ಸುಪ್ರೀಂ ಕೋರ್ಟ್  
ದೇಶ

ಆತ್ಮಹತ್ಯೆಗೆ ಕಿರುಕುಳ ಪ್ರಚೋದನೆ ಕಾರಣ ಎಂದು ಸಾಬೀತುಪಡಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯ ಪತಿ ಮತ್ತು ಆಕೆಯ ಅತ್ತೆ-ಮಾವನನ್ನು ಕೇಸಿನಿಂದ ಮುಕ್ತಗೊಳಿಸಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಯ ಮೇಲೆ ತೀರ್ಪು ನೀಡಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಪಿ ಬಿ ವರಾಲೆ ಅವರನ್ನೊಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ.

ನವದೆಹಲಿ: ಆತ್ಮಹತ್ಯೆಗೆ ಪ್ರಚೋದನೆ ನೀಡುವ ಅಪರಾಧ ಪ್ರಕರಣಗಳಲ್ಲಿ ಯಾರನ್ನೇ ಆಗಲಿ ತಪ್ಪಿತಸ್ಥರನ್ನಾಗಿ ಮಾಡಲು ಕೇವಲ ಕಿರುಕುಳ ಕಾರಣವಾಗುವುದಿಲ್ಲ. ಪ್ರತ್ಯಕ್ಷ ಅಥವಾ ಪರೋಕ್ಷ ಪ್ರಚೋದನೆ ಬಗ್ಗೆ ಸ್ಪಷ್ಟ ಪುರಾವೆಗಳಿರಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ಆದೇಶ ನೀಡಿದೆ.

ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯ ಪತಿ ಮತ್ತು ಆಕೆಯ ಅತ್ತೆ-ಮಾವನನ್ನು ಕೇಸಿನಿಂದ ಮುಕ್ತಗೊಳಿಸಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಯ ಮೇಲೆ ತೀರ್ಪು ನೀಡಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಪಿ ಬಿ ವರಾಲೆ ಅವರನ್ನೊಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 498-ಎ (ವಿವಾಹಿತ ಮಹಿಳೆಯನ್ನು ಕ್ರೌರ್ಯಕ್ಕೆ ಒಳಪಡಿಸುವುದು) ಮತ್ತು 306 ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆಯ ಅಪರಾಧಗಳ ಬಗ್ಗೆ ನಿರ್ವಹಿಸುವ ಮತ್ತು 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಅಪರಾಧಗಳನ್ನು ಒಳಗೊಂಡಂತೆ 2021 ರಲ್ಲಿ ದಾಖಲಿಸಲಾಗಿದ್ದ ಪ್ರಕರಣ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 498-ಎ ಅಡಿಯಲ್ಲಿ ಮೇಲ್ಮನವಿದಾರರ ವಿರುದ್ಧದ ಆರೋಪವನ್ನು ಎತ್ತಿ ಹಿಡಿದಿದ್ದರೂ, ಪೀಠವು ಮೂವರನ್ನು ಸೆಕ್ಷನ್ 306 ರ ಅಡಿಯಲ್ಲಿ ಆರೋಪದಿಂದ ಬಿಡುಗಡೆ ಮಾಡಿದೆ.

ಐಪಿಸಿಯ ಸೆಕ್ಷನ್ 306 ಮತ್ತು 498-ಎ ಸೇರಿದಂತೆ ಆಪಾದಿತ ಅಪರಾಧಗಳಲ್ಲಿ ಮಹಿಳೆಯ ತಂದೆ ಆಕೆಯ ಪತಿ ಮತ್ತು ಅತ್ತೆ-ಮಾವಂದಿರ ವಿರುದ್ಧ ಪ್ರಥಮ ಮಾಹಿತಿ ವರದಿಯನ್ನು (FIR) ದಾಖಲಿಸಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮಹಿಳೆ 2009 ರಲ್ಲಿ ವಿವಾಹವಾಗಿದ್ದು, ಮದುವೆಯಾದ ಮೊದಲ ಐದು ವರ್ಷಗಳವರೆಗೆ ದಂಪತಿಗೆ ಮಗು ಜನಿಸಿರಲಿಲ್ಲ. ಇದರಿಂದಾಗಿ ಅವರು ದೈಹಿಕ ಮತ್ತು ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದರು ಎಂದು ಪೀಠವು ಗಮನಿಸಿತು. 2021 ರ ಏಪ್ರಿಲ್‌ನಲ್ಲಿ ಮಹಿಳೆಯ ತಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು ಎಂಬ ವಿಷಯವನ್ನು ನ್ಯಾಯಪೀಠ ಗಮನಿಸಿತು.

ಅವರ ವಿರುದ್ಧ ಐಪಿಸಿ ಸೆಕ್ಷನ್ 306 ಮತ್ತು 498-ಎ ಅಡಿಯಲ್ಲಿ ಆರೋಪಗಳನ್ನು ದಾಖಲಿಸಲು ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಮದುವೆಯಾದ 12 ವರ್ಷಗಳ ನಂತರ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೀಠವು ಗಮನಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT