ಲೋಕಸಭೆ  
ದೇಶ

ಆಡಳಿತ-ವಿರೋಧ ಪಕ್ಷಗಳ ನಡುವೆ ಮುಖಾಮುಖಿ: ಇಂದು ಲೋಕಸಭೆಯಲ್ಲಿ ಸಂವಿಧಾನ ಕುರಿತು ಚರ್ಚೆ

ಇಂದು ಮತ್ತು ನಾಳೆ ಲೋಕಸಭೆಯಲ್ಲಿ ಚರ್ಚೆ ನಡೆಯಲಿದ್ದು, ಡಿಸೆಂಬರ್ 16 ಮತ್ತು 17 ರಂದು ರಾಜ್ಯಸಭೆಯಲ್ಲಿ ಚರ್ಚೆ ನಡೆಯಲಿದೆ. ಭಾರತೀಯ ಜನತಾ ಪಕ್ಷ ಮತ್ತು ಕಾಂಗ್ರೆಸ್ ನಡುವೆ ಮಾತಿನ ಚಕಮಕಿ ನಡೆದಿದೆ.

ನವದೆಹಲಿ: ಸಂವಿಧಾನದ 75ನೇ ವರ್ಷದ ಸ್ಮರಣಾರ್ಥ ಸಂವಿಧಾನದ ಮೇಲೆ ಪ್ರಸಕ್ತ ದೇಶದಲ್ಲಿ ನಡೆಯುತ್ತಿರುವ ಬಿಸಿಬಿಸಿ ಐತಿಹಾಸಿಕ ಚರ್ಚೆಗೆ ವೇದಿಕೆ ಸಜ್ಜಾಗಿದೆ, ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ರಾಜಕೀಯ ಉದ್ವಿಗ್ನತೆಯ ನಡುವೆ, ಸಂಸತ್ತಿನಲ್ಲಿ ಆಗಾಗ್ಗೆ ಅಡಚಣೆಗಳು ಮತ್ತು ಉಪ ರಾಷ್ಟ್ರಪತಿಗಳನ್ನು ವಜಾಗೊಳಿಸುವ ಬಗ್ಗೆ ಇಂಡಿಯಾ ಬಣದಿಂದ ಒತ್ತಾಯ ಕೇಳಿಬರುತ್ತಿದೆ.

ಇಂದು ಮತ್ತು ನಾಳೆ ಲೋಕಸಭೆಯಲ್ಲಿ ಚರ್ಚೆ ನಡೆಯಲಿದ್ದು, ಡಿಸೆಂಬರ್ 16 ಮತ್ತು 17 ರಂದು ರಾಜ್ಯಸಭೆಯಲ್ಲಿ ಚರ್ಚೆ ನಡೆಯಲಿದೆ. ಭಾರತೀಯ ಜನತಾ ಪಕ್ಷ ಮತ್ತು ಕಾಂಗ್ರೆಸ್ ನಡುವೆ ಮಾತಿನ ಚಕಮಕಿ ನಡೆದಿದೆ, ಅಮೆರಿಕದ ಬಿಲಿಯನೇರ್ ಜಾರ್ಜ್ ಸೊರೊಸ್‌ಗೆ ವಿರುದ್ಧ ಕೇಳಿಬರುತ್ತಿರುವ ಆರೋಪಗಳು ಮತ್ತು ಅದಾನಿ ಗ್ರೂಪ್ ವಿರುದ್ಧದ ಲಂಚದ ಆರೋಪಗಳ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಮಧ್ಯಾಹ್ನ ಎರಡು ದಿನಗಳ ಚರ್ಚೆಯನ್ನು ಪ್ರಾರಂಭಿಸುವ ಸಾಧ್ಯತೆಯಿದ್ದರೆ, ಬಿಜೆಪಿ ಮತ್ತು ಕಾಂಗ್ರೆಸ್ ತಮ್ಮ ಸದಸ್ಯರಿಗೆ ಸದನದಲ್ಲಿ ಹಾಜರಾಗಲು 'ಮೂರು ಸಾಲಿನ ವಿಪ್' ಜಾರಿಗೊಳಿಸಿವೆ.

ಪ್ರಧಾನಿ ನರೇಂದ್ರ ಮೋದಿ ಅವರು ಕೆಳಮನೆಯನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಿಸೆಂಬರ್ 16 ರಿಂದ ರಾಜ್ಯಸಭೆಯಲ್ಲಿ ಚರ್ಚೆಗೆ ಚಾಲನೆ ನೀಡುವ ಸಾಧ್ಯತೆಯಿದೆ.

ಮೂಲಗಳ ಪ್ರಕಾರ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಚರ್ಚೆಯ ವೇಳೆ ಚೊಚ್ಚಲ ಭಾಷಣ ಮಾಡಲಿದ್ದಾರೆ. ಪ್ರಿಯಾಂಕಾ ಗಾಂಧಿ ಹೊರತಾಗಿ ರಾಹುಲ್ ಗಾಂಧಿ ಮತ್ತು ಗೌರವ್ ಗೊಗೊಯ್ ಚರ್ಚೆಯಲ್ಲಿ ಭಾಗವಹಿಸಲಿದ್ದಾರೆ. ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್, ಡಿಎಂಕೆಯ ಎ ರಾಜಾ ಮತ್ತು ಟಿಆರ್ ಬಾಲು ಕೂಡ ವಿರೋಧ ಪಕ್ಷದ ಪಾಳಯದಿಂದ ಚರ್ಚೆಯಲ್ಲಿ ಭಾಗವಹಿಸಲಿದ್ದಾರೆ.

ಬಿಜೆಪಿ, ಕಾಂಗ್ರೆಸ್ ವಿಪ್ ಜಾರಿ

ಭಾರತದ ಸಂವಿಧಾನದ ಅಂಗೀಕಾರದ 75 ನೇ ವಾರ್ಷಿಕೋತ್ಸವವನ್ನು ಇಂದು ಮತ್ತು ನಾಳೆ ಲೋಕಸಭೆಯಲ್ಲಿ ಆಚರಿಸಲಾಗುವುದು ಎಂದು ಲೋಕಸಭೆಯಲ್ಲಿರುವ ಎಲ್ಲಾ ಬಿಜೆಪಿ ಸದಸ್ಯರಿಗೆ ಈ ಮೂಲಕ ತಿಳಿಸಲಾಗಿದೆ. ಬಿಜೆಪಿಯ ಎಲ್ಲಾ ಸದಸ್ಯರು ಎರಡೂ ದಿನ ಸದನದಲ್ಲಿ ಸಕಾರಾತ್ಮಕವಾಗಿ ಹಾಜರಿದ್ದು ಸರ್ಕಾರದ ನಿಲುವನ್ನು ಬೆಂಬಲಿಸುವಂತೆ ವಿನಂತಿಸಲಾಗಿದೆ ಎಂದು ಬಿಜೆಪಿ ಹೇಳಿಕೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?