ಟಿಪ್ಪು ಸುಲ್ತಾನ್ 
ದೇಶ

ಟಿಪ್ಪು ಸುಲ್ತಾನ್ ಜಯಂತಿ ನಿಷೇಧಿಸಲಾಗಿದೆಯೇ?: ಹೈಕೋರ್ಟ್

ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಕಳವಳಗಳು ರ‍್ಯಾಲಿಗೆ ಅನುಮತಿ ನಿರಾಕರಿಸಲು ಕಾರಣವಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಪುಣೆ: 18ನೇ ಶತಮಾನದ ಮೈಸೂರು ದೊರೆ ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆಯನ್ನು ನಿಷೇಧಿಸಲಾಗಿದೆಯೇ? ಪ್ರಶ್ನಿಸಿದ ಬಾಂಬೆ ಹೈಕೋರ್ಟ್, ಈ ಟಿಪ್ಪು ಸುಲ್ತಾನ್ ಜಯಂತಿ ಸ್ಮರಣಾರ್ಥ ರ‍್ಯಾಲಿಯನ್ನು ನಡೆಸಲು ಕೋರಿದ ಮನವಿಯ ಬಗ್ಗೆ ನಿರ್ಧರಿಸುವಂತೆ ಪುಣೆ ಗ್ರಾಮಾಂತರ ಪೊಲೀಸರಿಗೆ ಗುರುವಾರ ಸೂಚಿಸಿದೆ.

ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಕಳವಳಗಳು ರ‍್ಯಾಲಿಗೆ ಅನುಮತಿ ನಿರಾಕರಿಸಲು ಕಾರಣವಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ರ‍್ಯಾಲಿಗೆ ಅನುಮತಿ ನೀಡುವಂತೆ ಪೊಲೀಸರಿಗೆ ನಿರ್ದೇಶನ ಕೋರಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷದ ಪುಣೆ ಘಟಕದ ಅಧ್ಯಕ್ಷ ಫೈಯಾಜ್ ಶೇಖ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ದೇರೆ ಮತ್ತು ಎಸ್ ಜಿ ಡಿಗೆ ಅವರ ವಿಭಾಗೀಯ ಪೀಠ, ಟಿಪ್ಪು ಸುಲ್ತಾನ್ ಜಯಂತಿ ನಿಷೇಧಿಸಲಾಗಿದೆಯೇ? ಎಂದು ಪ್ರಶ್ನಿಸಿದೆ.

ಮನವಿಯ ಪ್ರಕಾರ, ಪುಣೆ ಗ್ರಾಮಾಂತರ ಪೊಲೀಸರು ರ‍್ಯಾಲಿಗೆ ಅನುಮತಿ ನೀಡಲು ನಿರಾಕರಿಸಿದ್ದು, ತಮ್ಮ ಖಾಸಗಿ ಸ್ಥಳದಲ್ಲಿ ಕಾರ್ಯಕ್ರಮಗಳನ್ನು ಆಚರಿಸುವಂತೆ ಅರ್ಜಿದಾರರಿಗೆ ಸೂಚಿಸಲಾಗಿದೆ.

ಇಂತಹ ರ‍್ಯಾಲಿಗಳಿಂದ ಕಾನೂನು ಸುವ್ಯವಸ್ಥೆಗೆ ತೊಂದರೆಯಾಗಲಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT