ಅಶ್ವಿನಿ ವೈಷ್ಣವ್ 
ದೇಶ

ಲೋಕಸಭೆಯಲ್ಲಿ ರೈಲ್ವೆ ತಿದ್ದುಪಡಿ ಮಸೂದೆ ಅಂಗೀಕಾರ; ಖಾಸಗೀಕರಣಕ್ಕೆ ಅವಕಾಶ ಇಲ್ಲ ಎಂದ ವೈಷ್ಣವ್

ರೈಲ್ವೆ ತಿದ್ದುಪಡಿ ಮಸೂದೆ ಮೇಲಿನ ಚರ್ಚೆಗೆ ಪ್ರತಿಕ್ರಿಯಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ತಿದ್ದುಪಡಿಯು ರೈಲ್ವೆಯನ್ನು ಖಾಸಗೀಕರಣಗೊಳಿಸುತ್ತದೆ ಎಂಬ ನಕಲಿ ನಿರೂಪಣೆಯನ್ನು ಹುಟ್ಟುಹಾಕಲಾಗಿದೆ ಎಂದರು.

ನವದೆಹಲಿ: ರೈಲ್ವೆ ಕಾನೂನುಗಳಿಗೆ ತಿದ್ದುಪಡಿ ತರುವ ರೈಲ್ವೆ (ತಿದ್ದುಪಡಿ) ಮಸೂದೆ-2024 ಅನ್ನು ಬುಧವಾರ ಲೋಕಸಭೆಯಲ್ಲಿ ಅಂಗೀಕರಿಸಿದ್ದು, ಇದು ಭಾರತೀಯ ರೈಲ್ವೆಯನ್ನು ಖಾಸಗೀಕರಣ ಮಾಡುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ರೈಲ್ವೆ ತಿದ್ದುಪಡಿ ಮಸೂದೆ ಮೇಲಿನ ಚರ್ಚೆಗೆ ಪ್ರತಿಕ್ರಿಯಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ತಿದ್ದುಪಡಿಯು ರೈಲ್ವೆಯನ್ನು ಖಾಸಗೀಕರಣಗೊಳಿಸುತ್ತದೆ ಎಂಬ ನಕಲಿ ನಿರೂಪಣೆಯನ್ನು ಹುಟ್ಟುಹಾಕಲಾಗಿದೆ ಎಂದರು.

"ಸಂವಿಧಾನದ ಬಗ್ಗೆ ಅವರ (ವಿರೋಧ) ನಕಲಿ ನಿರೂಪಣೆ ವಿಫಲವಾಗಿದೆ ... ಈಗ ಇದು ಸಹ ವಿಫಲವಾಗಲಿದೆ" ಎಂದು ರೈಲ್ವೆ ಸಚಿವರು ಪ್ರತಿಪಾದಿಸಿದರು.

ಚರ್ಚೆಯ ನಂತರ ಧ್ವನಿ ಮತದ ಮೂಲಕ ಮಸೂದೆಯನ್ನು ಅಂಗೀಕರಿಸಲಾಯಿತು. ರೈಲ್ವೆ ಕಾಯಿದೆ-1989ಕ್ಕೆ ತಿದ್ದುಪಡಿ ಜೊತೆಗೆ ರೈಲ್ವೇ ಮಂಡಳಿಯ ಅಧಿಕಾರಗಳನ್ನು ಹೆಚ್ಚಿಸಲು ಮತ್ತು ಕಾರ್ಯಾಚರಣೆ ದಕ್ಷತೆ ಸುಧಾರಣೆಯ ಗುರಿಯನ್ನು ಇದು ಹೊಂದಿದೆ.

ಇಂಡಿಯನ್​ ರೈಲ್ವೆ ಬೋರ್ಡ್​ ಕಾಯ್ದೆ-1905 ಅನ್ನು ರೈಲ್ವೆ ಆ್ಯಕ್ಟ್-1989ಗೆ ಸೇರಿಸುವ ಉದ್ದೇಶವನ್ನು ಮಸೂದೆ ಹೊಂದಿದೆ. ಇದು ಭಾರತೀಯ ರೈಲ್ವೆಯ ಕಾನೂನಿನ ಚೌಕಟ್ಟನ್ನು ಸರಳೀಕರಿಸಲಿದೆ ಎಂದು ವೈಷ್ಣವ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT