೆಚ್ಚಿನ ಬೆಲೆಗೆ ಅಗತ್ಯವಿರುವ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಆತನನ್ನು ಆಹಾರ ಸುರಕ್ಷತಾ ಅಧಿಕಾರಿಗಳು ಈ ಹಿಂದೆ ಒಂದೆರಡು ಬಾರಿ ಬಂಧಿಸಿದ್ದರು. ಆದರೂ ತನ್ನ ಹಾದಿಯನ್ನು ಸರಿಪಡಿಸಿಕೊಳ್ಳದ ಆರೋಪಿ, ಅಕ್ರಮ ವ್ಯಾಪಾರವನ್ನು ಪುನರಾರಂಭಿಸಿದ್ದ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT