ಸುಪ್ರೀಂ ಕೋರ್ಟ್ 
ದೇಶ

ಪತಿ ವಿರುದ್ಧ ವೈಯಕ್ತಿಕ ದ್ವೇಷ ಸಾಧಿಸಲು ಕಾನೂನು ದುರುಪಯೋಗ ಮಾಡಿಕೊಳ್ಳದಂತೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 498A(ಕೌಟುಂಬಿಕ ದೌರ್ಜನ್ಯ ಮತ್ತು ಕಿರುಕುಳದಿಂದ ಮಹಿಳೆಯರ ರಕ್ಷಣೆ) ದುರುಪಯೋಗದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ವೈವಾಹಿಕ ವಿವಾದ ಪ್ರಕರಣಗಳಲ್ಲಿ ಕಾನೂನುಗಳ ದುರುಪಯೋಗದ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರ ಕಠಿಣ ಎಚ್ಚರಿಕೆ ನೀಡಿದ್ದು, "ವೈಯಕ್ತಿಕ ದ್ವೇಷ ಸಾಧಿಸಲು ಪತಿ ಮತ್ತು ಅವರ ಕುಟುಂಬದ ವಿರುದ್ಧ ಸೆಕ್ಷನ್ 498(A) ಸಾಧನವಾಗಿ" ಬಳಸಬಾರದು ಎಂದು ಹೇಳಿದೆ.

ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 498A(ಕೌಟುಂಬಿಕ ದೌರ್ಜನ್ಯ ಮತ್ತು ಕಿರುಕುಳದಿಂದ ಮಹಿಳೆಯರ ರಕ್ಷಣೆ) ದುರುಪಯೋಗದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ನಿರ್ದಿಷ್ಟವಾಗಿ ಮಹಿಳೆಯರು ತಮ್ಮ ಪತಿ ಮತ್ತು ಅವರ ಕುಟುಂಬದ ವಿರುದ್ಧ ತನ್ನ ಅವಿವೇಕದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲು ಬಳಸಿಕೊಳ್ಳುತ್ತಿದ್ದಾರೆ ಎಂದು ನ್ಯಾಯಮೂರ್ತಿ ಬಿವಿ ನಾಗರತ್ನ ಮತ್ತು ನ್ಯಾಯಮೂರ್ತಿ ಎನ್ ಕೋಟೀಶ್ವರ್ ಸಿಂಗ್ ಅವರ ಪೀಠ ಹೇಳಿದೆ.

ವಿಚ್ಛೇದನಕ್ಕೆ ಪತಿ ಮನವಿ ಸಲ್ಲಿಸಿದ ನಂತರ ಪತ್ನಿ ತನ್ನ ಪತಿ ಮತ್ತು ಅತ್ತೆಯ ವಿರುದ್ಧ ಸೆಕ್ಷನ್ 498 (ಎ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣವನ್ನು ರದ್ದುಗೊಳಿಸಲು ತೆಲಂಗಾಣ ಹೈಕೋರ್ಟ್ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಪತಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪತಿ ಮತ್ತು ಆತನ ಕುಟುಂಬದ ವಿರುದ್ಧ ವೈಯಕ್ತಿಕ ದ್ವೇಷ ಸಾಧಿಸಲು ಕೆಲ ಮಹಿಳೆಯರು ಈ ನಿಬಂಧನೆಯನ್ನು ಸಾಧನವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಹೇಳಿ, ಪ್ರಕರಣವನ್ನು ರದ್ದುಗೊಳಿಸಿದೆ.

ಈ ನಿರ್ದಿಷ್ಟ ಪ್ರಕರಣದಲ್ಲಿ, ಕ್ರೌರ್ಯದ ಆರೋಪ ಹೊತ್ತಿರುವ ವ್ಯಕ್ತಿ ಮತ್ತು ಆತನ ಕುಟುಂಬದ ಪರವಾಗಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ ಮತ್ತು ಪ್ರಕರಣವನ್ನು ಮುಂದುವರಿಸಲು ಅನುಮತಿಸುವ ಹೈಕೋರ್ಟ್‌ ನಿರ್ಧಾರವನ್ನು ರದ್ದುಗೊಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT