ವ್ಲಾಡಿಮಿರ್ ಪುಟಿನ್ ಭೇಟಿಯಾದ ರಾಜನಾಥ್ ಸಿಂಗ್ 
ದೇಶ

ಮಾಸ್ಕೋ: ಪುಟಿನ್ ಭೇಟಿ ಮಾಡಿದ ರಾಜನಾಥ್ ಸಿಂಗ್, ಭಾರತ-ರಷ್ಯಾ ಸಂಬಂಧ ಗುಣಗಾನ

ಉಭಯ ದೇಶಗಳ ನಡುವಿನ ಬಾಂಧವ್ಯ ಗಟ್ಟಿಯಾಗಿದ್ದು, ಸಹಭಾಗಿತ್ವದ ಪ್ರಯತ್ನಗಳು ಗಮನಾರ್ಹ ಫಲಿತಾಂಶಗಳಿಗೆ ದಾರಿ ಮಾಡಿಕೊಡುತ್ತವೆ ಎಂದು ಉಭಯ ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಅವರನ್ನು ಮಾಸ್ಕೋದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಈ ವೇಳೆ ರಷ್ಯಾದೊಂದಿಗೆ ಭಾರತದ ಬಾಂಧವ್ಯ ಅತ್ಯಂತ ಎತ್ತರದ ಪರ್ವತಕ್ಕಿಂತಲೂ ಎತ್ತರವಾಗಿದೆ ಮತ್ತು ಸಾಗರದ ಅತ್ಯಂತ ಆಳವಾಗಿರುವ ಪ್ರದೇಶಕ್ಕಿಂತಲೂ ಆಳವಾಗಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಸಭೆಯಲ್ಲಿ ಉಭಯ ದೇಶಗಳ ನಡುವಿನ ಬಾಂಧವ್ಯ ಗಟ್ಟಿಯಾಗಿದ್ದು, ಸಹಭಾಗಿತ್ವದ ಪ್ರಯತ್ನಗಳು ಗಮನಾರ್ಹ ಫಲಿತಾಂಶಗಳಿಗೆ ದಾರಿ ಮಾಡಿಕೊಡುತ್ತವೆ ಎಂದು ಉಭಯ ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಎರಡು ದೇಶಗಳ ನಡುವಿನ ಸ್ನೇಹವು ಅತ್ಯಂತ ಎತ್ತರದ ಪರ್ವತಕ್ಕಿಂತ ಎತ್ತರವಾಗಿದೆ ಮತ್ತು ಆಳವಾದ ಸಾಗರಕ್ಕಿಂತ ಆಳವಾಗಿದೆ' ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ. ಭಾರತ ಯಾವಾಗಲೂ ರಷ್ಯಾದ ಪರವಾಗಿ ನಿಂತಿದೆ ಮತ್ತು ಭವಿಷ್ಯದಲ್ಲಿಯೂ ಈ ನೀತಿಯನ್ನು ಮುಂದುವರೆಸುತ್ತದೆ ಎಂದು ಸಿಂಗ್ ಪುಟಿನ್ ಅವರಿಗೆ ತಿಳಿಸಿದ್ದಾರೆ.

ವಾಡ್ಲಿಮಿರ್ ಪುಟಿನ್ ಭೇಟಿಗೂ ಮುನ್ನಾ ರಾಜನಾಥ್ ಸಿಂಗ್ ಅವರು ಮಿಲಿಟರಿ ಸಹಕಾರಕ್ಕೆ ಸಂಬಂಧಿಸಿದ ಭಾರತ- ರಷ್ಯಾ ಅಂತರ- ಸರ್ಕಾರಿ ಆಯೋಗದ 21ನೇ ಅಧಿವೇಶನದಲ್ಲಿ ರಷ್ಯಾದ ರಕ್ಷಣಾ ಸಚಿವ ಆಂಡ್ರೆ ಬೆಲೊಸೊವ್ ಅವರೊಂದಿಗೆ ಪಾಲ್ಗೊಂಡರು.

ಬೆಲೊಸೊವ್ ಅವರೊಂದಿಗಿನ ಸಭೆಯಲ್ಲಿ ಭಾರತಕ್ಕೆ 'ಎಸ್ 400 ಟ್ರಯಂಫ್' ರಕ್ಷಣಾ ಕ್ಷಿಪಣಿ ವ್ಯವಸ್ಥೆಯ ಇನ್ನುಳಿದ ಎರಡು ಘಟಕಗಳ ಪೂರೈಕೆಯನ್ನು ತ್ವರಿತಗೊಳಿಸುವಂತೆ ರಾಜನಾಥ್ ಸಿಂಗ್ ಒತ್ತಾಯಿಸಿದ್ದಾರೆ ಎಂದು ರಕ್ಷಣಾ ಪ್ರಕಟಣೆ ತಿಳಿಸಿದೆ.

ಈ ಸಭೆಗೂ ಮುನ್ನ ರಾಜನಾಥ್ ಅವರು ಮಾಸ್ಕೋದಲ್ಲಿ ಎರಡನೇ ಮಹಾಯುದ್ಧದಲ್ಲಿ ಮಡಿದ ಸೋವಿಯತ್ ಸೈನಿಕರಿಗೆ ಗೌರವ ಸಲ್ಲಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT