ಜಗದೀಪ್ ಧಂಖರ್-ಮಲ್ಲಿಕಾರ್ಜುನ್ ಖರ್ಗೆ PTI
ದೇಶ

ರಾಜ್ಯಸಭೆಯಲ್ಲಿ 'ಪ್ರಜಾಪ್ರಭುತ್ವ ದಮನ' ಸಾಮಾನ್ಯವಾಗಿದೆ: ಧಂಖರ್ ವಿರುದ್ಧ ಖರ್ಗೆ ಮತ್ತೆ ವಾಗ್ದಾಳಿ

ಜಗದೀಪ್ ಧಂಖರ್ ಅವರ ಪಕ್ಷಪಾತಿ ಧೋರಣೆಯನ್ನು ಪ್ರಶ್ನಿಸಿದ ಖರ್ಗೆ, ಸಭಾಪತಿಗಳು ಪ್ರತಿಪಕ್ಷಗಳ ಸದಸ್ಯರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು "ನಿರಂತರವಾಗಿ ದಮನ ಮಾಡುತ್ತಾ ಬಂದಿದ್ದಾರೆ.

ನವದೆಹಲಿ: ರಾಜ್ಯಸಭೆಯಲ್ಲಿ "ಪ್ರಜಾಪ್ರಭುತ್ವವನ್ನು ದಮನ" ಮಾಡುವುದು ಸಾಮಾನ್ಯ ಎನ್ನುವಂತಾಗಿದೆ ಎಂದು ಪ್ರತಿಪಾದಿಸಿದ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ಸಭಾಪತಿ ಜಗದೀಪ್ ಧಂಖರ್ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಜಗದೀಪ್ ಧಂಖರ್ ಅವರ ಪಕ್ಷಪಾತಿ ಧೋರಣೆಯನ್ನು ಪ್ರಶ್ನಿಸಿದ ಖರ್ಗೆ, ಸಭಾಪತಿಗಳು ಪ್ರತಿಪಕ್ಷಗಳ ಸದಸ್ಯರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು "ನಿರಂತರವಾಗಿ ದಮನ ಮಾಡುತ್ತಾ ಬಂದಿದ್ದಾರೆ. ಬೇಕೆಂದೇ ಸತಾಯಿಸುವುದು, ಅನಗತ್ಯವಾಗಿ ಒತ್ತಡ ಹಾಕುವುದು, ನ್ಯಾಯಯುತವಲ್ಲದ ಟೀಕೆಗಳನ್ನು ಮಾಡುವುದು. ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳ ಕುರಿತು ಚರ್ಚೆಗೆ ನಿರಂತರವಾಗಿ ನಿರಾಕರಿಸುತ್ತಿದ್ದಾರೆ" ಎಂದು ಕಾಂಗ್ರೆಸ್ ಮುಖ್ಯಸ್ಥರು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್ ಪಕ್ಷಗಳು ಧಂಖರ್ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಮಂಡಿಸಲು ರಾಜ್ಯಸಭೆಯಲ್ಲಿ ನೋಟಿಸ್ ಸಲ್ಲಿಸಿದ ನಂತರ ಖರ್ಗೆ, ಉಪ ರಾಷ್ಟ್ರಪತಿಗಳು "ಅತ್ಯಂತ ಪಕ್ಷಪಾತ" ಎಂದು ಮತ್ತೊಮ್ಮೆ ಕಟುವಾಗಿ ಟೀಕಿಸಿದ್ದಾರೆ.

ಇಂದು ಎಕ್ಸ್‌ನಲ್ಲಿ ಬರೆದ ಪೋಸ್ಟ್‌ನಲ್ಲಿ, ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ "ಮಾತನಾಡುವ ಹಕ್ಕು" ಮತ್ತು "ಅಭಿಪ್ರಾಯ ವ್ಯಕ್ತಪಡಿಸುವ" ಹಕ್ಕನ್ನು ಕಿತ್ತುಕೊಳ್ಳಲಾಗಿದೆ ಎಂದು ಖರ್ಗೆ ಆರೋಪಿಸಿದ್ದಾರೆ.

"ರಾಜ್ಯಸಭೆಯಲ್ಲಿ 'ಪ್ರಜಾಪ್ರಭುತ್ವ ದಮನ ಮಾಡಲಾಗುತ್ತಿದೆ. ಸತ್ಯವನ್ನು ತುಳಿಯಲಾಗುತ್ತಿದೆ. ನಿರಂಕುಶಾಧಿಕಾರದ ರೂಢಿಯಾಗಿ ಮಾರ್ಪಟ್ಟಿರುವಾಗ... ಸ್ಥಾಪಿತ 'ಸಂಸದೀಯ ಪದ್ಧತಿಗಳ' ಮೇಲಿನ ಆಕ್ರಮಣವನ್ನು ಉತ್ತೇಜಿಸಲಾಗುತ್ತಿದೆ. 'ನೈತಿಕ ನಡವಳಿಕೆ' ರಾಜ್ಯಸಭೆಯಲ್ಲಿ ದಿವಾಳಿಯಾಗುತ್ತಿದೆ ಎಂದು ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT