ಸಂಗ್ರಹ ಚಿತ್ರ 
ದೇಶ

Lucky Baskhar Cinema: ಹಣ ಸಂಪಾದಿಸಿ ವಾಪಸ್ ಬರ್ತೀವಿ; ಸಿನಿಮಾ ವೀಕ್ಷಿಸಿ ಹಾಸ್ಟೆಲ್‌ ಬಿಟ್ಟು ಹೋದ ವಿದ್ಯಾರ್ಥಿಗಳು, Video!

ಓರ್ವ ಸಾಮಾನ್ಯ ವ್ಯಕ್ತಿ ಬಡತನದಿಂದ ಯಶಸ್ಸಿನತ್ತ ಸಾಗುವ ಕಥೆಯನ್ನು ಈ ಚಿತ್ರದಲ್ಲಿ ಅದ್ಭುತವಾಗಿ ಚಿತ್ರಿಸಲಾಗಿದೆ. ಈ ಚಿತ್ರ ಮಕ್ಕಳ ಮನಸ್ಸಿನಲ್ಲಿ ಸಾಕಷ್ಟು ಪ್ರಭಾವ ಬೀರಿದೆ.

ನಟ ದುಲ್ಕರ್ ಸಲ್ಮಾನ್ ಅಭಿನಯದ ಲಕ್ಕಿ ಭಾಸ್ಕರ್ ಸಿನಿಮಾ ಗಲ್ಲಾಪಟ್ಟಿಗೆಯಲ್ಲಿ 80 ಕೋಟಿಗೂ ಹೆಚ್ಚು ಹಣ ಸಂಪಾದಿಸಿದೆ. ಚಿತ್ರದಲ್ಲಿ ನಾಯಕನಟ ತನ್ನ ಕಠಿಣ ಪರಿಶ್ರಮ ಮತ್ತು ಬುದ್ಧಿವಂತಿಕೆಯ ಮೂಲಕ ದಿಢೀರ್ ಕೋಟ್ಯಾಧಿಪತಿಯಾಗುತ್ತಾನೆ. ಈ ಚಿತ್ರದಿಂದ ಪ್ರೇರಿತರಾದ ನಾಲ್ವರು ಶಾಲಾ ವಿದ್ಯಾರ್ಥಿಗಳು ನಾಪತ್ತೆಯಾಗಿರುವ ವಿಚಿತ್ರ ಹಾಗೂ ಆಘಾತಕಾರಿ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ.

ಓರ್ವ ಸಾಮಾನ್ಯ ವ್ಯಕ್ತಿ ಬಡತನದಿಂದ ಯಶಸ್ಸಿನತ್ತ ಸಾಗುವ ಕಥೆಯನ್ನು ಈ ಚಿತ್ರದಲ್ಲಿ ಅದ್ಭುತವಾಗಿ ಚಿತ್ರಿಸಲಾಗಿದೆ. ಈ ಚಿತ್ರ ಮಕ್ಕಳ ಮನಸ್ಸಿನಲ್ಲಿ ಸಾಕಷ್ಟು ಪ್ರಭಾವ ಬೀರಿದೆ. ವರದಿಗಳ ಪ್ರಕಾರ, ಚರಣ್ ತೇಜ, ರಘು, ಕಾರ್ತಿಕ್ ಮತ್ತು ಕಿರಣ್ ಕುಮಾರ್ ಎಂದು ಗುರುತಿಸಲಾದ ನಾಲ್ವರು ಹುಡುಗರು ಮಹಾರಾಣಿಪೇಟೆಯ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದರು. ಇವರೆಲ್ಲರೂ 9ನೇ ತರಗತಿ ವಿದ್ಯಾರ್ಥಿಗಳಾಗಿದ್ದು, ಚಿತ್ರದ ಪಾತ್ರಧಾರಿ ಭಾಸ್ಕರ್ ಅವರಂತೆ ಅಭ್ಯುದಯ ಮತ್ತು ಯಶಸ್ಸನ್ನು ಸಾಧಿಸುವ ಹಂಬಲದಿಂದ ಹಾಸ್ಟೆಲ್‌ನಿಂದ ಓಡಿಹೋಗಿದ್ದಾರೆ.

ಚಿತ್ರದಿಂದ ಪ್ರೇರಿತರಾಗಿ ಕಾಣೆಯಾದ ಮಕ್ಕಳು ಹಾಸ್ಟೆಲ್ ಗೇಟ್ ಹತ್ತುತ್ತಿರುವುದು ವೈರಲ್ ಆಗಿರುವ ಸಿಸಿಟಿವಿ ವಿಡಿಯೋದಲ್ಲಿ ಕಂಡುಬಂದಿದೆ. ವೀಡಿಯೊದಲ್ಲಿ, ಬೆಳಗ್ಗೆ 6.20ರ ಸುಮಾರಿಗೆ ಹುಡುಗರು ತಮ್ಮ ಬ್ಯಾಗ್‌ಗಳ ಗೇಟ್ ಹತ್ತಿ ಓಡಿ ಹೋಗಿದ್ದಾರೆ. ಹಾಸ್ಟೆಲ್‌ನಿಂದ ಹೊರಡುವ ಮೊದಲು, ಮಕ್ಕಳು ತಮ್ಮ ಸ್ನೇಹಿತರಿಗೆ ಚಿತ್ರದಲ್ಲಿ ತೋರಿಸಿರುವ ವಿವಿಧ ಕಾರುಗಳನ್ನು ಖರೀದಿಸಲು ಸಾಕಷ್ಟು ಹಣವನ್ನು ಗಳಿಸುವವರೆಗೆ ಹಿಂತಿರುಗುವುದಿಲ್ಲ ಎಂದು ಹೇಳಿದ್ದರಂತೆ. ನಾಪತ್ತೆಯಾದ ನಂತರ ವಿದ್ಯಾರ್ಥಿಗಳ ಪೋಷಕರು ಸ್ಥಳೀಯ ಪೊಲೀಸರನ್ನು ಸಂಪರ್ಕಿಸಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ರೈಲ್ವೆ ನಿಲ್ದಾಣಗಳು, ಬಸ್ ಟರ್ಮಿನಲ್‌ಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸ್ ಅಧಿಕಾರಿಗಳು ಈ ವಿದ್ಯಾರ್ಥಿಗಳನ್ನು ಹುಡುಕುತ್ತಿದ್ದಾರೆ.

'ಲಕ್ಕಿ ಭಾಸ್ಕರ್' ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಹಿಟ್ ಎಂದು ಸಾಬೀತುಪಡಿಸಿತು ಮತ್ತು ಅಂದಾಜು 80 ಕೋಟಿ ಗಳಿಸಿತು. ಚಿತ್ರವು ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಮೆಚ್ಚುಗೆ ಪಡೆದಿದೆ. ಚಿತ್ರದಲ್ಲಿ ದುಲ್ಕರ್ ಸಲ್ಮಾನ್ ಬ್ಯಾಂಕ್ ಉದ್ಯೋಗಿಯಾಗಿ ನಟಿಸಿದ್ದಾರೆ. ಚಿತ್ರದಲ್ಲಿ ಭಾಸ್ಕರ್ ತನ್ನ ಕಠಿಣ ಪರಿಶ್ರಮ ಮತ್ತು ಬುದ್ಧಿವಂತಿಕೆಯ ಮೂಲಕ ಕೋಟ್ಯಾಧಿಪತಿಯಾಗುತ್ತಾನೆ. ಆದಾಗ್ಯೂ, ಈ ಚಲನಚಿತ್ರವು ಸಂಪೂರ್ಣವಾಗಿ ಕಾಲ್ಪನಿಕವಾಗಿದೆ. ಮನರಂಜನೆಯ ಉದ್ದೇಶಗಳಿಗಾಗಿ ಮಾತ್ರ ಮಾಡಲಾಗಿದೆ. ನವೆಂಬರ್ 28ರಂದು ನೆಟ್‌ಫ್ಲಿಕ್ಸ್‌ನಲ್ಲಿ OTT ಬಿಡುಗಡೆಯಾದ ನಂತರ ಚಿತ್ರದ ಜನಪ್ರಿಯತೆ ಮತ್ತಷ್ಟು ಹೆಚ್ಚಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT