ಡೇವಿಡ್ ಕೋಲ್ಮನ್ ಹೆಡ್ಲಿ 
ದೇಶ

ಅಮೆರಿಕಾದಲ್ಲಿ ಆಶ್ರಯ ಪಡೆದಿರುವ ಭಾರತದ 65 ಮಂದಿ ಅಪರಾಧಿಗಳ ಪೈಕಿ 26/11 ದಾಳಿಕೋರರು ಇದ್ದಾರೆ!

ಕೇಂದ್ರ ಗೃಹ ಸಚಿವಾಲಯ ಹಸ್ತಾಂತರ ಕೋರಿಕೆಗಳನ್ನು ಸಲ್ಲಿಸಿದ ಒಟ್ಟು 178 ಪರಾರಿಯಾದವರ ಪೈಕಿ 65 ಜನರು ಅಮೆರಿಕಾದಲ್ಲಿ ವಾಸಿಸುತ್ತಿದ್ದಾರೆ ಎಂದು ಗೃಹ ಇಲಾಖೆ ವರದಿಗಳು ಬಹಿರಂಗಪಡಿಸಿದೆ.

ನವದೆಹಲಿ: ಭಾರತದ ತನಿಖಾ ಏಜೆನ್ಸಿ ಗಳಿಗೆ ವಿವಿಧ ಪ್ರಕರಣಗಳಲ್ಲಿ ಬೇಕಾಗಿರುವ ಪ್ರತಿ ಮೂರನೇ ಒಬ್ಬ ಪರಾರಿಯಾದ ವ್ಯಕ್ತಿ ಅಮೆರಿಕದಲ್ಲಿ ಆಶ್ರಯ ಪಡೆಯುತ್ತಿದ್ದು, ಇದು ಆರೋಪಿಗಳು ಮತ್ತು ಭಯೋತ್ಪಾದಕರಿಗೆ ಸುರಕ್ಷಿತ ಸ್ಥಳವಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ (MHA) ಲೋಕಸಭೆಗೆ ತಿಳಿಸಿದೆ.

ಕೇಂದ್ರ ಗೃಹ ಸಚಿವಾಲಯ ಹಸ್ತಾಂತರ ಕೋರಿಕೆಗಳನ್ನು ಸಲ್ಲಿಸಿದ ಒಟ್ಟು 178 ಪರಾರಿಯಾದವರ ಪೈಕಿ 65 ಜನರು ಅಮೆರಿಕಾದಲ್ಲಿ ವಾಸಿಸುತ್ತಿದ್ದಾರೆ ಎಂದು ಗೃಹ ಇಲಾಖೆ ವರದಿಗಳು ಬಹಿರಂಗಪಡಿಸಿದೆ. ಅವರಲ್ಲಿ ಡೇವಿಡ್ ಕೋಲ್ಮನ್ ಹೆಡ್ಲಿ ಮತ್ತು ತಹವ್ವುರ್ ರಾಣಾ ಸೇರಿದ್ದಾರೆ. 26/11ರ ಮುಂಬೈ ಭಯೋತ್ಪಾದನಾ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಏಜೆನ್ಸಿಗಳಿಗೆ ಬೇಕಾಗಿರುವ ಲಷ್ಕರ್ ಕಾರ್ಯಕರ್ತರು ಇವರಾಗಿದ್ದಾರೆ.

ಅಪರಾಧಿಗಳು ಮತ್ತು ಭಯೋತ್ಪಾದಕರಿಗಾಗಿ ತನಿಖಾ ಸಂಸ್ಥೆಗಳಿಂದ ಬಾಕಿ ಉಳಿದಿರುವ 178 ಹಸ್ತಾಂತರ ಕೋರಿಕೆ ಪ್ರಕರಣಗಳಲ್ಲಿ 65 ಪ್ರಕರಣಗಳು ಅಮೆರಿಕಾ ಸರ್ಕಾರದ ಪರಿಗಣನೆಯಲ್ಲಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಮಂಗಳವಾರ ಲೋಕಸಭೆಗೆ ತಿಳಿಸಿದ್ದಾರೆ. 2002 ರಿಂದ 2018 ರವರೆಗೆ, ಅಮೆರಿಕಾ ಕೇವಲ 11 ಭಾರತದ ವಿನಂತಿ ಪ್ರಕರಣಗಳನ್ನು ಪುರಸ್ಕರಿಸಿದೆ.

ಅಮೆರಿಕಾ ಇನ್ನೂ ಪರಿಗಣನೆಗೆ ತೆಗೆದುಕೊಳ್ಳದ ಭಾರತದ ಪ್ರಕರಣಗಳಲ್ಲಿ ಹೆಡ್ಲಿಯನ್ನು ಹಸ್ತಾಂತರಿಸುವುದು ಕೂಡ ಸೇರಿದೆ. ರಾಣಾ ಹಸ್ತಾಂತರ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ದಾಖಲೆಗಳ ಪ್ರಕಾರ, ಭಾರತವು ಪರಾರಿಯಾದ ಅಪರಾಧಿಗಳನ್ನು ಹಸ್ತಾಂತರಿಸುವಂತೆ ಮಾಡಿದ 65 ಕೋರಿಕೆಗಳು ಯುಎಸ್ ಅಧಿಕಾರಿಗಳ ಪರಿಗಣನೆಯಲ್ಲಿವೆ ಎಂದು ಸಚಿವರು ತಿಳಿಸಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಕೇವಲ 23 ಮನವಿಗಳನ್ನು ಮಾತ್ರ ಪೂರೈಸಲಾಗಿದೆ.

ಕೇಂದ್ರ ಗೃಹ ಇಲಾಖೆ ಪ್ರಕಾರ, ಅಪರಾಧ ಅಥವಾ ಭಯೋತ್ಪಾದಕ ಚಟುವಟಿಕೆಗಳ ಶಂಕಿತ ಇತರರನ್ನು ಹಸ್ತಾಂತರಿಸಲು ಸರ್ಕಾರವು ಸಂಘಟಿತ ರಾಜತಾಂತ್ರಿಕ ಪ್ರಯತ್ನಗಳನ್ನು ಮಾಡುತ್ತಿದೆ. ಭಾರತವು 48 ದೇಶಗಳು/ಪ್ರದೇಶಗಳೊಂದಿಗೆ ಹಸ್ತಾಂತರ ಒಪ್ಪಂದಗಳಿಗೆ ಸಹಿ ಹಾಕಿದೆ ಮತ್ತು 12 ದೇಶಗಳೊಂದಿಗೆ ಒಪ್ಪಂದಗಳನ್ನು ಮಾಡಿಕೊಂಡಿದೆ ಎಂದು ನಿತ್ಯಾನಂದ ರೈ ಹೇಳಿದರು.

ಪ್ರಮುಖ ಹೆಸರುಗಳಲ್ಲಿ ಸತೀಂದರ್ಜಿತ್ ಸಿಂಗ್, ಅಲಿಯಾಸ್ ಗೋಲ್ಡಿ ಬ್ರಾರ್ ಮತ್ತು ಅನ್ಮೋಲ್ ಬಿಷ್ಣೋಯ್ ಮುಂತಾದ ದರೋಡೆಕೋರರು ಸೇರಿದ್ದಾರೆ, ಇವರುಗಳು 2022 ರಲ್ಲಿ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಮತ್ತು ಅಕ್ಟೋಬರ್ 2024 ರಲ್ಲಿ ಮಹಾರಾಷ್ಟ್ರದ ಮಾಜಿ ರಾಜಕಾರಣಿ ಬಾಬಾ ಸಿದ್ದಿಕ್ ಅವರ ಹತ್ಯೆಯ ಮಾಸ್ಟರ್ ಮೈಂಡ್ ಎಂದು ಅಧಿಕಾರಿಗಳು ನಂಬಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT