ಪುರಿ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ- ಮೋದಿ, ಯೋಗಿ  online desk
ದೇಶ

ಸದೃಢ ನ್ಯಾಯಾಂಗ ವ್ಯವಸ್ಥೆ ಇದ್ದಿದ್ದರೆ Modi, Yogi ಜೈಲಿಗೆ; 2014ರಲ್ಲಿ ಮೋದಿ ಬೆಂಬಲಿಸಿ ತಪ್ಪು ಮಾಡಿದೆ- ಪುರಿ ಶಂಕರಾಚಾರ್ಯ

ಉಜ್ಜೈನ್ ನ ಮಹಾಕಾಲೇಶ್ವರ ದೇವಾಲಯ ಆಡಳಿತ ಮಂಡಳಿ ಆಯೋಜಿಸಿದ್ದ ಧರ್ಮಸಭೆಯಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಪುರಿ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ 2014 ರಲ್ಲಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿದ್ದು ತಾವು ಮಾಡಿದ ತಪ್ಪು ಎಂದು ಹೇಳಿದ್ದಾರೆ.

ಉಜ್ಜೈನ್: ರಾಮಮಂದಿರದಲ್ಲಿ ಪ್ರಧಾನಿ ಮೋದಿ ಮೂರ್ತಿ ಪ್ರತಿಷ್ಠಾಪನೆ ಮಾಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಕಾರ್ಯಕ್ರಮದಿಂದ ದೂರ ಉಳಿದಿದ್ದ ಪುರಿ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ ಈಗ ಮತ್ತೊಮ್ಮೆ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.

ಉಜ್ಜೈನ್ ನ ಮಹಾಕಾಲೇಶ್ವರ ದೇವಾಲಯ ಆಡಳಿತ ಮಂಡಳಿ ಆಯೋಜಿಸಿದ್ದ ಧರ್ಮಸಭೆಯಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಪುರಿ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ, ಭಾರತದಲ್ಲಿ ಸದೃಢ ನ್ಯಾಯಾಂಗ ವ್ಯವಸ್ಥೆ ಇದ್ದಿದ್ದರೆ, ಈ ವೇಳೆಗೆ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಜೈಲಿನಲ್ಲಿರುತ್ತಿದ್ದರು ಎಂದು ಹೇಳಿದ್ದಾರೆ.

ಇದೇ ವೇಳೆ 2014 ರಲ್ಲಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿದ್ದು ತಾವು ಮಾಡಿದ ತಪ್ಪು ಎಂದು ಪುರಿ ಶಂಕರಾಚಾರ್ಯ ಹೇಳಿದ್ದಾರೆ. 2014 ರಲ್ಲಿ ಮೋದಿ ಪ್ರಧಾನಿಯಾಗುವುದಕ್ಕೂ ಮೊದಲು ಪುರಿಗೆ ತೆರಳಿ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ ಅವರ ಆಶೀರ್ವಾದ ಪಡೆದಿದ್ದರು.

ಇನ್ನು ನಿಶ್ಚಲಾನಂದ ಸರಸ್ವತಿ ಅವರ ಈ ಹೇಳಿಕೆಗಳ ವರದಿಗಳನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಬಿಜೆಪಿ ನಾಯಕ ಸುಬ್ರಹ್ಮಣಿಯನ್ ಸ್ವಾಮಿ, ನಿರ್ಭೀತ ಜಗದ್ಗುರು ಎಂದು ನಿಶ್ಚಲಾನಂದ ಸರಸ್ವತಿ ಅವರನ್ನು ಹೊಗಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ ಸಂಸದೆ ಕಾಕೋಲಿ ಘೋಷ್ ರಾಜೀನಾಮೆ

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

KPCC ಮೇಜರ್ ಸರ್ಜರಿ: ನಟಿ ಭಾವನಾ, ನಿಕೇತ್ ರಾಜ್ ಮೌರ್ಯ ಸೇರಿ 31 ಪದಾಧಿಕಾರಿಗಳಿಗೆ ಗೇಟ್‌ಪಾಸ್‌!

SCROLL FOR NEXT